September 15, 2026

ಮೋದಿಗೆ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ವಾ?

ಚಿಕ್ಕಬಳ್ಳಾಪುರ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ಲವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ. ಕಾವೇರಿ ವಿವಾದ ಸಮಸ್ಯೆ ಬಗೆಹರಿಸಲು ಪ್ರಧಾನಿ ಭೇಟಿಗೆ ಬಿಜೆಪಿ (BJP) ನಾಯಕರು ಅವಕಾಶ ಕೇಳಲಿ. ಅದು ಬಿಟ್ಟು ಬಿಜೆಪಿಯವರು ಏನು ಮಾಡ್ತಿದ್ದಾರೆ? ಮೋದಿಯವರ ಬಳಿ ಹೋಗಿ ಮಾತನಾಡಬಹುದಿತ್ತಲ್ಲ? ಮೋದಿಯವರ ಅಪಾಯಿಂಟ್‌ಮೆಂಟ್ ಕೊಡಿಸಿ ಅಂತ ನಾವು ಕೇಳಿಲ್ವಾ? ಸುಮ್ನೆ ರಾಜಕೀಯ ಮಾಡೋದಾದ್ರೆ ನಾವು ಮಾಡ್ತೀವಿ. ನಾವು ಸರ್ವ ಪಕ್ಷಗಳ ಸಭೆ ಕರೆದಿಲ್ಲವಾ? ವಿರೋಧ […]

ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಸರ್ಕಾರ ಇದೆ

ಬೆಂಗಳೂರು: ಕಾವೇರಿ ನೀರು  ವಿಚಾರವಾಗಿ ಹೋರಾಟ ನಡೆಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೋರಾಟಗಾರರು ಏನಾದರೂ ನಿಮ್ಮಿಂದ ರಾಜೀನಾಮೆ ಕೇಳಿದ್ರಾ ಅಥವಾ ಅಧಿಕಾರ ಕೇಳಿದ್ದಾರಾ? ನೀರು ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಕ್ಕೆ ಬಂಧಿಸಿದ್ದೀರಿ. ಇವತ್ತು ರಾಜ್ಯದಲ್ಲಿ ಪೊಲೀಸ್ ಸರ್ಕಾರ ಇದೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರು ನಗರದಲ್ಲಿ ಮಾತನಾಡಿದ ಅವರು, ನಾವು ಅಧಿಕಾರದಲ್ಲಿದ್ದಾಗ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿಲ್ಲ. ಆದರೆ ಈಗ […]

ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ CWRC ಆದೇಶ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್‌ 15ರವರೆಗೆ 3 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿನ (Tamil Nadu) ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.  ಕರ್ನಾಟಕದ ವಾದ ಏನಿತ್ತು?ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. […]

ಬಂದ್ ಶಾಂತಿಯುತವಾಗಿ ಆಗಿದೆ, ಬೆಂಗಳೂರು ನಾಗರಿಕರಿಗೆ ಅಭಿನಂದನೆ

ಬೆಂಗಳೂರು: ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ. ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ (Karnataka) ಬರ ಇದ್ದಾಗಲೂ ತಮಿಳುನಾಡಿಗೆ (Tamil Nadu) ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಮುಖಂಡರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಪ್ರತಿಭಟನೆ ಮಾಡಲಿ. ಅವರ ಧ್ವನಿ, ಹೋರಾಟ ನಡೆಯಲಿ. ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಸಂಘಟನೆಯವರಿಗೆ ಅಭಿನಂದನೆಗಳು ಎಂದರು. ಕಾವೇರಿ ನಿರ್ವಹಣಾ ಸಮಿತಿ ಸಭೆ ನಡೆಯುತ್ತಿದೆ. ಕಾವೇರಿ […]

ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಾಘಾತ

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ ಅಷ್ಟೂ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ […]

