ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ: ಅಸಮಾಧಾನ ಹೊರಹಾಕಿದ ಸಿಟಿ ರವಿ
ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ ಮಾಜಿ ಸಚಿವ ಸಿಟಿ ರವಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಮಧ್ಯಪ್ರದೇಶದಿಂದ ಆಗಮಿಸಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬದಲಾಗದೇ ಇರೋದು ಕಾರ್ಯಕರ್ತ ಅನ್ನೋದು. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ, ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ, ಯಶಸ್ವಿಯಾಗಲಿ ಎಂದು ತಿಳಿಸಿದರು. ನೂತನ ಅಧ್ಯಕ್ಷನ ಆಯ್ಕೆ […]












































































































































































































































































































































































































































































































































































































































































































































































































































































































































































































































































































































