September 13, 2026

ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದರ ವರ್ಗಾವಣೆ ಎಲ್ಲಿಗೆ ಆಗಿದೆ? ಆ ಕ್ಷೇತ್ರದ ವ್ಯಾಪ್ತಿ ಯಾವುದು? ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ವಿಡಿಯೋ ವೈರಲ್ ಬಗ್ಗೆ ಮೈಸೂರಿನಲ್ಲಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ದಾಖಲೆ ಇಲ್ಲದೇ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ […]

ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣ- ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ

ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು..?, ಡೀಲ್ ಮಾಡೋದಕ್ಕೆ ಸಿಮ್ ಖರೀದಿ ಮಾಡಿಸಿಕೊಟ್ಟಿದ್ದು ಯಾರು ಎಂಬುದರ ಇಂಚಿಂಚು ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ತಪ್ಪೊಪ್ಪಿಗೆ ಪ್ರತಿಯಲ್ಲಿ ಏನಿದೆ..?: 2018ರಲ್ಲಿ ಅಭಿನವ ಹಾಲಶ್ರೀಯನ್ನು ಭೇಟಿ ಮಾಡಿದ್ದೆ. ನನಗೂ ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ […]

ಮತೀಯ ವಿಚಾರಗಳ ವಿರುದ್ಧ ಹೋರಾಟದ ಎಚ್ಚರಿಕೆ 

ಬೆಂಗಳೂರು: ಮುಸ್ಲಿಂ ಸಮುದಾಯದ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಮಾಡುವ ಮೂಲಕ ಬಿಜೆಪಿಯ ದೊಡ್ಡ ದೊಡ್ಡ ಶಾಸಕರೂ ಅವರಿಗೆ ನಮಸ್ಕರಿಸಿ ನಿಲ್ಲುವಂತೆ ಮಾಡಿದ್ದೇವೆ ಎಂಬ ವಸತಿ ಸಚಿವ ಜಮೀರ್ ಖಾನ್ ಹೇಳಿಕೆಗೆ ಸಂಬಂಧಿಸಿದಂತೆ ನಾವು ಸ್ಪೀಕರ್​ ಸ್ಥಾನಕ್ಕೆ ಗೌರವವನ್ನು ಕೊಡುತ್ತೇವೆ. ಈ ರೀತಿಯ ಮತೀಯ ವಿಚಾರಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್​ ಅಶೋಕ್​ ತಿರುಗೇಟು ನೀಡಿದ್ದಾರೆ. ನೆಲಮಂಗಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಮೇರು ವ್ಯಕ್ತಿತ್ವಕ್ಕೆ ಗೌರವ ಕೊಡುತ್ತೇವೆ. ಈ […]

ಬೆಳಗಾವಿಯಲ್ಲಿ ಬರ ನಿರ್ವಹಣೆಗಾಗಿ ಕರೆದ ಸಭೆಗೆ “ಶಾಸಕರ ಬರ”!

ಬೆಳಗಾವಿ: ಕುಂದಾ ನಗರಿ ಬೆಳಗಾವಿ (Belagavi) ಜಿಲ್ಲೆಯ ಬರ ನಿರ್ವಹಣೆಗಾಗಿ ಕರೆದ ಸಭೆಗೆ “ಶಾಸಕರ ಬರ” ಎದುರಾಗಿದ್ದು ಇಂತಹ ಜನಪ್ರತಿನಿಧಿಗಳಿಂದ ಪ್ರಜ್ಞೆಗಳು ಏನನ್ನ ನಿರೀಕ್ಷೆ ಮಾಡಬಹುದು ಎಂದು ಪ್ರಶ್ನೆ ಮೂಡಿದೆ. ತಾಲೂಕಿನ ಹಲಗಾ ಮತ್ತು ಬಸ್ತವಾಡ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸುವರ್ಣ ವಿಧಾನಸೌಧದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಬರ ನಿರ್ವಹಣಾ ಸಭೆ ಕರೆಯಲಾಗಿದೆ. ಆದರೆ ಸಚಿವರ ಸಭೆಗೆ ಬಹುತೇಕ ಶಾಸಕರು ಗೈರಾಗಿದ್ದಾರೆ. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಂದ್ರ ತಮ್ಮಣ್ಣವರ, […]

68 ಸಾವಿರ ದಂಡ ಪಾವತಿಸಿದ್ದೇನೆ – ಲುಲು ಮಾಲ್‌ಗೆ ಕರೆಂಟ್‌ ಶಾಕ್‌ ಕೊಟ್ಟ ಕುಮಾರಸ್ವಾಮಿ

ಬೆಂಗಳೂರು: ದೀಪಾವಳಿ ಮನೆಯ ದೀಪಾಲಂಕಾರಕ್ಕೆ ಅನುಮತಿ ಪಡೆಯದೇ ವಿದ್ಯುತ್‌ ಪಡೆದಿದ್ದಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ. ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 71 ಯೂನಿಟ್‌ ವಿದ್ಯುತ್‌ಗೆ 3 ಪಟ್ಟು ದಂಡ ವಿಧಿಸಿದ್ದಾರೆ. ಒಟ್ಟು 2,526 ರೂಪಾಯಿ ದಂಡ ಹಾಕಬೇಕಿತ್ತು. ಆದರೆ ನನ್ನ ಮನೆಗೆ ತೆಗೆದುಕೊಂಡಿರುವ 33 kV ವಿದ್ಯುತ್‌ ಬಳಕೆ ಸೇರಿ 68,526 ರೂ. ದಂಡ ವಿಧಿಸಿದ್ದಾರೆ. ಒಬ್ಬ ಮಾಜಿ ಸಿಎಂಗೆ ಹೀಗೆ ಆದರೆ ಸಾಮಾನ್ಯ […]

