ಬುದ್ಧಿವಾದ ಹೇಳಿದ ಪೊಲೀಸಪ್ಪನ ಬೈಕ್ಗೆ ಬೆಂಕಿ ಹಚ್ಚಿದ ಭೂಪ
ಚಿಕ್ಕಬಳ್ಳಾಪುರ: ಅಣ್ಣ-ತಮ್ಮಂದಿರ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ರಂಪಾಟ ಮಾಡ್ತಿದ್ದ ಅಸಾಮಿಗೆ ಎಎಸ್ಐ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು. ಪೊಲೀಸಪ್ಪನ ಫಾಲೋ ಮಾಡಿಕೊಂಡು ಹೋಗಿ ಮನೆಯ ಮುಂದೆ ನಿಲ್ಲಿಸಿದ್ದ ಹೊಸ ಸ್ಕೂಟಿಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಗುಡಿಬಂಡೆ ನಗರದ ಹಣ್ಣಿನ ವ್ಯಾಪಾರಿ ಖಲೀಂ ಉಲ್ಲಾ ತನ್ನ ಸಹೋದರರ ಜೊತೆ ಗಲಾಟೆ ಮಾಡಿಕೊಂಡು ಆಸ್ಪತ್ರೆಗೆ ಆಗಮಿಸಿದ್ದು ಆಸ್ಪತ್ರೆಯಲ್ಲಿ ವಿನಾಕಾರಣ ಕೂಗಾಟ ನಡೆಸಿ ರಂಪಾಟ ಮಾಡ್ತಿದ್ದ. ವಿಷಯ ತಿಳಿದು ರಾತ್ರಿ ಪಾಳಿ ಕರ್ತವ್ಯದಲ್ಲಿದ್ದ […]







































































































































































































































































































































































































































































































































































































































































































































































































































































































































































































































































































































