ಜಾತಿಗಣತಿ ವರದಿ ಬಂದ ಬಳಿಕವೇ ಅನುಷ್ಠಾನಕ್ಕೆ ತೀರ್ಮಾನ
ಬೆಂಗಳೂರು: ಜಾತಿಗಣತಿ ವರದಿ ಬಂದ ಬಳಿಕ ಜಾರಿ ಮಾಡಬೇಕಾ? ಬೇಡವಾ ಅಂತ ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡ್ತಾರೆ ಅಂತ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಜಾತಿಗಣತಿ ವರದಿ ಜಾರಿ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಜನವರಿವರೆಗೆ ವಿಸ್ತರಣೆ ಮಾಡಲಾಗಿದೆ. ಅವರು ಮೊದಲು ಜಾತಿಗಣತಿ ವರದಿ ಕೊಡಲಿ ಆಮೇಲೆ ಬಿಡುಗಡೆ ಮಾಡಬೇಕಾ, ಬೇಡ್ವಾ? ಅನ್ನೋದನ್ನ ಚರ್ಚೆ ಮಾಡ್ತೀವಿ. ನಾನು, ಸಿಎಂ ಯಾರು ಕೂಡಾ ವರದಿ ನೋಡಿಲ್ಲ. […]












































































































































































































































































































































































































































































































































































































































































































































































































































































































































































































































































































































