September 14, 2026

ಮಣಿಪುರದಲ್ಲಿ ಮತ್ತೆ ಸಂಘರ್ಷ – ಮನೆಗಳಿಗೆ ಹೊತ್ತಿದ ಬೆಂಕಿ

ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ […]

ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಸಮಿತಿ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಾಹಿತಿ ಕಲೆಹಾಕಲು ನಗರಕ್ಕೆ ತೆರಳಿದೆ. ತಂಡದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಡಾ.ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ ಇದ್ದಾರೆ. ಪ್ರಕರಣ ಹಿನ್ನೆಲೆ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿ ತಂಡ ಈ ನಿರ್ಧಾರ ಕೈಗೊಂಡಿದೆ.  ಮೊದಲಿಗೆ ಬಿಜೆಪಿ ಮುಖಂಡರ ತಂಡ ಮೆಗ್ಗಾನ್ […]

ಪತ್ನಿ ಕೊಲೆಗೈದು ಸೀರೆಯಿಂದ ಫ್ಯಾನಿಗೆ ನೇತಾಕಿದ ಕಿರಾತಕ!

ಬೆಂಗಳೂರು: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದರೆ ಇಲ್ಲೊಬ್ಬ ಕಿರಾತಕ ಪತಿಯು ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತಾಕಿದ ಪ್ರಸಂಗವೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರೇಖಾ ಕೊಲೆಯಾದ ಮೃತ ದುರ್ದೈವಿ. ಆರೋಪಿ ಪತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಈ ಘಟನೆ ಯಲಹಂಕ ಉಪನಗರ 3 ನೇ ಹಂತದಲ್ಲಿ ನಡೆದಿದೆ.  ವರದಕ್ಷಿಣೆ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಸಂತೋಷ್ ಪತ್ನಿ ರೇಖಾಳನ್ನು ಕೊಲೆ ಮಾಡಿದ ಬಳಿಕ ಸೀರೆಯಿಂದ […]

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ನಗರದಲ್ಲಿ ಏಕಕಾಲಕ್ಕೆ 3 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಸೇರಿದ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಜಾನೆಯೇ 2 ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳು ಮನೆಗೆ ಬೀಗ ಹಾಕಿದ್ದ ಹಿನ್ನೆಲೆ ಹೊರಗಡೆ ಕಾದು ಕುಳಿತಿದ್ದಾರೆ.  ಮಂಜುನಾಥ್ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಟ್ಟಮಕ್ಕಿಯಲ್ಲಿರುವ ನಿವಾಸ, […]

ಕಾಂಗ್ರೆಸ್ ಅಂದ್ರೆ ಹಿಂದೂ ವಿರೋಧಿ ಅನ್ನೋದು ಸ್ಪಷ್ಟವಾಗಿದೆ

ಬೆಂಗಳೂರು: ಕಾಂಗ್ರೆಸ್ ಎಂದರೆ ಹಿಂದೂ ವಿರೋಧಿ ಅನ್ನೋದನ್ನು ಆ ಪಕ್ಷದ ನಾಯಕರೇ ಸ್ಪಷ್ಟವಾಗಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗ ಗಲಭೆ ಪ್ರಕರಣದ ಹಿನ್ನೆಲೆ ಸ್ಥಳಕ್ಕೆ ಬಿಜೆಪಿ ಸತ್ಯ ಶೋಧನೆ ತಂಡ ಭೇಟಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ವಾಸ್ತವತೆ ಮತ್ತು ನೊಂದ ನಾಗರಿಕರನ್ನು ಮಾತನಾಡಿಸಿ ವಾಸ್ತವ ಸ್ಥಿತಿ ಪರಿಶೀಲನೆ ಮಾಡುತ್ತೇವೆ. ಬಳಿಕ ಸರ್ಕಾರದ ಮೇಲೆ ಸೂಕ್ತ ಕ್ರಮ ವಹಿಸುವ ಬಗ್ಗೆ ಸಮಾಲೋಚನೆ ಮಾಡುತ್ತೇವೆ ಎಂದು ತಿಳಿಸಿದರು. ಭಯದ […]

ಇದು ಪ್ರಿ ಅರೇಂಜ್ ಮ್ಯಾರೇಜ್

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ನನ್ನ ಜೊತೆ ಚರ್ಚೆ ಮಾಡಿಲ್ಲ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತೊಮ್ಮೆ ಜೆಡಿಎಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮೈತ್ರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿ ಮಾಡಿಕೊಂಡವರು ಹೇಳಬೇಕು. ಬಿಜೆಪಿ ಸಿದ್ದಾಂತ ಒಪ್ಪಿ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆಯಾ? ಅಥವಾ ಜೆಡಿಎಸ್ ಸಿದ್ದಾಂತವನ್ನು ಬಿಜೆಪಿ ಒಪ್ಪಿದೆಯೋ? ಕುವೆಂಪು ಪಠ್ಯವನ್ನು ಕೈಬಿಟ್ಟಾಗ ಪ್ರತಿಭಟನೆ ನಾವು ಮಾಡಿದ್ದೆವು. ಈ ಬಗ್ಗೆ ಮೈತ್ರಿ ಆಗೋವಾಗ ಚರ್ಚೆ ಮಾಡಿದ್ದೀರಾ. ಜಾತ್ಯಾತೀತ, ಸಮಾಜವಾದ ಪದವನ್ನ ಸಂವಿಧಾನದಿಂದ ತೆಗೆಯಲಾಗಿದೆ. ಇದರ […]

