July 30, 2026

ಡಿಟೆಕ್ಟಿವ್ ಗಜವದನ ಚಿತ್ರಕ್ಕೆ ಮುಹೂರ್ತ

ಈ ಹಿಂದೆ ‘ಮಂಡ್ಯದ ಹುಡುಗರು’, ‘ಗರ್ನಲ್’ ಚಿತ್ರಗಳನ್ನು ನಿರ್ದೇಶಿಸಿದ್ದ ಜೆ‌.ಜೆ.ಶ್ರೀನಿವಾಸ್  ನಿರ್ದೇಶಿಸಿ ಹಾಗೂ ನಿರ್ಮಾಣವನ್ನು ಮಾಡುತ್ತಿರುವ ‘ಡಿಟೆಕ್ಟಿವ್‌ ಗಜವದನ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಇಟ್ಟಮಡುವಿನ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಸಕ್ರಿಯರಾಗಿರುವ ಬಸು ಕುಮಾರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಇದು ನನ್ನ ನಿರ್ದೇಶನದ ಮೂರನೇ ಚಿತ್ರ ಎಂದು ಮಾತನಾಡಿದ […]

ಮಹಿಳಾ ಪ್ರಧಾನ ಚಿತ್ರಕ್ಕೆ ಕಾಶಿಮಾ ನಾಯಕಿ

ಸೌತ್ ಇಂಡಿಯಾ ಸಿನಿಮಾದ ಮೂಲಕ ಕನ್ನಡ ಚಿತ್ರೋದ್ಯಮದಲ್ಲಿ ಮಿಂಚಿದ್ದ ನಟಿ ಕಾಶಿಮಾ ರಫಿ (Kashima Rafi) ಇದೀಗ ಮತ್ತೊಂದು ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ರಾಜೇಶ್ ಎನ್ನುವವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಕೂಡ ಶುರುವಾಗಿದೆ. ಕಾಶಿಮಾ ರಫಿ ಅವರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟಿಸಬೇಕು ಎನ್ನುವುದು ಬಹುದಿನಗಳ ಆಸೆಯಂತೆ. ಈ ಸಿನಿಮಾದ ಮೂಲಕ ಅದು ಈಡೇರಿದೆ. ಇಷ್ಟು ಬೇಗ ಇಂಥದ್ದೊಂದು ಅವಕಾಶ ನನಗೆ ಬರುತ್ತದೆ ಎಂದು ನಂಬಿರಲಿಲ್ಲ ಎಂದು […]

ಹಿಜಬ್ ನಿಷೇಧ ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ

ಮೈಸೂರು: ಹಿಜಬ್ ನಿಷೇಧ ಆದೇಶ ವಾಪಸ್ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಎದ್ದಿದೆ. ಈ ಸಂಬಂಧ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಿಜಬ್ ನಿಷೇಧ ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ. ಯಾರೋ ಪ್ರಶ್ನೆ ಕೇಳಿದ್ರು. ಆಗ ಆದೇಶ ವಾಪಸ್ಸಿಗೆ ಯೋಚನೆ ಮಾಡ್ತಿದ್ದೀವಿ ಅಂತಷ್ಟೇ ಹೇಳಿದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸ್ತೀವಿ ಎಂದು ಹೇಳಿದ್ದಾರೆ.  ಈ ಮೂಲಕ ಭಾರೀ ವಿವಾದದ ಬಳಿಕ ಸಿಎಂ ಎಚ್ಚೆತ್ತುಕೊಂಡು ಇಂದು ಹೇಳಿಕೆ ಬದಲಿಸಿದ್ರಾ ಎಂಬ […]

