ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು, ಒಗ್ಗಟ್ಟಿನಿಂದ ಕೆಲಸ ಮಾಡೋಣ: ವಿಜಯೇಂದ್ರ
ಬೆಂಗಳೂರು: ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಕರ್ನಾಟಕ ಬಿಜೆಪಿಯ 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ […]












































































































































































































































































































































































































































































































































































































































































































































































































































































































































































































































































































