ಬೆಂಗಳೂರಲ್ಲಿ ಐಟಿ ಭರ್ಜರಿ ಬೇಟೆ- 60 ಕಡೆ ದಾಳಿ; 2,500 ಕೋಟಿ ಅಕ್ರಮ ಬಯಲಿಗೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಬೃಹತ್ ಐಟಿ ದಾಳಿ ನಡದಿದೆ. ದಾಳಿಯಲ್ಲಿ ಕೋಟ್ಯಂತರ ಮೌಲ್ಯದ ಹಣ, ಚಿನ್ನಾಭರಣ, ನಗದು ಪತ್ತೆಯಾಗಿದೆ. ಕಾವೇರಿ ಥೇಯೇಟರ್ ಬಳಿಯ ಗಜರಾಜ್ ಜ್ಯುವೆಲ್ಲರಿ ಶಾಪ್, ಸದಾಶಿವನಗರದ ಭೂಮಿಕಾ ಅಪಾರ್ಟ್‍ಮೆಂಟ್, ಶಾಂತಿನಗರ, ವಿಜಯನಗರ, ಹುಳಿಮಾವು ಸೇರಿದಂತೆ ವಿವಿಧ ಕಡೆಗಳಲ್ಲಿ ಚಿನ್ನದ ಅಂಗಡಿ ಮಾಲೀಕರು, ಆಸ್ಪತ್ರೆ ಮಾಲೀಕರು, ರಿಯಲ್ ಎಸ್ಟೇಟ್ ಉದ್ಯಮಿಗಳು, ಶಿಕ್ಷಣ ಸಂಸ್ಥೆ ಮಾಲೀಕರ ಮನೆಗಳು ಸೇರಿದಂತೆ ಪೂವಾರ್ಂಕರ ಇನ್ಫಾ ಮತ್ತು ಪೂವಾರ್ಂಕರ ಗ್ರೂಪ್ ಮೇಲೆ ದಾಳಿ ನಡೆಸಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. 7 […]

ಹೋಟೆಲ್ ಮಾಲೀಕನ ಮೇಲೆ ಹಲ್ಲೆ ಮಾಡಿ 1 ಲಕ್ಷ ರೂ. ದರೋಡೆ – ಆರೋಪಿಗಳು ಅರೆಸ್ಟ್

ಕೋಲಾರ: ಹೋಟೆಲ್ ಮಾಲೀಕನ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಕೆಂಪೇಗೌಡ ನಗರದ ಮನೋಜ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೋಲಾರ ನಗರದ ಹೋಟೆಲ್ ಒಂದರ ಮಾಲೀಕ ನವೀನ್ ಶೆಟ್ಟಿ ಎಂಬವರ ಮೇಲೆ ಕಳೆದ ತಿಂಗಳು 17ರ ರಾತ್ರಿ ಅಡ್ಡಗಟ್ಟಿ ಹಲ್ಲೆ ಮಾಡಿದ್ದರು. ಬಳಿಕ ಅವರ ಬಳಿ ಇದ್ದ 1 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದರು. ಈ ವೇಳೆ ಮಧು ಎಂಬ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ […]

ನಮ್ಮ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡಲಿದೆ

ಬೆಂಗಳೂರು: ನಮ್ಮ ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲಿದೆ. ಜಾತಿಗಣತಿ ಬಿಡುಗಡೆಯಿಂದ ಮೀಸಲಾತಿ ನೀಡಲು ಅನುಕೂಲ ಆಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಜಾತಿಗಣತಿ ಬಿಡುಗಡೆ ವಿಚಾರ‌ವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಜಾತಿ ಗಣತಿಯನ್ನು ನಮ್ಮ ಸರ್ಕಾರ ಬಿಡುಗಡೆ ಮಾಡುತ್ತದೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಆದಷ್ಟು ಬೇಗ ವರದಿ ಸರ್ಕಾರಕ್ಕೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಆ ವರದಿ ಬಂದ ಮೇಲೆ ಚರ್ಚೆ ಮಾಡುತ್ತೇವೆ. ವರದಿ ಬಂದರೆ ಯಾವ ಯಾವ ಸಮುದಾಯಗಳು ಎಷ್ಟು ಇದ್ದಾರೆ ಎನ್ನುವುದು […]

ಹಿಂದೂ ಕಾರ್ಯಕರ್ತರ ವಿರುದ್ಧ ಮಾತ್ರನಾ ನಿಮ್ಮ ಪೌರುಷ

ಬೆಂಗಳೂರು: ಬಾಲ ಬಿಚ್ಚಿದ್ರೆ ಬಾಲ ಕಟ್ ಮಾಡ್ತೀವಿ ಅಂತ ಮರಿ ಖರ್ಗೆ (ಪ್ರಿಯಾಂಕ್ ಖರ್ಗೆ) ಹೇಳಿದ್ರು. ಹಿಂದೂ ಕಾರ್ಯಕರ್ತರ ವಿರುದ್ಧ ಮಾತ್ರನಾ ನಿಮ್ಮ ಪೌರುಷ ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು. ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮತಾಂಧರ ಕಟೌಟ್ ಹಾಕಿದ ಉದ್ದೇಶ ಏನು? ವಿಭಜನೆಯಿಂದ ಇನ್ನೂ ನೀವು ಸಮಾಧಾನ ಆಗಿಲ್ಲ ಅಂತ ಅರ್ಥಾನಾ? ಭಾರತದಲ್ಲಿ ಮತ್ತೊಂದು ವಿಭಜನೆಗೆ ಸರ್ಕಾರ ಪ್ರೋತ್ಸಾಹ ಕೊಡ್ತಿದೆಯಾ? ಬಾಲ ಬಿಚ್ಚಿದ್ರೆ ಬಾಲ ಕಟ್ ಮಾಡ್ತೀವಿ ಅಂತ ಮರಿ […]