July 30, 2026

ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಭವಿಷ್ಯ ನುಡಿದ ಜೈನ ಮುನಿ

ಬೆಳಗಾವಿ: ಡಿಕೆ ಶಿವಕುಮಾರ್  ಮುಖ್ಯಮಂತ್ರಿಯಾಗುತ್ತಾರೆ ಎಂದು ಹಲಗಾದ ಜೈನ್ ಬಸದಿಯ ಪ.ಪೂ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಲೋಕಸಭಾ ಚುನಾವಣೆ ಬಳಿಕ ವಿನಯ್ ಕುಲಕರ್ಣಿ ಸಚಿವರಾಗುತ್ತಾರೆ ಎಂದು ಹೇಳಿದ್ದಾರೆ. ವಿನಯ್ ಕುಲರ್ಣಿ ಅವರು ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿರುವ ಜೈನ್ ಬಸದಿ ಭೇಟಿ ನೀಡಿದ್ದು, ಈ ವೇಳೆ ಜೈನ ಮುನಿ ಸಿದ್ದಸೇನ ಮಹಾರಾಜರು, ನೀವು ಸಚಿವರಾಗುತ್ತೀರಿ, ಧಾರವಾಡ ಜಿಲ್ಲಾ ಉಸ್ತುವಾರಿ ಆಗುತ್ತೀರಿ ಎಂದು ಹೇಳಿ ಆಶೀರ್ವಾದ ಮಾಡಿದ್ದಾರೆ. ಶಾಸಕ ವಿನಯ್ […]

ವಿವಾಹಿತೆಯಿಂದ ಹನಿಟ್ರ್ಯಾಪ್ – ಡೆತ್‍ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಮಡಿಕೇರಿ: ಮಹಿಳೆಯೊಬ್ಬಳಿಂದ ಹನಿಟ್ರ್ಯಾಪ್‍ಗೊಳಗಾಗಿ ನಿವೃತ್ತ ಯೋಧನೊಬ್ಬ ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾದ ಘಟನೆ ನಗರದ ಉಕ್ಕುಡ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ನಿವೃತ್ತ ಯೋಧನನ್ನು ಸಂದೇಶ್ (40) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ಪಂಪಿನ ಕೆರೆ ಬಳಿ ಸಂದೇಶ್ ಮೊಬೈಲ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.  ಸಂದೇಶ್ ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯೊಬ್ಬಳ ಸ್ನೇಹಕ್ಕೆ ಬಿದ್ದು ಆಕೆಯಿಂದಲೇ ಹನಿಟ್ರ್ಯಾಪ್‍ಗೆ ಒಳಗಾಗಿದ್ದಾನೆ. ಆಕೆಯ ಕಾಟ ಸಹಿಸಲಾಗದೆ […]

ಪ್ಯಾಂಟ್‌ ಜಿಪ್‌ನಲ್ಲಿ ಚಿನ್ನ ಕಳ್ಳಸಾಗಣೆ

ಬೆಂಗಳೂರು: ಪ್ಯಾಂಟ್‌ ಜಿಪ್‌ ಲೈನ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಯಾಣಿಕನನ್ನು ಏರ್‌ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ಶಾರ್ಜಾದಿಂದ ಬಂದಿದ್ದ. ಪೇಸ್ಟ್‌ ರೂಪದಲ್ಲಿ ಚಿನ್ನ ಕಳ್ಳಸಾಗಣೆ (Gold Smuggling) ಮಾಡುತ್ತಿದ್ದ. ಈತನನ್ನು ಏರ್‌ಪೋರ್ಟ್‌ನಲ್ಲಿ ಏರ್‌ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪ್ಯಾಂಟ್‌ ಜಿಪ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ.  ಸುಮಾರು 18.57 ಲಕ್ಷ ರೂ. ಮೌಲ್ಯದ 284 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕನನ್ನ ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. […]

ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಹಸ್ತದ ಬಗ್ಗೆ ಉಪಾಹಾರ ಸಭೆಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ ಅವರು, ಬ್ರೇಕ್‌ಫಾಸ್ಟ್ ಸಭೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ, ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದೆವು ಎಂದು ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್, ಅನೇಕ ಸಚಿವರು ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ಆಪರೇಷನ್ ಹಸ್ತದ ಬಗ್ಗೆ ಚರ್ಚಿಸಿಲ್ಲ ಎಂದ ಮರುಕ್ಷಣವೇ ಅವರು, ಯಾರೆಲ್ಲಾ ಬರುತ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ […]

ಮೋದಿಗೆ ನಾಚಿಕೆ ಆಗಬೇಕು: ಹೆಚ್‌ಕೆ ಪಾಟೀಲ್ ಕಿಡಿ

ಬೀದರ್ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆ ಆಗಬೇಕು ಎಂದು ಪ್ರವಾಸೋದ್ಯಮ ಸಚಿವ ಹೆಚ್‌ಕೆ ಪಾಟೀಲ್‌ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಲೂಟಿಗೆ ಇಳಿದಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿಗೆ ಜವಾಬ್ದಾರಿ ಇರಬೇಕು. ಪ್ರಧಾನಿಯಾಗಿ ನೀವೇ ಹೀಗೆ ಮಾತನಾಡುತ್ತಿದ್ದೀರಿ. ನಾಚಿಗೆ ಆಗಲ್ವಾ? ಚುನಾವಣಾ ಬಾಂಡ್‌ ಅನ್ನು ಆರ್‌ಟಿ‌ಐ ಮಾಹಿತಿ ಹಕ್ಕಿನಲ್ಲೂ ಕೊಡದಂತೆ ಕಾನೂನು ಮಾಡಿದ್ದೀರಿ‌. ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದ […]

