July 29, 2026

40 ಸಾವಿರ ಕೋಟಿ ರೂ. ಅಕ್ರಮವೆಂದ್ರೆ ನಂಬಲು ಸಾಧ್ಯವೇ?

ಬೆಂಗಳೂರು:ನಾವು ಈಗ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. 40 ಸಾವಿರ ಕೋಟಿ ರೂ. ಅವ್ಯವಹಾರ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು. ಇದನ್ನು ಯಾರಾದರೂ ನಂಬುವುದಕ್ಕೆ ಆಗುತ್ತಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಅಕ್ರಮ ನಡೆದೇ ಇಲ್ಲ ಅಂತಾ ಹೇಳುವುದಿಲ್ಲ. ೪೦ ಸಾವಿರ ಕೋಟಿ ರೂ. ಅಕ್ರಮ ಅಂದರೆ ನಂಬಲು ಸಾಧ್ಯವೇ ಎಂದಿದ್ದಾರೆ.ಎಷ್ಟು ಅಕ್ರಮ ಆಗಿದೆ ಅಂತಾ ನನಗೆ ಗೊತ್ತಿಲ್ಲ. ಯತ್ನಾಳ್ ಆರೋಪದ […]

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆಯಲ್ಲಿ ಮಿಸ್ ಫೈರಿಂಗ್

ಉಡುಪಿ:ನಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್ನಲ್ಲಿ ಮಿಸ್ ಫೈರಿಂಗ್ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಬಳಿಕ ಗನ್ ಎತ್ತಿಕೊಂಡು ಆಪರೇಟ್ ಮಾಡಿ ಪರೀಕ್ಷಿಸಲು ಸಿಬ್ಬಂದಿ ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡೇಟು ತಗುಲಿತ್ತು. ಈ ಹಿಂದೆಯೂ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್ನಲ್ಲಿ ನಡೆದಿತ್ತು ಫೈರಿಂಗ್ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ […]

ಪರೋಕ್ಷವಾಗಿ ಯತ್ನಾಳ್ ವಿರುದ್ಧ ಗುಡುಗಿದ ವಿಜಯೇಂದ್ರ

ವಿಜಯಪುರ:ಕೆಲವರು ಸಮಾಜ ಒಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ವಿಜಯಪುರ ಭೇಟಿ ವೇಳೆ ಶನಿವಾರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿಯಲ್ಲಿ ಬಣಜಿಗ ಸಂಘಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲವರು ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಪ್ರಯತ್ನಿಸಿದರು. ಸಮಾಜ ಒಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡಿದ್ದಾರೆ. ನಾನು ಕಾರ್ಯಕ್ರಮಕ್ಕೆ ಬರದಂತೆ ತಡೆಯಲು […]

ಅಯೋಧ್ಯೆ ರಾಮಮಂದಿರ ಬಳಿ ವಾಲ್ಮೀಕಿ ಮಂದಿರ ನಿರ್ಮಾಣವಾಗಲಿ

ಹಾವೇರಿ:ಅಯೋಧ್ಯೆ ರಾಮಮಂದಿರ ಬಳಿ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣವಾಗಬೇಕು. ಮಹರ್ಷಿ ವಾಲ್ಮೀಕಿ ರಾಮಾಯಣ ಗ್ರಂಥ ರಚಿಸಿದ್ದಾರೆ. ಅಯೋಧ್ಯೆ ಏರ್‌ಪೋರ್ಟ್ಗೆ ಮಹರ್ಷಿ ವಾಲ್ಮೀಕಿ ಹೆಸರಿಟ್ಟಿದ್ದನ್ನು ಸ್ವಾಗತಿಸುವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖುಷಿ ತಂದಿದೆ. ಇದು ಭಾರತೀಯರ ಬಹುದಿನದ ಕನಸಾಗಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಖುಷಿ ತಂದಿದೆ. ದೇಶದಲ್ಲಿ ಬಹಳಷ್ಟು ಮಂದಿರಗಳು ಇವೆ ಈಗ ರಾಮ ಮಂದಿರ ಸೇರ್ಪಡೆಯಾಗುತ್ತಿದೆ. ಇನ್ನು ಬಿಜೆಪಿ ರಾಜಕೀಯವಾಗಿ ಲಾಭ […]

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆರಡು ಎಫ್‌ಐಆರ್ ದಾಖಲು

ಬೆಂಗಳೂರು:ಮಂಡ್ಯದಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬAಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್‌ಐಆರ್ ದಾಖಲಾಗಿದೆ. ರಹೀಬ್ ವುಲ್ಲಾ ಹಾಗೂ ಉಸ್ಮಾನ್ ಎಂಬುವವರು ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಶೇಷಾದ್ರಿಪುರಂ ಠಾಣೆ ಸೇರಿ ೨ ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದು ದೂರಿನ ಮೇರೆಗೆ ಎನ್‌ಸಿಆರ್ ದಾಖಲಿಸಲಾಗಿದೆ.ಡಿಸೆಂಬರ್ ೨೪ರಂದು ಹನುಮ ಜಯಂತಿ ಕಾರ್ಯಕ್ರಮದ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀಗಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ […]

ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ನೀಡುತ್ತಿದೆ

ಬೆಂಗಳೂರು:ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ನೀಡ್ತಿದೆ. ಆದರೆ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ, ಇನ್ನೂ ಪರಿಹಾರ ನೀಡಿಲ್ಲ. ರಾಜ್ಯದಲ್ಲಿ ೫೦೦ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟೆಲ್ಲಾ ಇದ್ದರೂ ಕೂಡ ಕಣ್ಣುಕಾಣದ ರೀತಿ ಬಂಪರ್ ಮೇಲೆ ಬಂಪರ್ ನೀಡುತ್ತಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಆರ್. ಅಶೋಕ್ ಅವರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರಗಾಲದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಪರಿಹಾರ ನೀಡಿಲ್ಲ. ೫೦೦ಕ್ಕೂ […]

ಚುನಾವಣೆ ಗೆಲ್ಲಲು ಜಾತಿಗೊಂದು ಡಿಸಿಎಂ ಗುಂಗಿನಲ್ಲಿದ್ದಾರೆ

ಬೆಂಗಳೂರುಕಾಂಗ್ರೆಸ್‌ನವರು ಮಾತು ಎತ್ತಿದರೆ ಚುನಾವಣೆ ಗೆಲ್ಲಲು ಜಾತಿಗೊಂದು ಡಿಸಿಎಂ ಗುಂಗಿನಲ್ಲೇ ಇದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮೂರು ಶಾಸಕರಿಗೆ ಹುದ್ದೆಯ ಅದ್ಭುತವಾದ ತೀರ್ಮಾನ ಮಾಡಿದ್ದಾರೆ. ದಾಖಲೆಯ ಬಜೆಟ್ ಮಂಡಿಸಿದ ಸಿಎಂಗೆ ಆರ್ಥಿಕ ಸಲಹೆಗಾರರ ನೇಮಕ ಮಾಡಿದ್ದಾರೆ. ವಿಶ್ವದ ದೊಡ್ಡ ಆರ್ಥಿಕ ತಜ್ಞರು ಅವರು. ಸರ್ಕಾರದ ಈ ರೀತಿಯ ತೀರ್ಮಾನಗಳು ಏನು ಸೂಚಿಸುತ್ತವೆ? ಅದೇನು ಗಂಜಿ ಕೇಂದ್ರಗಳಾ ಎಂದು ಟೀಕಿಸಿದ್ದಾರೆ.೨೫ ವರ್ಷ ಮಂತ್ರಿಯಾಗಿಯೇ […]

ಅನ್ಯಭಾಷೆ ಸಿನಿಮಾ ಪ್ರದರ್ಶನ ಬಂದ್ ಮಾಡ್ತೀವಿ

ಬೆಂಗಳೂರು:ಕನ್ನಡದ ನಾಮಫಲಕ ಹಾಗೂ ಕನ್ನಡ ಹೋರಾಟಗಾರರನ್ನು ಬಂಧಿಸಿರುವ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರನ್ನು ಬಂಧಿಸಿರುವುದನ್ನು ವಾಟಾಳ್ ಖಂಡಿಸಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, ‘ಕನ್ನಡ ನಾಮಫಲಕ ಕಡ್ಡಾಯ ಮಾಡಬೇಕು. ಕನ್ನಡ ಹೋರಾಟಗಾರರನ್ನು ಬಂಧನದಿAದ ಬಿಡುಗಡೆ ಮಾಡ್ಬೇಕು. ನಮ್ಮ ಬೇಡಿಕೆಯ ಮನವಿಯನ್ನು ಸಿಎಂಗೆ ನೀಡ್ತೀವಿ. ಸಿಎಂ ನಮ್ಮಬೇಡಿಕೆಗಳನ್ನ ಈಡೇರಿಸದಿದ್ದರೆ ಬಂದ್ ಮಾಡ್ತೀವಿ. […]

ಜೋಶಿ ಮನೆಗೆ ಈಶ್ವರಪ್ಪ ಭೇಟಿ

ಹುಬ್ಬಳ್ಳಿ:ಇತ್ತೀಚಿಗೆ ನಡೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಘೋಷಣೆ ಆಗುವಕ್ಕಿಂತಲೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಕೆಎಸ್ ಈಶ್ವರಪ್ಪ ಅವರು ಹಾವೇರಿ ಲೋಕಸಭಾ ಕ್ಷೇತ್ರದ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕು ಎಂದು ಬಹಿರಂಗವಾಗಿಯೇ ಹೇಳಿದ್ದರು. ಈ ಮೂಲಕ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಪಣ ತೊಟ್ಟಿದ್ದಾರೆ.ಹೀಗಾಗಿ ಕೆಎಸ್ ಈಶ್ವರಪ್ಪ ಕೇಂದ್ರ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. […]

ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ

ದಾವಣಗೆರೆ:ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ಅವರನ್ನು ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಬಗ್ಗೆ ವಿರೋಧ ಮಾಡೋದು ತಪ್ಪು ಎಂದು ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಯತ್ನಾಳ್‌ಗೆ ಕಿವಿಮಾತು ಹೇಳಿದರು.ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರು ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಯಾರೇ ಆಗಲಿ ಪಕ್ಷದ ವಿರುದ್ಧವಾಗಿ ಬಹಿರಂಗವಾಗಿ ಮಾತನಾಡಬಾರದು ಎಂದು ಸಲಹೆ ನೀಡಿದರು.ಏನೇ ಸಮಸ್ಯೆ ಇದ್ದರೂ ಯಾರೇ ಆಗಲಿ ರಾಜ್ಯಾಧ್ಯಕ್ಷರ ಬಳಿ ದೂರು […]