September 14, 2026

ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ

ನವದೆಹಲಿ: ವಿಶ್ವಕಪ್‍ನಲ್ಲಿ ಪಾಕ್ ತಂಡ ವಿಫಲವಾಗಬೇಕೆಂಬುದು ಪಿಸಿಬಿ ಉದ್ದೇಶವಾಗಿದೆ ಎಂದು ಪಾಕಿಸ್ತಾನ ತಂಡದ ಹಿರಿಯ ಆಟಗಾರರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ. ತಂಡವು ವಿಫಲವಾಗಬೇಕೆಂದು ಪಿಸಿಬಿ ಬಯಸುತ್ತಿದೆ. ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಲ್ಲಿ ಪಿಸಿಬಿ ಇದೆ. ಹೀಗಾಗಿಯೇ ನಾವು ವಿಶ್ವಕಪ್ ಕಪ್ ಗೆಲ್ಲುವುದನ್ನು ಪಿಸಿಬಿ ಬಯಸುವುದಿಲ್ಲ ಎಂದು ಹೆಸರನ್ನು ಬಹಿರಂಗ ಪಡಿಸದಂತೆ ಸೂಚಿಸಿ ಪಾಕ್ ಆಟಗಾರರೊಬ್ಬರು ಈ ಆರೋಪ ಮಾಡಿದ್ದಾರೆ.  ಕ್ರೀಡಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪಿಸಿಬಿ ಎಲ್ಲಾ ಆಟಗಾರರನ್ನೂ ದೂಷಿಸುತ್ತಿದೆ. ನಮ್ಮ ಆಟಗಾರರು ನಿಜವಾಗಿಯೂ ತಮ್ಮ ಪ್ರಯತ್ನವನ್ನು […]

ಇಸ್ರೋ ಮುಖ್ಯಸ್ಥ ಸೋಮನಾಥ್‌, ಗಾಲ್ಫರ್‌ ಅದಿತಿ ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಗಣ್ಯ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಅನುಸರಿಸಿಕೊಂಡು ಬಂದಿರುವ ಸರ್ಕಾರ ಇದೀಗ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟ ಮಾಡಿದೆ. ಈ ಬಾರಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. 50ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ‘ಕರ್ನಾಟಕ ಸಂಭ್ರಮ 50 ವರ್ಷ’ ಎಂಬ ಹೆಸರಿನಲ್ಲಿ 10 ಪ್ರಶಸ್ತಿಯನ್ನೂ ನೀಡಲಿದೆ. […]

ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

ನವದೆಹಲಿ : ವಿರೋಧ ಪಕ್ಷಗಳ ನಾಯಕರ ಐಫೋನ್‌ಗೆ ಹ್ಯಾಕಿಂಗ್ ಸಂದೇಶ ಬಂದಿರುವ ತಾಂತ್ರಿಕ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಕೆಲವು ಏಜೆನ್ಸಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ವಿಪಕ್ಷಗಳ ಆರೋಪದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂಸದರು ಆಪಲ್‌ನಿಂದ ಎಚ್ಚರಿಕೆ ಸಂದೇಶ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆ್ಯಪಲ್‌ (Apple) ಭಾರತದಲ್ಲಿ […]

ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ

ಬೆಳಗಾವಿ,: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್​ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ ಮಾಡೋದು ಮಾಡ್ತಾನೆ ಹೌದು, ಡಿಕೆ ಶಿವಕುಮಾರ್​ ಬಹಳ ವೀಕ್ ಮನುಷ್ಯ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ […]

