September 14, 2026

ಬಳುಕುವ ಬಳ್ಳಿಯಂತೆ ಮಿಂಚಿದ ಶ್ರೀಲೀಲಾ

ಕನ್ನಡದ ನಟಿಮಣಿ ಶ್ರೀಲೀಲಾ ತೆಲುಗು ನೆಲದಲ್ಲಿ ಮೋಡಿ ಮಾಡ್ತಿದ್ದಾರೆ. ಸದ್ಯ ಶೋಲ್ಡರ್‌ಲೆಸ್ ಡ್ರೆಸ್ ಫೋಟೋ ಶೇರ್ ಮಾಡುವ ಮೂಲಕ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಶೂಟ್ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.  ಪಿಂಕ್ ಮತ್ತು ಬ್ಲ್ಯಾಕ್ ಮಿಶ್ರಿತ ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಕಿಸ್ ಬೆಡಗಿ ಶ್ರೀಲೀಲಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಚೆಂದದ ಡ್ರೆಸ್‌ಗೆ ಸಿಂಪಲ್ ಜ್ಯುವೆಲ್ಲರಿ ಹಾಕಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಸಖತ್ ಗ್ಲ್ಯಾಮರಸ್‌ ಆಗಿ ಪೋಸ್ ಕೊಟ್ಟಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. […]

ISIS ಉಗ್ರನೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಯುವಕನಿಗೆ ಆರ್ಥಿಕ ಸಂಕಷ್ಟ

ಯಾದಗಿರಿ: ಉಗ್ರನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರದ ವ್ಯಕ್ತಿಯೊಬ್ಬನನ್ನ ಜಾರ್ಖಂಡ್‌ನ ಎನ್‌ಐಎ ತಂಡ ವಿಚಾರಣೆ ನಡೆಸಿತ್ತು. ರಾಂಚಿಯ ಇನ್ಸ್ಪೆಕ್ಟರ್ ಸಚ್ಚಿದಾನಂದ ಶರ್ಮಾ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಶಹಾಪುರಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು. ಅಧಿಕಾರಿಗಳು ವಿಚಾರಣೆ ನಡೆಸಿ ತೆರಳಿದ ಬಳಿಕ ಆತ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದು ತಿಳಿದುಬಂದಿದೆ. ಉಗ್ರನೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 20 ರಂದು ರಾಂಚಿಯ NIA ಕಚೇರಿಗೆ ವಿಚಾರಣೆಗೆ ಬರುವಂತೆ ಅಧಿಕಾರಿಗಳು ಯುವಕನಿಗೆ ನೋಟಿಸ್ ಕಳುಹಿಸಿದ್ದರು. […]

2 ತಿಂಗಳ ಹಿಂದೆಯೇ ಚೈತ್ರಾ ಕುಂದಾಪುರ ವಿಚಾರ ನನ್ನ ಗಮನಕ್ಕೆ ಬಂದಿತ್ತು

ಮಂಗಳೂರು: ಚೈತ್ರಾ ಕುಂದಾಪುರ ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು. ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ […]

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ

ನವದೆಹಲಿ: ಹೊಸ ಮತದಾರರ ಪಟ್ಟಿ ದೃಢೀಕರಣಕ್ಕಾಗಿ ಮತದಾರರ ಆಧಾರ್ ಸಂಖ್ಯೆಯ ವಿವರಗಳನ್ನು ಕೇಳುವ 6 ಹಾಗೂ 6ಬಿ ನಮೂನೆಗಳಲ್ಲಿ (ಇ-ರೋಲ್‌ನಲ್ಲಿ ನೋಂದಣಿಗಾಗಿ) ಸೂಕ್ತವಾದ ಸ್ಪಷ್ಟ ಬದಲಾವಣೆಗಳನ್ನು ಮಾಡುವುದಾಗಿ ಭಾರತದ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ತಿಳಿಸಿದೆ. ಚುನಾವಣಾ ಆರೋಗದ ಪರ ಹಾಜರಾದ ಹಿರಿಯ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ಮತದಾರರ ನೋಂದಣಿ (ತಿದ್ದುಪಡಿ) ನಿಯಮ 26-ಬಿ 2022ರ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು […]

ಕಾವೇರಿ ಕಿಚ್ಚು – ಶನಿವಾರ ಮಂಡ್ಯ ಬಂದ್‌ಗೆ ಕರೆ

ಮಂಡ್ಯ: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ (ಇಂದು) ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್‌ ನಿರ್ಧಾರ ಕೈಗೊಂಡಿದೆ. ಶುಕ್ರವಾರ (ಸೆ.22) ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್‌ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ […]

ಕಾವೇರಿ ಪ್ರತಿಭಟನೆ ವೈಲೆಂಟ್ ಆದ್ರೆ ಕಾನೂ‌ನು ಕ್ರಮ

ಬೆಂಗಳೂರು: ಕಾವೇರಿ ನೀರಿಗಾಗಿ ಹೋರಾಟ ಮಾಡುವವರು ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಪ್ರತಿಭಟನೆ ವೈಲೆಂಟ್ ಆದ್ರೆ ಕಾನೂ‌ನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ (Supreme Court) ತೀರ್ಪಿನಿಂದ ಮಂಡ್ಯ ಸೇರಿದಂತೆ ಅನೇಕ ಕಡೆ ಪ್ರತಿಭಟನೆ ಆಗ್ತಿದೆ. ಪ್ರತಿಭಟನೆ ಮಾಡೋದು ಅವರ ಹಕ್ಕು. ಆದರೆ ಪ್ರತಿಭಟನೆ ವೈಲೆಂಟ್ ಆಗಬಾರದು. ಅಹಿತಕರ ಘಟನೆ ಆದ್ರೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ತಮಿಳುನಾಡಿಗೆ ನೀರು ಬಿಡಬೇಕು ಎಂಬ […]

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ನಾಯಕಿನಾ? 

ಸಮಂತಾ ನಟನೆಯಿಂದ ಕೊಂಚ ಬ್ರೇಕ್ ತೆಗೆದುಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇತ್ತೀಚೆಗೆ ಸಮಂತಾ ಬಾಲಿವುಡ್‌ನ ಬಿಗ್ ಸ್ಟಾರ್ ಸಲ್ಮಾನ್ ಖಾನ್‌ಗೆ ನಾಯಕಿಯಾಗ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಸುದ್ದಿ ನಿಜಾನಾ? ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ‘ ಶೇರ್‌ಷಾ’ ನಿರ್ದೇಶಕ ವಿಷ್ಣುವರ್ಧನ್ ಅವರ ಮುಂಬರುವ ಸಿನಿಮಾಗೆ ಸಲ್ಮಾನ್ ಖಾನ್ ಹೀರೋ ಆಗಿ ಫಿಕ್ಸ್ ಆಗಿದ್ದಾರೆ. ಸಲ್ಲು ಜೊತೆ ಡ್ಯುಯೇಟ್ ಹಾಡೋ ನಾಯಕಿ ಸಮಂತಾ ಎಂಬ ಸುದ್ದಿಗೆ ಈಗ ಕ್ಲ್ಯಾರಿಟಿ ಸಿಕ್ಕಿದೆ. ಇನ್ಸ್ಟಾಗ್ರಾಂ ಲೈವ್‌ನಲ್ಲಿ ಸಮಂತಾ, ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ್ದಾರೆ. […]

ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ – ಗೋವಿಂದ ಬಾಬು ವಿರುದ್ಧವೇ ಇಡಿಗೆ ದೂರು

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ED) ದೂರು ದಾಖಲಾಗಿದೆ. 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ ದೂರು ನೀಡಿದ್ದಾರೆ.  ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ನಟರಾಜ ಶರ್ಮಾ, ಗೋವಿಂದ ಪೂಜಾರಿ […]

ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ

ಬೆಂಗಳೂರು: ಸುಪ್ರೀಂಕೋರ್ಟ್  ಆದೇಶ ದುರದೃಷ್ಟಕರ. ಮತ್ತೊಮ್ಮೆ ನಮ್ಮ ರಾಜ್ಯದ ಕಾನೂನು ತಂಡ ಸುಪ್ರೀಂಕೋರ್ಟ್ ಮುಂದೆ ವಸ್ತುಸ್ಥಿತಿ ತಿಳಿಸಲು ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಸಿಡಬ್ಲ್ಯೂಸಿ ಆದೇಶ ಬಂದಾಗ ಕರ್ನಾಟಕ ಸುಪ್ರೀಂಕೋರ್ಟ್‌ಗೆ ಹೋಗಬೇಕಿತ್ತು. ನೀರು ಬಿಡಲು ಆಗಲ್ಲ ಎಂದು ಅಫಿಡವಿಟ್ ಹಾಕಬೇಕಿತ್ತು. ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ (CWRC), ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ […]

ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು

ಬೆಂಗಳೂರು: ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಿ ಸಂಕಷ್ಟ ಸೂತ್ರ ಸಿದ್ಧ ಮಾಡಬೇಕು ಅಂತ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಒತ್ತಾಯ ಮಾಡಿದ್ದಾರೆ. ಸುಪ್ರೀಂಕೋರ್ಟ್ (Supreme Court) ನಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಅತ್ಯಂತ ದುರಾದೃಷ್ಟಕರ. ನಮ್ಮಲ್ಲಿ ಕುಡಿಯೋಕೆ ನೀರಿಲ್ಲ. ಕೆಲವೇ ತಿಂಗಳಲ್ಲಿ ಬೆಂಗಳೂರಿಗೂ ಕುಡಿಯೋ ನೀರಿಗೂ ಸಮಸ್ಯೆ ಆಗುತ್ತದೆ. ಇಂತಹ ಸಮಯದಲ್ಲಿ ಎರಡು ಬೋರ್ಡ್ ಗಳು ಮತ್ತು ಸುಪ್ರೀಂಕೋರ್ಟ್ ವಾಸ್ತವ […]