September 14, 2026

`ಕೈ ಕಮಲ’ ಕ್ರೆಡಿಟ್ ಗಲಾಟೆ – ಬಿಜೆಪಿ ಶಾಸಕ ಚಾಲನೆ ನೀಡಿದ್ದ ಕಾಮಗಾರಿಗೆ ಮತ್ತೆ ಭೂಮಿ ಪೂಜೆ

ಚಿಕ್ಕೋಡಿ: ಲಕ್ಷ್ಮಣ್ ಸವದಿ ಕ್ಷೇತ್ರ ಅಥಣಿಯಲ್ಲಿ ಕೈ ಕಮಲ ಮಧ್ಯೆ ಕ್ರೆಡಿಟ್ ಕಿತ್ತಾಟ ಶುರುವಾಗಿದೆ. ಯಕ್ಕಂಚಿ – ಮುಸಲ್ಯಾನಖೋಡಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ವಿಚಾರವಾಗಿ ಈಗಾಗಲೇ ಅಂದಿನ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ ನೀಡಿದ್ದ ಕಾಮಗಾರಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಮತ್ತೆ ಭೂಮಿ ಪೂಜೆ ನೆರವೇರಿಸಿದ್ದಾರೆ.PauseUnmute ಈ ವಿಚಾರಕ್ಕೆ ಮಹೇಶ್ ಕುಮಟಳ್ಳಿ ಗರಂ ಆಗಿದ್ದಾರೆ. ಈ ಬಗ್ಗೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮಹೇಶ್ ಕುಮಟಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಲಕ್ಷ್ಮಣ್ ಸವದಿ […]

‘ಗೃಹಜ್ಯೋತಿ’ ವಿಸ್ತರಣೆಗೆ ಮುಂದಾದ ‘ಗ್ಯಾರಂಟಿ’ ಸರ್ಕಾರ

ಬೆಂಗಳೂರು: ಗೃಹಜ್ಯೋತಿ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ರಾಜ್ಯದ ಕೋಟಿ ಕೋಟಿ ಮನೆಗಳಿಗೆ ಉಚಿತವಾಗಿ ಬೆಳಕು ನೀಡ್ತಿರೋ ಈ ಯೋಜನೆ. ದೇವರ ಅಂಗಳಕ್ಕೂ ಕಾಲಿಡಲಿದೆ. ಅಂದ್ರೆ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರೋ ದೇವಾಲಯಗಳಿಗೂ ಶೀಘ್ರದಲ್ಲೇ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​​ ಸಿಗಲಿದೆ. ಕೋಟಿ ಕುಟುಂಬಗಳ ಮನೆ ಮನಗಳಿಗೆ ಬೆಳಕು ನೀಡ್ತಿರೋ ಯೋಜನೆ ಗೃಹಜ್ಯೋತಿ ಆಗಿದೆ. ಈ ಯೋಜನೆಯನ್ನ ರಾಜ್ಯದ ಸಾಕಷ್ಟು ಮಂದಿ ಬಳಸುತ್ತಿದ್ದಾರೆ. 200 ಯೂನಿಟ್​​ನಷ್ಟು ಉಚಿತವಾಗಿ ವಿದ್ಯುತ್​ ಪಡೆಯುತ್ತಿದ್ರೂ ಕೆಲವರು ಯೋಜನೆಯ ವಿರುದ್ಧ ಕಿಡಿಕಾರ್ತಿದ್ದಾರೆ. ಇತ್ತೀಚಿಗೆ ಅಪಸ್ವರವೂ […]