ಗೃಹಲಕ್ಷ್ಮಿ ಯೋಜನೆ ವಿರುದ್ಧ ಮಹಿಳೆಯರ ಆಕ್ರೋಶ; ವಿಳಂಬಕ್ಕೆ ಕಾರಣ ನೀಡಿದ ಅಧಿಕಾರಿಗಳು

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ  ಯೋಜನೆಗೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ ಹಲವು ಹಳ್ಳಿಗಳ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ‌ಹಾಕಿದ್ದರು. ಆದರೆ ಇವರ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗಿದೆ ಎಂದು ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ‌ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ನಮಗೆ ಒಂದು ಬಾರಿಯೂ ಹಣ ಬಂದಿಲ್ಲ. ಹಣದ ಸಂಬಂಧ ನಾವು ಅಲೆದಾಡುತ್ತಿದ್ದೇವೆ. ಯಾವಾಗ ಬಂದರೂ ಅದು ಸರಿಯಲ್ಲ ಇದು ಸರಿಯಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾದರೆ […]

ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿತು. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ (K.J George), ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ […]

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ: ಕೇಸ್​ನಲ್ಲಿ ತಮ್ಮ ಹೆಸರು ಕೇಳಿಬಂದಿದ್ದಕ್ಕೆ ಮುನಿರತ್ನ ಹೇಳಿದ್ದಿಷ್ಟು

ಬೆಂಗಳೂರು): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್​ನಲ್ಲಿಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಹೆಸರು ಕೇಳಿಬಂದಿದ್ದು, ಇದೀಗ ಇದಕ್ಕೆ ಸ್ವತಃ ಮುನಿರತ್ನ ಅವರು ಪ್ರತಿಕ್ರಿಯಿಸಿ, ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆ ಮುಗಿಯುವ ತನಕ ಹೊರಗೆ ಇರಬಾರದು ಎಂದು ನನ್ನನ್ನು ತಿಹಾರ್ ಜೈಲಿಗೆ ಕಳಿಸಬೇಕು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾಡಿದ ಮುನಿರತ್ನ, ಮನೆ ಮುಂದೆ ನಡೆಯುವ ಅಪಘಾತವನ್ನೂ ನನ್ನ ತಲೆಗೆ ಕಟ್ಟುವ ಕೆಲಸ ಆಗುತ್ತಿದೆ. ಈಗ ಪ್ರತಿಮಾ ಕೊಲೆ […]

ಜಾತಿ ಗಣತಿ ಜಾರಿ ವಿಚಾರ: ವಿರೋಧಿಸುತ್ತಿರುವ ಒಕ್ಕಲಿಗ, ಲಿಂಗಾಯತರಿಗೆ ಸತೀಶ್ ಜಾರಕಿಹೊಳಿ ಭರವಸೆ

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕಾಂತರಾಜ್ ಜಾತಿ ಗಣತಿ ವರದಿ ಭಾರೀ ಸುದ್ದು ಮಾಡುತ್ತಿದೆ. ಜಾತಿ ಗಣತಿ ವರದಿ ಜಾರಿಗೆ ಸಂಬಂಧ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ  ಮಾತನಾಡಿ ಜಾತಿ ಗಣತಿ ವರದಿಯಲ್ಲಿ ಒಳಪಂಗಡಗಳನ್ನು ಬಿಟ್ಟಿದ್ದಾರೆಂಬ ಆತಂಕ ಒಕ್ಕಲಿಗ, ಲಿಂಗಾಯತರಿಗೆ ಇರಬಹುದು. ಈ ಎಲ್ಲಾ ಅಂಶಗಳನ್ನು ಜಾತಿಗಣತಿ ವರದಿಯಲ್ಲಿ ‌ಸೇರಿಸಬಹುದು ಎಂದು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಾತಿಗಣತಿ ವರದಿ ಸಲ್ಲಿಕೆಯಾಗಿ ಕ್ಯಾಬಿನೆಟ್​ನಲ್ಲಿ ಚರ್ಚಿಸಬೇಕು. ನಂತರ ಎರಡು ಸದನದಲ್ಲಿ ಪರ-ವಿರೋಧ ಚರ್ಚೆಯಾಗಬೇಕು. […]

ಸಹಾಯ ಮಾಡುವ ನೆಪದಲ್ಲಿ ಎಟಿಎಂ ಪಿನ್ ಪಡೆದು ವಂಚನೆ – ಅಂತರಾಜ್ಯ ಕಳ್ಳರ ಬಂಧನ

ಕೋಲಾರ: ಸಹಾಯ ಮಾಡುವ ಸೋಗಿನಲ್ಲಿ ಅಮಾಯಕರ ಬಳಿ ಎಟಿಎಂ ಪಿನ್ ಪಡೆದು ಹಣ ಎಗರಿಸುತ್ತಿದ್ದ ಮೂವರು ಅಂತರಾಜ್ಯ ಕಳ್ಳರನ್ನು ಮುಳಬಾಗಿಲು (ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿಗಳನ್ನು ತಮಿಳುನಾಡಿನ ಹೊಸೂರು ಮೂಲದ ಮಂಜುನಾಥ್, ಚಿನ್ನದೊರೈ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 13 ಸಾವಿರ ನಗದು, ನಾಲ್ಕು ಎಟಿಎಂ ಕಾರ್ಡ್‍ಗಳು, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಎಟಿಎಂ ಬಳಿ ಹಣ ಡ್ರಾ ಮಾಡಲು ಸಹಾಯ ಕೇಳಿದವರ ಪಿನ್ ಪಡೆದು ವಂಚಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳು ಬೆಂಗಳೂರು ಸೇರಿದಂತೆ […]