ಜಾತ್ಯಾತೀತ ನಿಲುವು ಬಿಡುವ ಪ್ರಶ್ನೆಯೇ ಇಲ್ಲ
ಬೆಂಗಳೂರು: ನಾವು ಜಾತ್ಯಾತೀತ ನಿಲುವು ಬಿಡುವ ಪ್ರಶ್ನೇಯೇ ಇಲ್ಲ, ಈ ವಿಚಾರವನ್ನು ಮೊದಲೇ ಸ್ಪಷ್ಟವಾಗಿ ಹೇಳಿದ್ದೇನೆ ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿಯೇ ಮಾತನಾಡಿದ್ದೇನೆ. ಅದಾದ ಬಳಿಕ ಕುಮಾರಸ್ವಾಮಿಯವರು ಭೇಟಿಯಾಗಲಿದ್ದಾರೆ ಎಂದು ಅವರ ಬಳಿ ಹೇಳಿದ್ದೇ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 60 ವರ್ಷ ಹೋರಾಟದಲ್ಲಿ ಯಾವುದೇ ಸಮುದಾಯಕ್ಕೂ ಅನ್ಯಾಯ ಆಗಲು ನಮ್ಮ ಪಕ್ಷ ಬಿಟ್ಟಿಲ್ಲ. ಆದರೆ ಕರ್ನಾಟಕದಲ್ಲಿ ಕುಮಾರಸ್ವಾಮಿ ಸರ್ಕಾರ […]







































































































































































































































































































































































































































































































































































































































































































































































































































































































































































































































































































