ಮಹಿಳೆಯಿಂದ ಬ್ಲ್ಯಾಕ್‌ಮೇಲ್ – ಎಂಪಿ ದೇವೇಂದ್ರಪ್ಪ ಪುತ್ರನಿಂದ ದೂರು, ಎಫ್‌ಐಆರ್ ದಾಖಲು

ಮೈಸೂರು: ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗ ರಂಗನಾಥ್ ಮಹಿಳೆಯ ವಿರುದ್ಧ ಬ್ಲ್ಯಾಕ್‌ಮೇಲ್ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೈಸೂರಿನ (Mysuru) ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಜೊತೆಗಿದ್ದ ಫೋಟೋ ಹಾಗೂ ಮಾತನಾಡಿರುವ ಆಡಿಯೋ ಇಟ್ಟುಕೊಂಡು ಮಹಿಳೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ರಂಗನಾಥ್ ಪತ್ನಿಗೆ ಫೋಟೋ ಮತ್ತು ಆಡಿಯೋ ಕಳುಹಿಸುವ ಬೆದರಿಕೆ ಹಾಕಿದ್ದು, 15 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.  ಮಹಿಳೆ ಹಾಗೂ ಶ್ರೀನಿವಾಸ್ ಎಂಬವರ […]

ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡ್ತೀನಿ

ಬೆಂಗಳೂರು: ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸೋಮಣ್ಣ ಕಾಂಗ್ರೆಸ್‌ಗೆ ಬರುವುದಕ್ಕೆ ನಮ್ಮ ವಿರೋಧ ಏನು ಇಲ್ಲ. ಸೋಮಣ್ಣ ಬಂದರೆ ಸ್ವಾಗತ ಮಾಡುತ್ತೇನೆ. ಆದರೆ ಏನ್ ಬೆಳವಣಿಗೆ ಆಗುತ್ತಿದೆ ನಮಗೆ ಗೊತ್ತಿಲ್ಲ ಎಂದು ತಿಳಿಸಿದರು.  ಸೋಮಣ್ಣ ಈಗ ಬಿಜೆಪಿಯಲ್ಲಿ ಇದ್ದು, ಪ್ರಭಾವಿ ಮುಖಂಡರು ಆಗಿದ್ದಾರೆ. ನಾನು ಈಗ ಅದರ ಬಗ್ಗೆ ಪ್ರತಿಕ್ರಿಯೆ ಮಾಡುವುದು ಸರಿಯಲ್ಲ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದರು. ಎಲ್ಲಾ ನಾಯಕರಿಗೂ ರಾಜಕೀಯ ಕ್ಷೇತ್ರದಲ್ಲಿ ಅವರಿಗೇ ಅದಂತಹ […]

ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುತ್ತೇವೆ ಅಂತ ಅವತ್ತು ಕುಮಾರಸ್ವಾಮಿ ಅವರು ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು. ಆದರೆ ಕುಮಾರಸ್ವಾಮಿ ಅವರು ಫೋನ್‌ನಲ್ಲಿ ಮಾತನಾಡುವಾಗ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡುವ ವಿಚಾರ ಪ್ರಸ್ತಾಪ ಮಾಡಲೇ ಇಲ್ಲ. ಹಾಗಾಗಿ ನಾವು ಬರಲಿಲ್ಲ ಎಂದು ಶಾಸಕ ಎಸ್‌ಟಿ ಸೋಮಶೇಖರ್  ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿ ಇದ್ದಾಗ ನಮಗೆ ಕರೆ ಬಂದಿದ್ದು ಹೌದು. ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಯಿಂದ ಕರೆ ಬಂತು. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ […]

ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಬೀರಿದೆ 

ಹುಬ್ಬಳ್ಳಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ. ಆದ್ದರಿಂದಲೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿ ರಿಪೇರಿ ಮಾಡಲಾರದಷ್ಟೂ ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು, ವೀಕ್ಷಕರು ಸಹ ಬಂದಿರಲಿಲ್ಲ ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ. […]

ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ತೆರಿಗೆ ವಂಚನೆ ಹಿನ್ನೆಲೆ ಬೆಂಗಳೂರಿನ ಫುಡ್ ಇಂಡಸ್ಟ್ರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಹಾಗೂ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ಐಟಿ ಕಣ್ಣಿಟ್ಟಿದೆ. ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ […]