ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ
ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಂಗಡಿ ಹಾಗೂ ಮಾಲ್ಗಳ ನಾಮಫಲಕಗಳಲ್ಲಿ 60% ಆದ್ಯತೆ ಕೊಡಬೇಕು. ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆರವು […]












































































































































































































































































































































































































































































































































































































































































































































































































































































































































































































































































































































