ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4 ಸಾವಿರ, ಈಗ 5 ತಿಂಗಳಲ್ಲಿ 250ಕ್ಕೂ ಅಧಿಕ ರೈತರು ಆತ್ಮಹತ್ಯೆ: ಕಟೀಲ್
ವಿಜಯಪುರ: ಈ ಹಿಂದೆ ಸಿದ್ದರಾಮಯ್ಯ CM ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ 5 ತಿಂಗಳಲ್ಲೇ 250ಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪೈಕಿ ವಿಜಯಪುರ ಜಿಲ್ಲೆಯಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರದ ನಡುವೆ ಸಿಎಂಗೆ ರಾಜ್ಯದ ರೈತರ ಹಿತರಕ್ಷಣೆ ಮುಖ್ಯವಾಗಿಲ್ಲ. ಬ್ರೇಕ್ ಫಾಸ್ಟ್, ಬೇರೆ ಫಾಸ್ಟ್ ಎಲ್ಲಾ […]












































































































































































































































































































































































































































































































































































































































































































































































































































































































































































































































































































































