ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ
ಬೆಂಗಳೂರು: ಬೆಂಗಳೂರು ಬಂದ್ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾವೇರಿಗಾಗಿ ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.
ಈ ಸಂದರ್ಭ ಮಾತನಾಡಿದ ಶಾಂತಕುಮಾರ್, ಪೊಲೀಸರು ಗೂಂಡಾಗಿರಿ ಮೂಲಕ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನ ಜನತೆ ಇದನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಬೀದಿಗಿಳಿಯಬೇಕು. ಸರ್ಕಾರಕ್ಕೆ ಸರಿಯಾದ ಪಾಠವನ್ನು ಕಲಿಸಬೇಕು. ಕರ್ನಾಟಕದ ರೈತರು ನಮಗೆ ಬೆಂಬಲ ನೀಡಿ ರಸ್ತೆಗಿಳಿಯಬೇಕು ಎಂದು ಮನವಿ ಮಾಡಿಕೊಂಡರು.








































































































































































































































































































































































































































































































































































































































































































































































































































































































































































































































































































































