September 13, 2026

ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಮಗ ಯತೀಂದ್ರ ಸಿದ್ದರಾಮಯ್ಯ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆ ಜೊತೆ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಬರೆದಿರುವ ಹೆಚ್‌ಡಿ ಕುಮಾರಸ್ವಾಮಿ, ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ […]

ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

ಬೆಂಗಳೂರು: ಪುತ್ರ ಯತೀಂದ್ರ ತಂದೆ ಸಿದ್ದರಾಮಯ್ಯನವರ ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್‌ ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ. ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ. ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ.   […]

ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

ಮುಂಬೈ: ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) 50ನೇ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನ ನುಚ್ಚುನೂರು ಮಾಡಿದ್ದಾರೆ. 2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ ವಿರುದ್ಧ […]

ಬಿಜೆಪಿಯಲ್ಲಿ ಗೆದ್ದಿದ್ದೇನೆ, ಹಾಗಂತ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಮಾಡಬಾರದಾ? 

ರಾಮನಗರ: ಹಿಂದೆ ಮೈಸೂರು ಉಸ್ತುವಾರಿ ಸಚಿವನಾಗಿದ್ದ ವೇಳೆ ಕೇವಲ ಮೂರು ಕ್ಷೇತ್ರದಲ್ಲಷ್ಟೇ ಬಿಜೆಪಿ ಇತ್ತು. ಹೀಗಿದ್ದರೂ, ಉಳಿದ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೆ. ಅದೇ ರೀತಿ ಈಗಲೂ ನಡೆಯುತ್ತಿದೆ. ಬಿಜೆಪಿಯಲ್ಲಿ ನಾನು ಗೆದ್ದಿದ್ದೇನೆ. ಹಾಗಂತ ಕಾಂಗ್ರೆಸ್  ಸರ್ಕಾರದ ಕಾರ್ಯಕ್ರಮ ಮಾಡಬಾರದಾ ಎಂದು ಶಾಸಕ ಎಸ್‌ಟಿ ಸೋಮಶೇಖರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು ವಿಚಾರವಾಗಿ ಕುಂಬಳಗೋಡು ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಂಬಳಗೋಡು ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಪ್ಲ್ಯಾನ್ ಆಗಿತ್ತು. ಹೀಗಾಗಿ ವಿಜಯೇಂದ್ರ […]

ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು, ಒಗ್ಗಟ್ಟಿನಿಂದ ಕೆಲಸ ಮಾಡೋಣ: ವಿಜಯೇಂದ್ರ

ಬೆಂಗಳೂರು: ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಕರ್ನಾಟಕ ಬಿಜೆಪಿಯ 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್‌ ಕುಮಾರ್‌ ಕಟೀಲ್‌ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ […]

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಆದ್ರೆ, ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ. ಹೌದು.. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರ ಗೈರು ಎದ್ದು […]

ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ MBBS ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ದಪ್ಪ ಇದ್ದೀನಿ. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಎಂದು ಬೇಸರಗೊಂಡು ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಮಂಗಳೂರಿನ ಮೆಡಿಕಲ್ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಜೀವನದಲ್ಲಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್‌ನೋಟ್ ಬರೆದಿಟ್ಟಿದ್ದಳು. ನಂತರ ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಡೆತ್‌ನೋಟ್‌ನಲ್ಲೇನಿತ್ತು?ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಣ್ತಾ ಇಲ್ಲ. ಎಂಬಿಬಿಎಸ್ ಮುಗಿಸಬೇಕು ಅಂತಾ ತುಂಬಾ […]

ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ದೇವೇಗೌಡರು ತುಂಬಾ ಖುಷಿ ಪಟ್ಟರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಸೇರಿಕೊಂಡು ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಿಲು ಸೂಚನೆ ನೀಡಿದ್ದಾರೆ. ಜೆಡಿಎಸ್-ಬಿಜೆಪಿ ಎರಡೂ ಒಟ್ಟಿಗೆ ಕೆಲಸ ಮಾಡಬೇಕು. […]

ನಿನ್ನ ನೇತೃತ್ವದಲ್ಲಿ ಪಕ್ಷಕ್ಕೆ ಶಕ್ತಿ ತುಂಬೋಣ – ಬೊಮ್ಮಾಯಿ ಆಶೀರ್ವಾದ ಪಡೆದ ವಿಜಯೇಂದ್ರ

ಬೆಂಗಳೂರು: ಶಾಸಕ ಬಿ ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ. ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು […]

ಫೋಟೋ ಶೂಟ್ ವೇಳೆ ಕಿರಿಕ್ – ಯುವಕನ ಇರಿದು ಕೊಂದ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಫೋಟೋ ಶೂಟ್ ವೇಳೆ ಕಿಡಿಗೇಡಿಗಳು ಯುವಕನೊರ್ವನನ್ನ ಚಾಕು ಹಾಗೂ ಕೀ ಚೈನ್‍ನಿಂದ ಇರಿದು ಕೊಂದ ಘಟನೆ ದೊಡ್ಡಬಳ್ಳಾಪುರದ ರಾಮೇಶ್ವರ ಸಮೀಪದ ಡಾಬಾ ಒಂದರ ಬಳಿ ನಡೆದಿದೆ. ಕಚೇರಿಪಾಳ್ಯದ ನಿವಾಸಿ ಸೂರ್ಯ (22) ಹತ್ಯೆಗೀಡಾದ ದುರ್ದೈವಿ. ಹತ್ಯೆಗೀಡಾದ ಯುವಕ ಹಾಗೂ ಆತನ ಸ್ನೇಹಿತರು ಹಬ್ಬದ ಸಲುವಾಗಿ ಸಿಂಗರಿಸಿದ್ದ ಡಾಬಾದ ಮುಂದೆ ಫೋಟೋ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಬಂದ ಯುವಕರ ತಂಡ ತಮ್ಮ ಫೊಟೋ ತೆಗೆಯುವಂತೆ ಹೇಳಿದೆ. ಬಳಿಕ ಅವರಿಂದ ಕ್ಯಾಮೆರಾ ಕಿತ್ತುಕೊಂಡು ಗಲಾಟೆ ಮಾಡಿದ್ದಾರೆ. ಈ ವೇಳೆ ಚಾಕು […]