September 13, 2026

ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು: 2022-23 ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿಯನ್ನು ಕರ್ನಾಟಕ ಲೋಕಾಯುಕ್ತ  ಸಾರ್ವಜನಿಕಗೊಳಿಸಿದೆ. ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ. ಈ ಬಾರಿಯ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಬೇಕಿತ್ತು. ಆಸ್ತಿ ವಿವರ ಸಲ್ಲಿಸದ ಎಲ್ಲಾ ಜನಪ್ರತಿನಿಧಿಗಳಿಗೆ ಸೆಪ್ಟೆಂಬರ್ 1ರಂದು […]

ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣ ಒದಗಿಸ್ತೇವೆ: ಸಿದ್ದರಾಮಯ್ಯ

ಬೆಂಗಳೂರು: ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಘೋಷಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ನೂತನ 262 ಅಂಬುಲೆನ್ಸ್‍ಗಳ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಯಾರೂ ಚಿಕಿತ್ಸೆ ಸಿಗದೇ ಸಾಯಬಾರದು. ಅಪಘಾತ ವೇಳೆ, ಹೆರಿಗೆ ವೇಳೆ ಚಿಕಿತ್ಸೆ, ಹೃದಯಾಘಾತ ಹೀಗೆ ಆದಾಗ ಚಿಕಿತ್ಸೆ ಸಿಗದೇ ಸಾಯಬಾರದು. ಅದಕ್ಕಾಗಿಯೇ 2008 ರಲ್ಲಿ ತುರ್ತು ಆರೋಗ್ಯಸೇವೆ ತರಲಾಯ್ತು. 236 ತಾಲೂಕುಗಳಿದ್ದು, ತಲಾ ನಾಲ್ಕರಂತೆ ಕನಿಷ್ಟ 840 ಅಂಬುಲೆನ್ಸ್ ಇರಬೇಕು. […]

108 ಅಂಬುಲೆನ್ಸ್‌ನವ್ರು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ತಾರೆ

ಬೆಂಗಳೂರು: 108 ಅಂಬುಲೆನ್ಸ್‌ ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತದೆ. 108 ಅಂಬುಲೆನ್ಸ್‌ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಬಳಿ ನಡೆದ ಕಾರ್ಯಕ್ರಮದಲ್ಲಿ ನೂತನ 262 ಅಂಬುಲೆನ್ಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.  ಈ ವೇಳೆ 108 ಅಂಬುಲೆನ್ಸ್‌ ಕೆಲ ಚಾಲಕರ ವಿರುದ್ಧ ಡಿಕೆಶಿ ಅಸಮಾಧಾನ ಹೊರಹಾಕಿದರು. ಕನಕಪುರದಲ್ಲಿ ಮೆಡಿಕಲ್ […]

ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ

ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರಂತೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಎರಡು ಆಪರೇಷನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಸೆ ಸೀರಿಯಲ್ ನಲ್ಲಿ ಮಂಡ್ಯ ರಮೇಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. […]

ಜಾತಿಗಣತಿ ವರದಿ ಬಂದ ಬಳಿಕ‌ವೇ ಅನುಷ್ಠಾನಕ್ಕೆ ತೀರ್ಮಾನ 

ಬೆಂಗಳೂರು: ಜಾತಿಗಣತಿ ವರದಿ ಬಂದ ಬಳಿಕ ಜಾರಿ ಮಾಡಬೇಕಾ? ಬೇಡವಾ ಅಂತ ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡ್ತಾರೆ ಅಂತ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಜಾತಿಗಣತಿ ವರದಿ ಜಾರಿ ವಿಚಾರ‌ವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಜನವರಿವರೆಗೆ ವಿಸ್ತರಣೆ ಮಾಡಲಾಗಿದೆ. ಅವರು ಮೊದಲು ಜಾತಿಗಣತಿ ವರದಿ ಕೊಡಲಿ ಆಮೇಲೆ ಬಿಡುಗಡೆ ಮಾಡಬೇಕಾ, ಬೇಡ್ವಾ? ಅನ್ನೋದನ್ನ ಚರ್ಚೆ ಮಾಡ್ತೀವಿ. ನಾನು, ‌ಸಿಎಂ ಯಾರು ಕೂಡಾ ವರದಿ ನೋಡಿಲ್ಲ. […]