ಬೆಂಗಳೂರು ಬಂದ್ ಎಫೆಕ್ಟ್- ಕೊನೆ ಕ್ಷಣದಲ್ಲಿ 13 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕಾವೇರಿ ಉಳಿವಿಗಾಗಿ ಬೆಂಗಳೂರು ಗ್ರಾಮಾಂತರ-ಬೆಂಗಳೂರು ಬಂದ್‍ನ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ಬಂದ್ (Bengaluru Bandh) ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಪ್ರಯಾಣಿಕರು ಬೆಂಗಳೂರು ಪ್ರಯಾಣ ರದ್ದು ಮಾಡಿರುವ ಹಿನ್ನೆಲೆಯಲ್ಲಿ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ ರದ್ದಾಗಿದೆ. ದೆಹಲಿ, ಕೊಚ್ಚಿ, ಮಂಗಳೂರು, ಮುಂಬೈ ಸೇರಿದಂತೆ ಇತರೆ 13 ವಿಮಾನಗಳ ಹಾರಾಟವನ್ನ ಏರ್ ಲೈನ್ಸ್ ನವರು ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದಾರೆ. ಹೀಗಾಗಿ ಸಹಜವಾಗಿ ಏರ್‌ಪೋರ್ಟ್‌ ನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ […]

ಬೆಂಗಳೂರು ಬಂದ್‌ – ಪ್ರತಿಕ್ರಿಯೆ ನೀಡದೇ ತೆರಳಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸಕ್ಕೆ ತೆರಳಿದ್ದಾರೆ. ಮಾಧ್ಯಮಗಳು ಬೆಂಗಳೂರು ಬಂದ್‌ಗೆ ಸಂಬಂಧಿಸಿದ್ದಂತೆ ಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಿದರು.  ಹೆಚ್‌ಎಎಲ್‌ನಿಂದ ವಿಶೇಷ ವಿಮಾನ ಮೂಲಕ ಮೈಸೂರಿಗೆ ಸಿಎಂ ಪ್ರಯಾಣಿಸಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಕಾವೇರಿ ಸಮಸ್ಯೆ ಪರಿಹರಿಸಲು ಎಲ್ಲ ಪಕ್ಷದ ನಾಯಕರಿಗೆ ನಟ ಕಿಚ್ಚ ಸುದೀಪ್​ ಬಹಿರಂಗ ಪತ್ರ

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನೀರು ಹಂಚಿಕೆ ಕುರಿತಂತೆ ಬಿಕ್ಕಟ್ಟು ನಿರ್ಮಾಣ ಆಗಿದೆ. ಕನ್ನಡ ಚಿತ್ರರಂಗದ ಅನೇಕ ಕಲಾವಿದರು ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಈಗಾಗಲೇ ದರ್ಶನ್​, ಅಭಿಷೇಕ್​ ಅಂಬರೀಷ್​ ಸೇರಿದಂತೆ ಅನೇಕರು ಹೋರಾಟದಲ್ಲಿ ಭಾಗಿ ಆಗಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಹಲವು ಸೆಲೆಬ್ರಿಟಿಗಳು ತಮ್ಮ ಬೆಂಬಲ ಸೂಚಿಸಿದ್ದಾರೆ. ಕಿಚ್ಚ ಸುದೀಪ್​ ಅವರು ಕಾವೇರಿ ನೀರಿನ ಸಮಸ್ಯೆ ಕುರಿತು ಬಹಿರಂಗ ಪತ್ರ ಬರೆದಿದ್ದಾರೆ. ಈ ಸಮಸ್ಯೆ ಪರಿಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಪಕ್ಷದ ನಾಯಕರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಸುದೀಪ್​ ಬರೆದ […]

ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು ಬಂದ್‌ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.  ಈ […]

ಕುಮಾರಸ್ವಾಮಿ ಒಬ್ಬರೇ ದೇವತಾ ಮನುಷ್ಯ

ಕೋಲಾರ: ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರೊಬ್ಬರೇ ದೇವತಾ ಮನುಷ್ಯ ಇನ್ನೆಲ್ಲರೂ ಪಾಪಿಗಳು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಮನೆಗೂ ಮದ್ಯಭಾಗ್ಯ ಕೊಟ್ಟು ಸರ್ಕಾರ ದುಡ್ಡು ಮಾಡಲು ಮುಂದಾಗಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.  ಅಲ್ಲದೇ ಕಾವೇರಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿ ನೀರು ಬಿಡುವುದನ್ನ ನಿಲ್ಲಿಸಬಹುದು ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಸಂವಿಧಾನ ಬರೆದಿರುವುದು ಅಂಬೇಡ್ಕರ್ ಅವರೇ ಹೊರತು ಕುಮಾರಸ್ವಾಮಿ ಅಲ್ಲ. ಸಂವಿಧಾನದ ನಿಯಮಗಳು ಏನು […]