ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಭಾನುವಾರ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.
CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.
ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.













































































































































































































































































































































































































































































































































































































































































































































































































































































































































































































































































































































