ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ
ಮಂಡ್ಯ: ನಾನು ಮಂಡ್ಯದ ಸೊಸೆ, ಯಾವತ್ತೂ ಮಂಡ್ಯವನ್ನು ಬಿಡುವುದಿಲ್ಲ. ರಾಜಕಾರಣ ಬಿಟ್ಟರೂ ಸ್ವಾಭಿಮಾನ ಹಾಗೂ ಸಿದ್ಧಾಂತವನ್ನು ಬಿಡುವುದಿಲ್ಲ. ಇದನ್ನೂ ರಕ್ತದಲ್ಲಿ ಬರೆದು ಕೊಡಬೇಕಾ? ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗುವುದಿಲ್ಲ. ಜೆಡಿಎಸ್ (JDS) ಬಿಜೆಪಿ ಮೈತ್ರಿ ಆಗಿದೆ. ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈ ಬಗ್ಗೆ ಈಗ ಎದ್ದಿರುವ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ […]












































































































































































































































































































































































































































































































































































































































































































































































































































































































































































































































































































