ಹಿಜಬ್‌ ನಮ್ಮ ಹಕ್ಕು, ಇನ್ಮುಂದೆ ಅಣ್ಣ-ತಮ್ಮಂದಿರಂತೆ ಬದುಕೋಣ 

ಮಂಡ್ಯ: ಹಿಜಬ್ ನಮ್ಮ ಸಂಸ್ಕೃತಿ, ನಮ್ಮ ಹಕ್ಕು, ಅದು ವಾಪಸ್ ಬರುತ್ತೆ ಎಂಬ ನಂಬಿಕೆಯಿದೆ. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ಇನ್ಮುಂದೆ ಅಣ್ಣ-ತಮ್ಮಂದಿರ ರೀತಿ ಬದುಕೋಣ ಎಂದು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‌ ಕರೆ ನೀಡಿದ್ದಾರೆ. ಮಂಡ್ಯದ ಪಿಇಎಸ್‌ ಕಾಲೇಜಿನಲ್ಲಿ ʻಜೈ ಶ್ರೀರಾಮ್‌ʼ ಘೋಷಣೆಗೆ ಕೂಗುತ್ತಿದ್ದ ಯುವರ ಗುಂಪಿಗೆ ವಿರುದ್ಧವಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ಸುದ್ದಿಯಾಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌, ಹಿಜಬ್‌ ನಿಷೇಧ ಆದೇಶ ವಾಪಸ್‌ ಪಡೆಯಬೇಕೆಂಬ ಸಿಎಂ ತೀರ್ಮಾನಕ್ಕೆ ಪ್ರತಿಕ್ರಿಯಿಸಿದ್ದಾರೆ.  ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮ್ಮೀರ್ ಅಹ್ಮದ್‌ ಖಾನ್‌, […]

ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ ಆಗ್ತಿದ್ದಾರೆ: ಯತ್ನಾಳ್ ಕಿಡಿ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಬ್ ನಿಷೇಧ ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಹಿಜಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಬ್ ನಿಷೇಧವನ್ನ ಬಿಜೆಪಿ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಅಂತಾ ಬಾಬಾಸಾಹೇಬ್ ಅಂಬೇಡ್ಕರ್ ಒಂದೇ ಸಮವಸ್ತ್ರದ ಕಾಯ್ದೆ ಮಾಡಿದ್ರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು […]

ಸಿದ್ದರಾಮಯ್ಯ ನಿರ್ಧಾರ ಖಂಡಿಸ್ತೇನೆ

ಬೆಂಗಳೂರು: ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ನಿರ್ಧಾರವನ್ನ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನ ತೃಪ್ತಿಪಡಿಸಲು ಮುಖ್ಯಮಂತ್ರಿಗಳು ತೆಗೆದುಕೊಂಡಿರೋ ಈ ನಿರ್ಧಾರವನ್ನ ಖಂಡಿಸುತ್ತೇನೆ. ಇದು ಶೋಭೆ ತರುವಂತಹದ್ದಲ್ಲ, ಅಧಿಕಾರ ಇದೆ ಅಂತ ರಾಜಕೀಯ ದೊಂಬರಾಟ ಮಾಡಲು ಹೊರಟಿದ್ದಾರೆ. ನೋಡೋಣ ಎಲ್ಲಿಯವರೆಗೆ ಇದೇ ರೀತಿ ಮಾಡ್ತಾರೆ ಅಂತ. ಬಿಜೆಪಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ವಿಚಾರ ಇಲ್ಲ, ಜನರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ […]

ಜ.6 ರಿಂದ ಬೆಂಗ್ಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಹಾರಾಟ ಶುರು

ಲಕ್ನೋ (ಅಯೋಧ್ಯೆ): ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿಸೆಂಬರ್‌ 30 ರಂದು ಉದ್ಘಾಟನೆಯಾಗಲಿದ್ದು, ಜನವರಿ 6ರಿಂದ ಪ್ರಮುಖ ನಗರಗಳಿಗೆ ವಿಮಾನ ಹಾರಾಟ ಸಂಪರ್ಕ ಕಲ್ಪಿಸಲಾಗಿದೆ. ಡಿಸೆಂಬರ್‌ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಅಂದು ದೆಹಲಿಗೆ ಏರ್‌ ಇಂಡಿಯಾದ ಮೊದಲ ವಿಮಾನ ಹಾರಾಟ ನಡೆಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಯೋಧ್ಯೆ ಏರ್ಪೋರ್ಟ್‌ನಲ್ಲಿ ಡಿಸೆಂಬರ್‌ 22ರಂದು ಭಾರತೀಯ ವಾಯುಪಡೆಯ ಏರ್‌ಬಸ್‌ A320 ಅನ್ನು ಇತ್ತೀಚೆಗೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಮಾಡಲಾಗಿತ್ತು. […]