ಹುಲಿ ಉಗುರು ಪೆಂಡೆಂಟ್ ಪ್ರಕರಣ: ಅರಣ್ಯಾಧಿಕಾರಿಗಳಿಂದ ಮತ್ತೊಂದು ದಾಳಿಗೆ ಪ್ಲಾನ್

ಬೆಂಗಳೂರು: ಹುಲಿ ಉಗುರು ಧರಿಸಿದ ಹಳ್ಳಿಕಾರ್ ಸಂತೋಷ್ ಬಿಗ್‌ಬಾಸ್ ಮನೆಯಲ್ಲಿ ಅರೆಸ್ಟ್ ಆದ ಬೆನ್ನಲ್ಲೆ, ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಸೆಲೆಬ್ರೆಟಿಗಳ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸೆಲೆಬ್ರಿಟಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಒತ್ತಡ ಹೆಚ್ಚಾಗುತ್ತಿದ್ದಂತೆ ಅರಣ್ಯಾಧಿಕಾರಿಗಳು ಹುಲಿ ಉಗುರು ಪೆಂಡೆಂಟ್ ಧರಿಸಿದ ಸೆಲೆಬ್ರೆಟಿಗಳಿಗೆ ನೋಟೀಸ್ ಜಾರಿ ಮಾಡಿ ನಿನ್ನೆ ತಲಾಶ್ ಮಾಡಿದ್ದಾರೆ. ಇದೇ ಬೆನ್ನಲ್ಲೆ ಈಗ ಮತ್ತೊಂದು ಬೆಳವಣಿಗೆ ನಡೆದಿದ್ದು ಅರಣ್ಯಾಧಿಕಾರಿಗಳು ಮತ್ತೊಂದು ದಾಳಿಗೆ ಪ್ಲಾನ್ ಮಾಡಿದ್ದಾರೆ. ಹೌದು ಸೆಲೆಬ್ರೆಟಿಗಳ ಮನೆಗಳ ಮೇಲೆ […]

ಲಾರಿ-ಟಾಟಾ ಸುಮೊ ನಡುವೆ ಭೀಕರ ಅಪಘಾತ, ಐವರು ದುರ್ಮರಣ

ಚಿಕ್ಕಬಳ್ಳಾಫುರ: ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಸುಮೊದಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದ್ರೆ, ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬಂದಿ […]

ಒಂದು ಪಂದ್ಯ, ಎರಡು ದಾಖಲೆ; ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ಗಳ ಜಯ

ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆದ್ದು ಬೀಗಿದ್ದ ಕ್ರಿಕೆಟ್‌ ಶಿಶುಗಳಿಗೆ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲಾಗಿದೆ. ಆಸೀಸ್‌ ಬೌಲರ್‌ಗಳ ದಾಳಿಗೆ ನಲುಗಿದ ನೆದರ್ಲೆಂಡ್ಸ್‌ ಎರಡಂಕಿ ದಾಟುವಲ್ಲೂ ವಿಫಲವಾಗಿಯಿತು. ಆ ಮೂಲಕ ಕೇವಲ 90 ರನ್‌ಗಳಿಗೆ ಆಲೌಟ್‌ ಆಗಿ ಕ್ರಿಕೆಟ್‌ ಇತಿಹಾಸದಲ್ಲಿ ಕೆಟ್ಟ ದಾಖಲೆ ಬರೆದಿದೆ. ಇತ್ತ ಮ್ಯಾಕ್ಸ್‌ವೆಲ್‌ ತೂಫಾನ್‌ ಶತಕ ಹಾಗೂ ದಾಖಲೆಯ 309 ರನ್‌ಗಳ ಜಯದೊಂದಿಗೆ ಆಸ್ಟ್ರೇಲಿಯಾ ಒಂದೇ ಪಂದ್ಯದಲ್ಲಿ ಎರಡು ಐತಿಹಾಸಿಕ ದಾಖಲೆ ಬರೆಯಿತು. ಹೌದು, ನವದೆಹಲಿಯಲ್ಲಿ ನಡೆದ ವಿಶ್ವಕಪ್‌ 2023 ಟೂರ್ನಿಯ ನೆದರ್ಲೆಂಡ್ಸ್‌ […]

20 ಸಾವಿರ ಕೊಟ್ಟು ಹುಲಿ ಉಗುರು ಖರೀದಿಸಿದ್ದರಾ ವರ್ತೂರ್ ಸಂತೋಷ್

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ವರ್ತೂರ್ ಸಂತೋಷ್ ಹೇಳಿದ್ದಾರೆ ಎನ್ನಲಾದ ಮಾಹಿತಿಯನ್ನು ಸಖತ್ ಸೌಂಡ್ ಮಾಡುತ್ತಿದೆ. ತಾವು ಧರಿಸಿದ್ದ ಹುಲಿ ಉಗುರನ್ನು ಅವರು 20 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದರಂತೆ. ಹಾಗಂತ ಅರಣ್ಯಾಧಿಕಾರಿಗಳಿಗೆ  ಸಂತೋಷ್ ಹೇಳಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು […]

ಸರ್ಕಾರದ ಹಣ ತಿಂದಿಲ್ಲವೆಂದು ಹೆಚ್‍ಡಿಕೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡ್ಲಿ: ಬಾಲಕೃಷ್ಣ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು  ನಾನು ಸರ್ಕಾರದ ಹಣ ತಿಂದಿಲ್ಲ ಎಂದು ಹೇಳಿ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಸವಾಲೆಸೆದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿಕೆಶಿ ಖಜಾನೆ ವೃದ್ಧಿಗೆ ಇದನ್ನ ಮಾಡ್ತಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಗಳಿಗೆ ನಾವು ಉತ್ತರ ಕೊಡೋದು ಸೂಕ್ತವಲ್ಲ. ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ಬಾಲಿಶವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಲ್ಲಿ ಹತಾಶೆ ಮನೋಭಾವ ಕಾಣುತ್ತಿದೆ. ಅವರಿಗೆ ಡಿಕೆ ಶಿವಕುಮಾರ್ ಡಿಸಿಎಂ ಆಗಿರೋದು, ನಾವು ಒಕ್ಕಲಿಗರು ಶಾಸಕರಾಗಿರೋದನ್ನು ಅರಗಿಸಿಕೊಳ್ಳಲು […]

ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ದೆಹಲಿ ನಾಯಕರು ಪ್ರಯೋಗ ಮಾಡುತ್ತಿದ್ದಾರೆ: ಜಗದೀಶ್ ಶೆಟ್ಟರ್ ವ್ಯಂಗ್ಯ

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ ಹೆಸರು ಕೇಳಿ ಬರುವುದೇ ಆಯಿತು. ಯಾರು ಅಧ್ಯಕ್ಷರು ಎಂದು ಬಹಿರಂಗವಾಗಿ ಹೇಳಲಿ. ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಪ್ಲಸ್ ಮೈನಸ್ ನೋಡಿ ಅದು ಫೇಲ್ ಆಯಿತು ಅಂದರೆ ಮತ್ತೆ ಬೇರೆ ಹೆಸರು ಬಿಡುತ್ತಾರೆ. ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ಪ್ರಯೋಗ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಇದು ಊಹಾಪೋಹ […]

ಬರ ನಿರ್ವಹಣೆಗೆ ಸರ್ಕಾರ ಬಿಡಿಗಾಸೂ ಕೊಟ್ಟಿಲ್ಲ

ಉಡುಪಿ: 6 ತಿಂಗಳ ಆಡಳಿತದಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿ ಕುಸಿತ ಕಂಡಿದೆ. ಕಂಡು ಕೇಳರಿಯದ ಬರ ಜನರನ್ನು, ರೈತರನ್ನು ಕಾಡುತ್ತಿದೆ. ರಾಜ್ಯದ 195 ತಾಲೂಕಿನಲ್ಲಿ ಬರ ಘೋಷಣೆ ಮಾಡಿದ್ದರೂ ಪರಿಹಾರಕ್ಕೆ ಬಿಡಿಗಾಸು ಬಿಡುಗಡೆ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಳೆ ಕೊರತೆಯಿಂದ 30 ಸಾವಿರ ಕೋಟಿ ರೂ. ನಷ್ಟ ಎಂದು ಸರ್ಕಾರ ವರದಿಯಲ್ಲಿ ನೀಡಿದೆ. ತಕ್ಷಣ ಕನಿಷ್ಟ 5 ಸಾವಿರ ಕೋಟಿ ರೂ. ಕೂಡಾ ಬಿಡುಗಡೆ ಮಾಡಿಲ್ಲ. ಕೇಂದ್ರಕ್ಕೆ […]

ಡಿಕೆಶಿ ಕಾಡಾನೆ ಥರ ಆಗ್ತಿದ್ದಾರೆ: ಸಿಪಿ ಯೋಗೇಶ್ವರ್ ಟಾಂಗ್

ಬೆಂಗಳೂರು: ಡಿಕೆಶಿ ತುಂಬಾ ವೈಲ್ಡ್ ಆಗುತ್ತಿದ್ದಾರೆ. ಅವರು ಕಾಡಾನೆ ಥರ ಆಗುತ್ತಿದ್ದಾರೆ. ಯಾವಾಗ ಖೆಡ್ಡಾಕ್ಕೆ ಬೀಳುತ್ತಾರೆ ಎಂದು ನೋಡಬೇಕು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್, ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಕುರಿತು ಡಿಕೆಶಿ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ರಾಮನನಗರ ಜಿಲ್ಲೆ ಆಡಳಿತಾತ್ಮಕವಾಗಿ ಈಗ ಸರಿ ಇದೆ. ಹೌದು ನಾವೆಲ್ಲ ಬೆಂಗಳೂರಿನವರೇ. ಒಂದು ಕಾಲದಲ್ಲಿ ಬೆಂಗಳೂರು ಬೆಳೆದಿರಲಿಲ್ಲ. ಬೆಂಗಳೂರು ಬೆಳೆಯುತ್ತಿದ್ದಂತೆ ಒತ್ತಡ […]