ಮತಗಟ್ಟೆಯಲ್ಲಿ ಕೈ, ಬಿಜೆಪಿ, ಬಿಆರ್‌ಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಹೈದರಾಬಾದ್: ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ನಡುವೆ ಮತಗಟ್ಟೆಯೊಂದರಲ್ಲಿ ಮೂರು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಜನಗಾಂವ್‍ನ ಮತಗಟ್ಟೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಬಿಆರ್ ಎಸ್ ಕಾರ್ಯಕರ್ತರ  ನಡುವೆ ಮಾರಾಮಾರಿ ನಡೆದಿದೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ನಡೆಯುತ್ತಿದ್ದಂತೆಯೇ ಮತಗಟ್ಟೆಯಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ವೀಡಿಯೊದಲ್ಲಿ, ರಾಜಕೀಯ ಪಕ್ಷಗಳ ಕಾರ್ಯಕರ್ತರು ಜನಾಂವ್‍ನ ಮತಗಟ್ಟೆಯ ಹೊರಗೆ ಪರಸ್ಪರ ತಳ್ಳಿಕೊಳ್ಳುತ್ತಿರುವುದನ್ನು ಕಾಣಬಹುದು. ಆದರೆ […]

ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ‘ಕೈ’ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ‌‌. ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ. ಇಂದಿರಾ ಗಾಂಧಿರವರು ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದರು. ದೇಶಕ್ಕಾಗಿ ಇಂದಿರಾ ಗಾಂಧಿ ಬಹಳ ದೃಢವಾದ ನಿರ್ಧಾರ ತೆಗೆದುಕೊಳ್ತಿದ್ದರು. ಹೀಗಾಗಿ ಇಂದಿರಾ ಗಾಂಧಿರವರನ್ನು ಉಕ್ಕಿನ ಮಹಿಳೆ ಎಂದು ಕರೆಯುತ್ತಿದ್ದರು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ […]

ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ.  ತಾಯಿ ಹಾಗೂ ಮಗಳು ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ಬತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದಿದ್ದಾರೆ. ರಸ್ತೆ ಬದಿ ತಂತಿ ತುಂಡಾಗಿ ನೆಲದಲ್ಲಿ ಬಿದ್ದಿತ್ತು. […]

ಮುಸ್ಲಿಂ ಸ್ಪೀಕರ್ ಬಗೆಗಿನ ಜಮೀರ್ ಹೇಳಿಕೆಗೆ ಖಾದರ್ ಆಕ್ಷೇಪ

ಮಂಗಳೂರು: ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ […]

ಕುಮಾರಸ್ವಾಮಿ ಹೇಳಿದ ವಿವೇಕಾನಂದರೇ ಬೇರೆ, ವರ್ಗಾವಣೆಯಾದ ವಿವೇಕಾನಂದರೇ ಬೇರೆ: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಯತೀಂದ್ರ ಅವರ ವಿಡಿಯೋ ವೈರಲ್ ಆದ ನಂತರ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ ಅವರು ಈ ಹೆಸರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ವಿವೇಕಾನಂದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿವೇಕಾನಂದ ಅನ್ನೋರು ಮೈಸೂರು ಬಿಇಒ. ಈಗ ವರ್ಗಾವಣೆ ಆಗಿರುವ ವಿವೇಕಾನಂದ ಪೊಲೀಸ್ ಅಧಿಕಾರಿಯಾಗಿದ್ದಾರೆ. ಇವರು ವಿವಿ ಪುರಂಗೆ ಪೊಲೀಸ್ ಇನ್ಸ್​ಪೆಕ್ಟರ್ ಆಗಿ ವರ್ಗಾವಣೆ […]