May 30, 2026
#ರಾಷ್ಟ್ರೀಯ

ಬೆಂಗಳೂರು ಕುಡಿಯುವ ನೀರಿಗೆ ಕಾವೇರಿಯಿಂದ 24 ಟಿಎಂಸಿ ಬಳಕೆ: ಡಿಕೆಶಿ


ನವದೆಹಲಿ: ಬೆಂಗಳೂರಿನಲ್ಲಿ   ಕುಡಿಯುವ ನೀರಿಗಾಗಿ ಕಾವೇರಿ ಜಲಾನಯನ ಪ್ರದೇಶಗಳಿಂದ 24 ಟಿಎಂಸಿ ನೀರು ಮೀಸಲಿಡಲು ಸರ್ಕಾರ ಆದೇಶಿಸಿದ್ದು, ಈ ನೀರಿನ ಬಳಕೆಗೆ ಬೆಂಗಳೂರು ಜಲ ಮಂಡಳಿಗೆ ಅಧಿಕಾರ ನೀಡಿದೆ ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

https://imasdk.googleapis.com/js/core/bridge3.601.0_en.html#goog_815708281

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರಿಗಾಗಿ 24 ಟಿಎಂಸಿ ನೀರು ಬಳಕೆಗೆ ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ಈ ನೀರಿನ ಬಳಕೆಗೆ ಸರ್ಕಾರ ಈಗ ಆದೇಶಿಸಿದೆ. ಇನ್ಮುಂದೆ ಕಡ್ಡಾಯವಾಗಿ ಈ ನೀರು ಬೆಂಗಳೂರಿಗೆ ಬಳಕೆಯಾಗಲಿದೆ ಎಂದರು. 

ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ ಚರ್ಚೆ ಆರಂಭವಾಗಲಿದೆ. ಶೀಘ್ರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಬಳಿಕ ಇದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಬಹುದು. ಈ ಹಿನ್ನೆಲೆ ಕರ್ನಾಟಕ ಹೇಗೆ ತಯಾರಿಯಾಗಬೇಕು ಎನ್ನುವ ಬಗ್ಗೆ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು. 

ಮೇಕೆದಾಟು ಯೋಜನೆಯಿಂದ ಬರಗಾಲದಲ್ಲಿ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಬರಗಾಲದ ಈ ಸಂದರ್ಭದಲ್ಲಿ ಹೆಚ್ಚು ಒತ್ತು ನೀಡಿ ಈ ಬಗ್ಗೆ ಚರ್ಚಿಸಲಾಗುವುದು. ಸಾಧ್ಯವಾದಷ್ಟು ಬೇಗ ಅನುಮತಿ ನೀಡುವ ಬಗ್ಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

Leave a comment

Your email address will not be published. Required fields are marked *