September 14, 2026

ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ; ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ

ಮಂಡ್ಯ: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಬಹಳ ವ್ಯತ್ಯಾಸ ಇದೆ. ಆದ್ದರಿಂದ ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾವೇರಿ ವಿಚಾರವಾಗಿ ಇನ್ನೂ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದರು. ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ಮಾಜಿ […]

ಉದಯನಿಧಿ ಸ್ಟಾಲಿನ್​​ನನ್ನು ಗಲ್ಲಿಗೇರಿಸಿ: ಕಾಂಗ್ರೆಸ್​ ಶಾಸಕ

ಕೋಲಾರ ಅ.02: ಹಿಂದೂ ಧರ್ಮ ಇಲ್ಲ ಎಂದು ಹೇಳುವವರನ್ನು ಗಲ್ಲಿಗೇರಿಸಬೇಕು. ಉದಯನಿಧಿ ಸ್ಟಾಲಿನ್ ಅವರಿಗೆ ದುಡ್ಡು ಜಾಸ್ತಿ ಆಗಿ ಹುಚ್ಚರಾಗಿದ್ದಾರೆ. ಅವರಿಗೆ ಎರಡೂ, ಮೂರು ಹುಚ್ಚು ನಾಯಿ ಕಚ್ಚಿದೆ ಹೀಗಾಗಿ ಹುಚ್ಚರಾಗಿದ್ದಾರೆ. ನಾವು ಇರುವುದು ಭಾರತ ದೇಶದಲ್ಲಿ. ನಿನ್ನ ಧರ್ಮವನ್ನು ನೀನು ಪಾಲನೆ ಮಾಡು. ಧರ್ಮವನ್ನು ಪಾಲನೆ ಮಾಡಬೇಡ ಎಂದು ಹೇಳುವುದಕ್ಕೆ ಯಾರಿಗೂ ಹಕ್ಕಿಲ್ಲ. ನನ್ನ ಧರ್ಮವನ್ನು ಇಲ್ಲ ಎಂದು ಹೇಳುವುದಕ್ಕೆ ನೀನು ಯಾರು? ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹರಿಹಾಯ್ದರು. ಕೋಲಾರದ ಗಾಂದಿವನದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ […]

ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ಕಿಡಿ

ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗ ಘಟನೆಗೆ ಕಾರಣ ಬಹಿರಂಗಪಡಿಸಲ್ಲ ಎಂಬ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ, ಯಾರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಬೇಕು. ಇದು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ. ರಕ್ಷಣೆ ಮಾಡುವುದು, ಮುಚ್ಚಿ ಹಾಕುವ ಗೃಹ ಇಲಾಖೆ ಮತ್ತು ಸರ್ಕಾರ ಪ್ರಯತ್ನ ಖಂಡನೀಯ ಎಂದು ಮಾಜಿ ಡಿಸಿಎಂ […]

ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದೆ. ಜಮೀನಿನಲ್ಲೇ ಒಣಗಿ ಹೋದ ಬೆಳೆ ಜಾನುವಾರುಗಳ ಪಾಲಾಗಿವೆ. ಸಾಲಸೋಲ ಮಾಡಿ ಬಿತ್ತಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಹೂವು, ಶೇಂಗಾ, ರಾಗಿ, ಮೆಕ್ಕೆಜೋಳ ಬೆಳೆಗಳು ಹಾಳಾಗಿವೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ, ನಲವತ್ತು ಸಾವಿರ […]

ದೇವೇಗೌಡರ ಎಚ್ಚರಿಕೆಗೆ ಡಿಕೆಶಿ ತಿರುಗೇಟು

ಬೆಂಗಳೂರು: ಮಿಸ್ಟರ್ ಡಿ.ಕೆ.ಶಿವಕುಮಾರ್  ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ JDS​​ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, JDS ವರಿಷ್ಠ ಹೆಚ್​.ಡಿ.ದೇವೇಗೌಡ ಮಾತು ನನಗೆ ಆಶೀರ್ವಾದ ಇದ್ದಂತೆ. ವಿಸರ್ಜನೆ ಮಾಡುತ್ತೇವೆ ಎಂದಾಗ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ರಾಜಕಾರಣ ಹಾವು ಏಣಿ ಆಟ, ಚೆಸ್​ ಗೇಮ್. ಹಿಂದೆ ನೀವೇನು ಮಾಡಿದಿರಿ, […]

ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ

ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕರ್ನಾಟಕ ಮತ್ತೊಂದು ಬಿಹಾರ ಆಗುತ್ತಿದೆ ಎಂದು ಅನಿಸುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಸರ್ಕಾರ ಬಂದ ಮೇಲೆ ಗೂಂಡಾಗಿರಿ ಶುರುವಾಗಿದೆ. ಹಿಂದೂಗಳು ಯಾವುದೇ ಗಲಾಟೆಗೆ ಹೋಗದಿದ್ದರೂ ಮನೆಗೆ ನುಗ್ಗಿ ಹೊಡೆದಿದ್ದಾರೆ. ಹಿಂದೆಯೂ ಸಿದ್ದರಾಮಯ್ಯ ಸರ್ಕಾರದಲ್ಲಿ ಟಿಪ್ಪು ಜಯಂತಿ ಮಾಡಿ ಗಲಾಟೆ ಆಗಿತ್ತು. ನಿರಪರಾಧಿಗಳ ಮೇಲೆ ಹಲ್ಲೆಯಾಗಿದೆ. ಸರ್ಕಾರದ ಕುಮ್ಮಕ್ಕೇ […]

ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು

ನವದೆಹಲಿ: ಇತ್ತೀಚೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹಿಂದೂ ಮಹಾಸಭಾ ಗಣಪತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆದಿದೆ. ಆದರೆ ಭಾನುವಾರ ನಡೆದ ಈದ್ ಮಿಲಾದ್ ರ‍್ಯಾಲಿಯಲ್ಲಿ ಶಾಂತಿಕದಡಲು ಪ್ರಯತ್ನಿಸಲಾಗಿದೆ. ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು. ಇಲ್ಲದಿದ್ದರೆ ಶಿವಮೊಗ್ಗದಲ್ಲಿ ಹತ್ತಿರುವ ಕಿಡಿ ರಾಜ್ಯಕ್ಕೆ ಹಬ್ಬಿದರೂ ಆಶ್ಚರ್ಯವಿಲ್ಲ ಎಂದು ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನವದೆಹಲಿಯಲ್ಲಿ (New Delhi) ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗ ಪೋಲಿಸರು ರ‍್ಯಾಲಿಗೆ ಒಳ್ಳೆಯ ಭದ್ರತೆ ನೀಡಿದ್ದರು. ಇದರ ನಡುವೆಯೂ ಶಾಂತಿ ಕದಡುವ ಕೆಲಸ ನಡೆದಿದೆ. ತಪ್ಪಿತಸ್ಥರ […]

ಹಿಂದೂಗಳನ್ನು ಹೆದರಿಸಲು ಸಂಚು

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆಯುತ್ತೆ ಎಂದು ಪೊಲೀಸರು, ಸರ್ಕಾರಕ್ಕೆ ಗೊತ್ತಿರಲಿಲ್ಲವಾ? ಇದು ಮುಸ್ಲಿಮರ ಹಬ್ಬವಲ್ಲ, ಹಿಂದೂಗಳನ್ನು ಹೆದರಿಸಲು ಮಾಡಿದ ಸಂಚು ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ಮಾಡಿದ್ದಾರೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ ಮುಖಕ್ಕೆ ಕಪ್ಪು ಬಟ್ಟೆ ಧರಿಸಿಕೊಂಡು ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಲ್ಲೆಯಿಂದ ಪಾರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಬದುಕಿದೆಯಾ ಎಂದು ಪ್ರಶ್ನಿಸಿದ್ದಾರೆ. ರಾಜ್ಯ […]

ಶಿವಮೊಗ್ಗದಲ್ಲಿ ಇದೇನು ಹೊಸದಾಗಿ ನಡೆಯುತ್ತಿದ್ಯಾ? ಗೃಹ ಸಚಿವ ಉಡಾಫೆ ಮಾತು

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಭಾನುವಾರ ಸಂಜೆ ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಅವರು ಲಘುವಾಗಿ ಮಾತನಾಡುವ ಮೂಲಕ ಮತ್ತೊಮ್ಮೆ  ವಿರೋಧ ಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.  ಹೌದು.. ಶಿವಮೊಗ್ಗದಲ್ಲಿ ಇದೇನು ಹೊಸದಾಗಿ ನಡೆಯುತ್ತಿದ್ಯಾ? ಎಂದು ಹೇಳುವ ಮೂಲಕ ಶಿವಮೊಗ್ಗದ ಗಲಭೆ ವಿಚಾರವನ್ನು ಗೃಹ ಸಚಿವ ಪರಮೇಶ್ವರ್​ ಉಡಾಫೆ ಮಾತುಗಳನ್ನಾಡಿದ್ದಾರೆ. ಅಲ್ಲದೇ ಗೃಹ ಸಚಿವರ ಈ ಹೇಳಿಕೆ ಗಮನಿಸಿದರೆ ಈ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಂತೆ ಕಾಣಿಸಿದೆ. ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ […]

ಚುನಾವಣಾ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ ಮಾಜಿ ಸಚಿವ

ವಿಜಯನಗರ: ಮಾಜಿ ಸಚಿವ ಆನಂದ್ ಸಿಂಗ್ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆನಂದ್ ಸಿಂಗ್, ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಆದ್ರೆ ನಾನು ಬಿಜೆಪಿ ಕಾರ್ಯಕರ್ತನಾಗಿಯೇ ಮುಂದುವರಿಯುತ್ತೇನೆ. ಪಕ್ಷದ ಹೇಳಿದವರ ಪರವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡುವೆ. ಬಿಜೆಪಿ ಹೇಳದೇ ಇದ್ರೂ ನಾನು ಪಕ್ಷದ ವ್ಯಕ್ತಿಯೇ ಎಂದರು. ಬಿಜೆಪಿಯವರು ಹೇಳಲಿ, ಬಿಡಲಿ, ನಾನು ಪಕ್ಷದಲ್ಲಿಯೇ ಮುಂದುವರಿಯುತ್ತೇನೆ.  ಪಕ್ಷ ಇಂಥವರ ಪರ ಕೆಲಸ ಮಾಡು ಅಂದ್ರೆ ನಾನು ಮಾಡುತ್ತೇನೆಯೇ ಹೊರತು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು […]