July 31, 2026

ಕಲುಷಿತ ಕಾಂಗ್ರೆಸ್‌ಗೆ ಹಿಂದುತ್ವ ರುಚಿಸಲ್ಲ

ಬೆಂಗಳೂರು: ಕಲುಷಿತ ಕಾಂಗ್ರೆಸ್‌ಗೆ ಹಿಂದುತ್ವ ರುಚಿಸುವುದಿಲ್ಲ, ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುವುದಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್‌ ಕಿಡಿ ಕಾರಿದೆ. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಕಲ್ಲಡ್ಕ ಪ್ರಭಾಕರ ಭಟ್ ಅವರ ಶಾಲೆಗೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್‌ ಕಿಡಿಕಾರಿತ್ತು. ಈ ಸಂಬಂಧ ಜೆಡಿಎಸ್‌ ಇಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ಆಕ್ರೋಶ ಹೊರ ಹಾಕಿದೆ. ಪೋಸ್ಟ್‌ಗಳಲ್ಲಿ ಏನಿದೆ?ಕಲುಷಿತ ಮನಸ್ಸಿನ ಕಾಂಗ್ರೆಸ್‌ ಕಣ್ಣಿಗೆ ಸದಾ ಕಾಮಾಲೆಯೇ. ಹೆಚ್‌ಡಿ ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ […]

ಬೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ‌ಸುರೇಶ್ ತೆರಳುತ್ತಿದ್ದ‌ಹೆಲಿಕಾಪ್ಟರ್‌ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದ ಬಳಿ ತುರ್ತು ಭೂಸ್ಪರ್ಶ ಮಾಡಿದೆ. ಗದಗದ ಲಕ್ಷ್ಮೇಶ್ವರದ ರಾಮಗಿರಿಯಲ್ಲಿ ಆಯೋಜನೆಗೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಗ್ಗೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಸುರೇಶ್‌ ಅವರಿದ್ದ ಹೆಲಿಕಾಪ್ಟರ್‌ ಟೇಕಾಫ್‌ ಆಗಿತ್ತು.  ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಕಾಣಿಸಿದ ಹಿನ್ನೆಲೆಯಲ್ಲಿ ಪೈಲೆಟ್‌ ಸುರಕ್ಷಿತವಾಗಿ ಹಾರನಕಟ್ಟೆ ಗ್ರಾಮದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ. ಅಪಾಯದಿಂದ ಪಾರಾದ ಬೈರತಿ ಸುರೇಶ್‌ ಅವರು ರಸ್ತೆ ಮಾರ್ಗವಾಗಿ ಗದಗಕ್ಕೆ ತೆರಳಿದ್ದಾರೆ. ಈ ವಿಷಯ ತಿಳಿದ […]

ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಹೆಗಡೆ

ಕಾರವಾರ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡಿದಾಗ ತಿರಸ್ಕರಿಸುವುದು ಮೂರ್ಖತನವಾಗುತ್ತದೆ ಎಂದು ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಆರೋಗ್ಯದ ಸಮಸ್ಯೆಯಿಂದಾಗಿ ಚುನಾವಣಾ ರಾಜಕಾರಣ, ಪಕ್ಷದ ರಾಜಕಾರಣದಿಂದ ದೂರವಿದ್ದೆ. ಅಭಿಮಾನಿಗಳಿಂದ ಚುನಾವಣೆಗೆ ನಿಲ್ಲಬೇಕೆಂಬ ಒತ್ತಡ ಬರುತ್ತಿದೆ ಎಂದು ಅವರು ಹೇಳಿದರು.   ಪಕ್ಷ ಹಾಗೂ ರಾಜಕಾರಣದಿಂದ ಮೂರು ವರ್ಷದಿಂದ ದೂರ ಉಳಿದಿದ್ದ ಅನಂತ್‌ಕುಮಾರ್ ಹೆಗಡೆ ಇಂದು ಶಿರಸಿಯ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು. ಈ ಬಾರಿಯ ಲೋಕಸಭಾ […]

ಬೆಂಗಳೂರು ಉತ್ಸಾಹಭರಿತ ವಾಸ್ತುಶಿಲ್ಪ ನಗರಿ: ಪ್ರಧಾನಿ ಮೋದಿ ಬಣ್ಣನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಯುನೆಸ್ಕೋದ ವಿಶೇಷ ವಿಶ್ವ ಮನ್ನಣೆ ಸಿಕ್ಕಿದೆ. ಇದಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ‌ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಜಗತ್ತಿನ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಇದೂ ಒಂದು ಎಂಬ ಕೀರ್ತಿಗೆ ನಮ್ಮ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾಜನವಾಗಿದೆ ಎಂದು ಕಳೆದ ವರ್ಷ ಟರ್ಮಿನಲ್ ಕಟ್ಟಡ ಉದ್ಘಾಟನೆಯ ಫೋಟೋಗಳನ್ನ ಶೇರ್‌ ಮಾಡಿ ಮೋದಿ ಹರ್ಷವನ್ನ ವ್ಯಕ್ತಪಡಿಸಿದ್ದಾರೆ. ಉತ್ಸಾಹಭರಿತ ನಗರದ ಜೊತೆಗೆ ವಾಸ್ತುಶಿಲ್ಪದಲ್ಲಿ ತನ್ನ ಜಾಣ್ಮೆಯನ್ನ ಇಲ್ಲಿ ತೋರಿಸಲಾಗಿದೆ. […]

ಹಿಜಬ್‌ ವಾಪಸ್‌- ಕಾನೂನು ಪರಿಶೀಲಿಸಿಯೇ ಕ್ರಮ

ಬೆಂಗಳೂರು: ಹಿಜಬ್‌ ವಿಚಾರದಲ್ಲಿ ಕಾನೂನು ಪರಿಶೀಲಿಸಿಯೇ ಕ್ರಮ ತಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ನಿಲುವನ್ನು ತಿಳಿಸಿದ್ದಾರೆ. ಹಾಗಾಗಿ ಎಲ್ಲರಿಗೂ ಈಗ ಗೊತ್ತಾಗಿದೆ. ಪ್ರತಿಯೊಬ್ಬ ಪ್ರಜೆಗೂ ತಾನು ಏನು ಸೇವಿಸಬೇಕು ತಾನು ಏನು ಧರಿಸಬೇಕು ಎನ್ನುವುದು ಅವರವರಿಗೆ ಬಿಟ್ಟಿದ್ದು. ಈ ಹಕ್ಕು ಸಂವಿಧಾನದಲ್ಲೇ ಇದೆ. ಇದು ಅವರ ಮೂಲಭೂತ ಹಕ್ಕು. ಹಾಗಾಗಿ ಮುಖ್ಯಮಂತ್ರಿಗಳು ಆ ಅರ್ಥದಲ್ಲಿ ಹೇಳಿದ್ದಾರೆ ಎಂದರು.  ಬಿಜೆಪಿಯವರು ಅದನ್ನೇ ಮೂಲವಾಗಿ ಇಟ್ಟುಕೊಂಡು ದೊಡ್ಡ […]

ಮದುವೆಯಾಗೋದಾಗಿ ಹೇಳಿ ಪ್ರಭು ಚೌಹಾಣ್ ಪುತ್ರನಿಂದ ವಂಚನೆ?

ಬೀದರ್: ಮಾಜಿ ಸಚಿವ ಪ್ರಭು ಚೌಹಾಣ್ 26 ಎಕರೆ ಜಮೀನನ್ನು ಖರೀದಿಸಿದ್ದು, ಹಣ ಕೇಳಿದರೆ ಸಂಬಂಧ ಬೆಳೆಸುವುದಾಗಿ ಹೇಳಿ ವಂಚನೆ ಮಾಡಿದ್ದಾರೆ ಎಂದು ಗಂಗಾಧರ್ ರಾಥೋಡ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಗಂಗಾಧರ್ ಕುಟುಂಬಸ್ಥರು, ಪುತ್ರ ಪ್ರತೀಕ್ ಜೊತೆ ಗಂಗಾಧರ್ ರಾಥೋಡ್ ಮಗಳನ್ನ ಮದುವೆ ( ಮಾಡಿಕೊಳ್ಳುವುದಾಗಿ ಹೇಳಿ ಚೌಹಾಣ್ ಆಸ್ತಿ ಪಡೆದುಕೊಂಡಿದ್ದಾರೆ. ಸಹೋದರ ಮಾರುತಿ ಹಾಗೂ ಪತ್ನಿ ಹೆಸರಲ್ಲಿ ಜಮೀನು ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ.  ಏ.23 ರಂದು ಮಗಳ ಜೊತೆ ಚೌಹಾಣ್ ಮಗನ […]

ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮ್ಗೆ ಹೇಳಿಕೊಡಬೇಕಿಲ್ಲ

ಹುಬ್ಬಳ್ಳಿ: ಕಾಂಗ್ರೆಸ್‌ ಟಿಪ್ಪು ಸುಲ್ತಾನ್‌ ಪಾರ್ಟಿ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇರುವವರು. ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮಗೆ ಹೇಳಿಕೊಡಬೇಕಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ ಟಿಪ್ಪು ಸುಲ್ತಾನ್‌ ಪರ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದವರಲ್ಲಿ ಬಿಜೆಪಿ ತಮ್ಮ ಪಕ್ಷದ ಒಬ್ಬರ ಹೆಸರು ಹೇಳಲಿ, ಖಂಡಿತ ಸಿಗೋದಿಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇದ್ದೇವೆ ಎಂದು […]

ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ: ಪ್ರತಾಪ್‌ ಸಿಂಹ

ಮೈಸೂರು: ಲೋಕಸಭೆಯ ಒಳಗಡೆ ಹೊಗೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ಕೇಳಿದ್ದಕ್ಕೆ ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ ಎಂದು ಮೂರು ಮೂರು ಬಾರಿ ಹೇಳಿ, ಆ ವಿಚಾರದಲ್ಲಿ ಯಾವುದೇ ವಿವರಣೆ ಕೊಡುವುದಿಲ್ಲ ಎಂದು ಉತ್ತರಿಸಿದರು.    ಪ್ರತಾಪ್ ಸಿಂಹ ದೇಶದ್ರೋಹಿನಾ ದೇಶಪ್ರೇಮಿನಾ ಅಂತಾ ಬೆಟ್ಟದ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿ. ನನ್ನ ಓದುಗರು, ಮೈಸೂರಿನ ಕೊಡಗು ಜನ ತೀರ್ಪು ನೀಡುತ್ತಾರೆ. ಮುಂಬರುವ ಚುನಾವಣೆಯಲ್ಲಿ […]

ರಾಜ್ಯದಲ್ಲಿ ಮತ್ತೆ ಕೊರೊನಾ ಸ್ಫೋಟ – ಒಂದೇ ದಿನದಲ್ಲಿ 104 ಕೇಸ್‌ ದೃಢ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-‌19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇಂದು (ಶನಿವಾರ) ಒಂದೇ ದಿನ 104 ಪಾಸಿಟಿವ್‌ ಕೇಸ್‌ ವರದಿಯಾಗಿವೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಶನಿವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271 ಕ್ಕೆ ಏರಿಕೆ ಕಂಡಿದೆ. ಕೊರೊನಾ ಪಾಸಿಟಿವಿಟಿ ದರ 5.93% ಇದೆ.  ಸಿಲಿಕಾನ್‌ ಸಿಟಿ ಬೆಂಗಳೂರು ಕೊರೊನಾ ಹಾಟ್‌ಸ್ಪಾಟ್‌ ಆಗುತ್ತಿದೆ. ನಗರದಲ್ಲಿ ಕೋವಿಡ್‌ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭೀತಿ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 85 […]

ಬಿಜೆಪಿ ರಾಜ್ಯ ಘಟಕಕ್ಕೆ 10 ಉಪಾಧ್ಯಕ್ಷರು; ಪದಾಧಿಕಾರಿಗಳ ತಂಡ ಪುನಾರಚನೆ – ಯಾರಿಗೆ ಯಾವ ಸ್ಥಾನ?

– ಬಿ.ಎಲ್‌.ಸಂತೋಷ್‌ ಬಣಕ್ಕೆ ಕೊಕ್‌; ವಿಜಯೇಂದ್ರ ಪಟ್ಟಿಗೆ ಗ್ರೀನ್‌ ಸಿಗ್ನಲ್‌– ವಿ.ಸೋಮಣ್ಣಗೆ ಇಲ್ಲ ಯಾವುದೇ ಸ್ಥಾನ Advertisement: 0:20Close Player ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ತಂಡ ಪುನಾರಚನೆ ಮಾಡಲಾಗಿದೆ. ಹೊಸದಾಗಿ 10 ಮಂದಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್ಯ ಬಿಜೆಪಿ ಪದಾಧಿಕಾರಿಗಳ ಘಟಕ ಪುನಾರಚಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಹೊಸದಾಗಿ 10 ಜನ ರಾಜ್ಯ ಉಪಾಧ್ಯಕ್ಷರು, 4 ಮಂದಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಜನ ರಾಜ್ಯ ಕಾರ್ಯದರ್ಶಿಗಳು, ಒಬ್ಬರು ಖಜಾಂಚಿ ನೇಮಕಗೊಂಡಿದ್ದಾರೆ. 7 […]