ಗುತ್ತಿಗದಾರರ ಸಂಘದ ಅಧ್ಯಕ್ಷನ ಮೇಲೆ ಸಚಿವ ಶಿವರಾಜ್​ ತಂಗಡಗಿ ಸಹೋದರನ ದರ್ಪ

ಕೊಪ್ಪಳ: ಸಚಿವ ಶಿವರಾಜ್​ ತಂಗಡಗಿ ಸಹೋದರ ನಾಗರಾಜ್ ತಂಗಡಗಿ ಎಂಬಾತ ಎಸ್​ಸಿ/ಎಸ್​ಟಿ ಗುತ್ತಿಗದಾರರ ಸಂಘದ ಅಧ್ಯಕ್ಷ ಗಣೇಶ್ ಹೊರತಟ್ನಾಳ್ ಮೇಲೆ ದರ್ಪ ತೋರಿದ ಆರೋಪ ಕೇಳೀಬಂದಿದೆ. ಹೌದು, ಸಂಬಂಧ ಇಲ್ಲದ ವಿಷಯಕ್ಕೆ ತಲೆ ಹಾಕಿದ ನಾಗರಾಜ್​ ತಂಗಡಗಿಗೆ ಕೊಪ್ಪಳ( ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಕಚೇರಿಯಲ್ಲಿ ಗಣೇಶ್ ಹೊರತಟ್ನಾಳ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ದೂರವಾಣಿಯಲ್ಲಿ ಸಮಾಧಾನ ಪಡಿಸಿದ ಶಿವರಾಜ್​ ತಂಗಡಗಿ ಇನ್ನು ಗಲಾಟೆ ಜೋರಾಗುತ್ತಿದ್ದಂತೆ ನಾಗರಾಜ್ ತಂಗಡಗಿ ಇಇ ಕಚೇರಿಯಿಂದ ಕಾಲ್ಕಿತ್ತಿದ್ದಾರೆ. ನಂತರ ಸಚಿವರ ಕಚೇರಿಯಲ್ಲಿ […]

ಮುಖ್ಯಮಂತ್ರಿ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದರಾಮಯ್ಯನೇ ಸಿಎಂ

ದಾವಣಗೆರೆ: ಸಿಎಂ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದರಾಮಯ್ಯನೇ ಸಿಎಂ ಎಂದು ದಾವಣಗೆರೆಯಲ್ಲಿ ವಸತಿ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾರೇ ಏನು ಅಂದರೂ ಸಿದ್ದರಾಮಯ್ಯ ಪರ. ಸಿಎಂ ಸ್ಥಾನದ ಅವಧಿ ಬಗ್ಗೆ ನಿರ್ಧಾರ ಮಾಡೋದು ಹೈಕಮಾಂಡ್. ಹೈಕಮಾಂಡ್ ಹೇಳಿದ್ರೆ ಸಿದ್ದುನೇ 5 ವರ್ಷ ಸಿಎಂ ಆಗಿರುತ್ತಾರೆ ಎಂದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ ಆಪರೇಷನ್ ಕಮಲ ಅಸಾಧ್ಯ. ಮಾಜಿ […]

ಸಿದ್ದರಾಮಯ್ಯರನ್ನ ಅಲುಗಾಡಿಸಲು ಸಾಧ್ಯವಿಲ್ಲ

ಹಾಸನ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯದಲ್ಲಿ ಬಂಡೆಯಂತಹ ಸರ್ಕಾರವಿದ್ದು, ಬಂಡೆ ರೂಪದಲ್ಲಿಯೇ ಅವರು ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಪ್ರಶ್ನೆ ಪ್ರಸ್ತುತ ಇಲ್ಲಾ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗೀಜಿಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿಎಂ ಇದ್ದಾರೆ. ನಮ್ಮದು ನೂರಾರು ವರ್ಷಗಳ ಇತಿಹಾಸವಿರುವ ಪಕ್ಷ, ಹೈಕಮಾಂಡ್ (Congress High Command) ಭದ್ರವಾಗಿದೆ. ಆದ್ದರಿಂದ ಯಾರು ಮುಖ್ಯಮಂತ್ರಿ ಆಗಬೇಕು, ಬಿಡಬೇಕು ಅನ್ನೋದು ಹೈಕಮಾಂಡ್‌ ತೀರ್ಮಾನ. ಸಿದ್ದರಾಮಯ್ಯ ಅವರೇ ಸಿಎಂ ಅಂತ ಮುಕ್ತವಾಗಿ […]