ಹಿಜಬ್ ನಿಷೇಧ ವಾಪಸ್ಸಿಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಸಮವಸ್ತ್ರ ಇರುವುದು ವಿಷಬೀಜ ಬಿತ್ತುವುದಕ್ಕಲ್ಲ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ನಮ್ಮ ಮುಂದೆ ಇದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ್ದು ಒಡೆದಾಳುವ ನೀತಿ. ರಾಜ್ಯದ ಕಾನೂನು ಸುವ್ಯವಸ್ಥೆ ಒಳ್ಳೆಯದಾಗಿ ಇರಬಾರದಾ.?, ನಿಮ್ಮ ಉದ್ದೇಶ ಏನು ಹಾಗಾದ್ರೆ..?, ನಿಮ್ಮನ್ನೇನು ಬಂದು ಮಕ್ಕಳು ಕೇಳಿದ್ರಾ..?, ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ ಎಂದು ಹಿಜಬ್ ನಿಷೇಧ ವಾಪಸ್ ಪಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. Advertisement: 2:40Close Player ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) […]

ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ ನಿಷೇಧಿಸಿರಲಿಲ್ಲ

ಚಿಕ್ಕಮಗಳೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಏಕತೆ ಬೆಳೆಯಲಿ ಎಂಬ ಕಾರಣಕ್ಕೆ ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಬ್‌ ನಿಷೇಧಿಸಲಾಗಿತ್ತು. ಆದ್ರೆ ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ಗೆ ನಿಷೇಧ ಹೇರಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ   ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರಲಿಲ್ಲ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿತ್ತು. ಸಿದ್ದರಾಮಯ್ಯ ಸಮವಸ್ತ್ರಕ್ಕೆ ಹಿಜಬ್ ಜೋಡಿಸುತ್ತಾರೋ ಅಥವಾ ಸಮವಸ್ತ್ರ ಕಡ್ಡಾಯ ಅನ್ನೋದನ್ನೇ ತೆಗೆಯುತ್ತಾರೋ ಗೊತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಹಿಜಬ್ ನಿಷೇಧ ಆಗಿರಲಿಲ್ಲ. ಕೇವಲ ಶಾಲೆ-ಕಾಲೇಜುಗಳಲ್ಲಿ 1964 ಶಿಕ್ಷಣ […]

ಬೆಂಗ್ಳೂರಲ್ಲಿ ಧರೆಗಿಳಿದ ಕೇಕ್ ಲೋಕ

ಬೆಂಗಳೂರು: ಕ್ರಿಸ್ಮಸ್ ಗೆ ಕೇವಲ ಎರಡೇ ದಿನಗಳು ಬಾಕಿ ಉಳಿದಿವೆ. ಕ್ರಿಸ್ಮಸ್ ಅಂದಾಕ್ಷಣ ನೆನಪಾಗೋದು ಕೇಕ್ ಶೋ. ಸಿಲಿಕಾನ್ ಸಿಟಿಯಲ್ಲಿ ಕೇಕ್‍ಗಳ ಲೋಕ ಧರೆಗಿಳಿದಿದ್ದು, ಎಲ್ಲರನ್ನೂ ಕೈ ಬೀಸಿ ಕರೆಯುತ್ತಿವೆ. ಹೌದು. ಕ್ರಿಸ್ಮಸ್ ಹಾಗೂ ನ್ಯೂ ಇಯರ್ ಅನ್ನು ಬರ ಮಾಡಿಕೊಳ್ಳೋಕೆ ಬೆಂಗಳೂರಿಗರು ಸಜ್ಜಾಗಿದ್ದಾರೆ. ಕ್ರಿಸ್ಮಸ್ ಹಬ್ಬದ ಅಂದ ತಕ್ಷಣ ಬೆಂಗಳೂರಿಗರಿಗೆ ನೆನಪಾಗೋದು ಕೇಕ್ ಶೋ. ಪ್ರತಿ ವರ್ಷದಂತೆ ಈ ವರ್ಷವೂ ಸಂತ ಜೋಸೆಫ್ ಸ್ಕೂಲ್ ಗ್ರೌಂಡ್ ನ ಆವರಣದಲ್ಲಿ 49ನೇ ವರ್ಷದ ಕೇಕ್ ಶೋ ಆರಂಭವಾಗಿದೆ. ಇನ್ಸ್ಟಿಟ್ಯೂಟ್ […]