ಮಂಗಳೂರು, ಉಡುಪಿಯಲ್ಲಿ ಬಂದ್ಗೆ ಬೆಂಬಲವೇ ಇಲ್ಲ
ಮಂಗಳೂರು: ಕಾವೇರಿ ನದಿ ನೀರಿಗಾಗಿ ಇಂದು ರೈತಪರ, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಬೆಂಗಳೂರು ಸೇರಿದಂತೆ ಹತ್ತಾರು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಈ ಬಾರಿಯೂ ಬಂದ್ಗೆ ಕನಿಷ್ಠ ಬೆಂಬಲವೂ ಸಿಕ್ಕಿಲ್ಲ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಜನಜೀವನ ಎಂದಿನಂತೆ ನಡೆಯುತ್ತಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿವೆ. ಶಾಲಾ ಕಾಲೇಜುಗಳು ಕೂಡ ನಡೆಯುತ್ತಿದ್ದು, ಜನರಿಗೆ ಬಂದ್ನ ಅರಿವೇ […]







































































































































































































































































































































































































































































































































































































































































































































































































































































































































































































































































































