ಮಹಾರಾಷ್ಟ್ರದ ಬಸ್ ಕರ್ನಾಟಕಕ್ಕೂ ಬರುತ್ತೆ: ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

ವಿಜಯಪುರ: ಕರ್ನಾಟಕದ ಬಸ್‌ಗೆ ಬೆಂಕಿ ಹಾಕೋದಕ್ಕೂ, ಮಹಾರಾಷ್ಟ್ರದ ಹೋರಾಟಕ್ಕೂ ಸಂಬಂಧ ಇಲ್ಲ. ನಮ್ಮ ಬಸ್‌ಗೆ ಬೆಂಕಿ ಹಾಕಿದ ಕೃತ್ಯ ಸರಿ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮರಾಠ ಪುಂಡರು ಬೆಂಕಿ ಹಚ್ಚಿದ ಪ್ರಕರಣಕ್ಕೆ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ ಸರ್ಕಾರ ಇದನ್ನು ಖಂಡಿಸಬೇಕು. ಬೆಂಕಿ ಇಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರದ ಬಸ್‌ಗಳು ನಮ್ಮ ಕರ್ನಾಟಕಕ್ಕೂ ಬರುತ್ತವೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದರು. ಮಹಾರಾಷ್ಟ್ರದ ಬಸ್‌ಗಳು ತಮಿಳುನಾಡು, […]

ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ- ಆಪ್ತ ಬಳಗಕ್ಕೆ ಡಿಕೆಶಿ ಸಂದೇಶ

ಬೆಂಗಳೂರು: ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಜಪ ಬೆನ್ನಲ್ಲೇ ಡಿಕೆಶಿ ಫಿಲಾಸಫಿ. ನನಗೆ ಅಧಿಕಾರ ಸಿಗುತ್ತೋ.. ಇಲ್ವೋ ಗೊತ್ತಿಲ್ಲ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ ಎಂದು ಆಪ್ತ ಬಳಗಕ್ಕೆ ಮತ್ತೊಮ್ಮೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂದೇಶ ರವಾನಿಸಿದ್ದಾರೆ. ಕೆಪಿಸಿಸಿ ಕಚೇಯಲ್ಲಿ ಇಂದಿರಾ ಗಾಂಧಿ (Indira Gandhi) ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರು ಅವರ ಬಳಿ ಎಷ್ಟೆಲ್ಲಾ ಆಸ್ತಿ ಇತ್ತು. ಈಗ ಸೋನಿಯಾ ಗಾಂಧಿ, ಈಗ ರಾಹುಲ್ ಗಾಂಧಿ ಬಳಿ ಏನೂ ಇಲ್ಲ. ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಬಿಜೆಪಿ […]

ಮಹಿಳಾ ಎಸ್‍ಐ ಮುಂದೆಯೇ ಡ್ರ್ಯಾಗರ್ ಹಿಡಿದು ಅಟ್ಟಹಾಸ – ಪುಡಿ ರೌಡಿ ಅರೆಸ್ಟ್

ತುಮಕೂರು: ಮಹಿಳಾ ಎಸ್‍ಐ ಮುಂದೆಯೇ ಡ್ರ್ಯಾಗರ್ ಹಿಡಿದು ಆತಂಕ ಮೂಡಿಸಿದ್ದ ಪುಡಿ ರೌಡಿಯೊಬ್ಬನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೌಡಿಯನ್ನು ಮಧು ಅಲಿಯಾಸ್ ಮೋಜ ಎಂದು ಗುರುತಿಸಲಾಗಿದೆ. ಆರೋಪಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಡ್ರ್ಯಾಗರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕಿ ಮೊಬೈಲ್ ಕಳ್ಳತನ ಮಾಡಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಮಹಿಳಾ ಎಸ್‍ಐ ಮಂಗಳಮ್ಮ ಅವರ ಮುಂದೆಯೂ ಆರೋಪಿ ಡ್ರ್ಯಾಗರ್ ಹಿಡಿದು ಪುಂಡಾಟ ಮಾಡಿದ್ದಾನೆ.  ಸುಮಾರು ಅರ್ಧ […]