ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ
ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡು ಪಕ್ಷದ ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕ ಬಿಜೆಪಿ-ಜೆಡಿಎಸ್ ನಾಯಕರು ದೋಸ್ತಿಗೆ ಅಸಮಾಧಾನ ವ್ಯಕ್ತಪಡಿಸಿ ನನ್ನ ಬಳಿ ಮಾತನಾಡಿದ್ದಾರೆ. ನಾನು ಸಿಎಂ, ಮಂತ್ರಿಗಳು, ಪ್ರಮುಖ ನಾಯಕರು ಈ ಬಗ್ಗೆ ಕುಳಿತು ಮಾತಾಡಬೇಕಿದೆ. ಚರ್ಚೆ ಮಾಡಿ ಅಸಮಾಧಾನ ಇರೋರ ಜೊತೆ ನಾನು ಮಾತನಾಡುತ್ತೇನೆ ಎಂದರು. ಬಹಳಷ್ಟು ನಾಯಕರು ಕಾಂಗ್ರೆಸ್ಗೆ ಬರುತ್ತೇವೆ ಎಂದು […]







































































































































































































































































































































































































































































































































































































































































































































































































































































































































































































































































































































