July 30, 2026

ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ಕಮಾಂಡರ್‌ ಸೇರಿ 60ಕ್ಕೂ ಹೆಚ್ಚು ಮಂದಿ ಬಲಿ

ಟೆಲ್‌ ಅವೀವ್‌: ಗಾಜಾಪಟ್ಟಿಯ ಅತಿದೊಡ್ಡ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ಸೇನೆಯು ಬುಧವಾರ ಭೀಕರ ದಾಳಿ ನಡೆಸಿದೆ. ಇಸ್ರೇಲ್‌ ನಡೆಸಿದ ವಾಯುದಾಳಿಯಲ್ಲಿ ಹಮಾಸ್‌ ಉಗ್ರರ ಟಾಪ್‌ ಕಮಾಂಡರ್‌ ಇಬ್ರಾಹಿಂ ಬ್ಯಾರಿ ಹತ್ಯೆಗೀಡಾಗಿದೆ. ಇಸ್ರೇಲ್‌ ಮೇಲೆ ನಡೆದ ಅಕ್ಟೋಬರ್ 7ರ ಹಮಾಸ್‌ ದಾಳಿಯಲ್ಲಿ ಈತ ಪ್ರಮುಖ ಮಾರ್ಗದರ್ಶಕನೂ ಆಗಿದ್ದ ಎನ್ನಲಾಗಿದೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ಬಾಂಬ್ ದಾಳಿಯಲ್ಲಿ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಬ್ಯಾರಿಯನ್ನು ತೊಡೆದುಹಾಕಲು ನಿರಾಶ್ರಿತರ ಶಿಬಿರವನ್ನು ಧ್ವಂಸ ಮಾಡಿರುವುದಾಗಿ ಇಸ್ರೇಲ್‌ನ ರಕ್ಷಣಾ ಪಡೆಗಳು […]

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಸಿಎಂ ಘೋಷಣೆ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಮತ್ತು ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ನಗರದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರಿ ಶಾಲೆಗಳಿಗೆ ಉಚಿತ ಘೋಷಣೆಯ ಉಡುಗೊರೆ ನೀಡಿದರು.  ಉಚಿತ ವಿದ್ಯುತ್, ಕುಡಿಯುವ ನೀರು ಬೇಕು ಎಂದು ಶಿಕ್ಷಣ ಇಲಾಖೆ ಬೇಡಿಕೆ ಇಟ್ಟಿತ್ತು. ಇಂದಿನಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್‌, ಕುಡಿಯುವ ನೀರನ್ನು ಉಚಿತವಾಗಿ ನೀಡಲಾಗುವುದು ಎಂದು ವೇದಿಕೆಯಲ್ಲೇ ಸಿಎಂ ಘೋಷಿಸಿದರು. […]

ಕರ್ನಾಟಕ ಆಧುನಿಕ ಉದ್ಯಮದ ತೊಟ್ಟಿಲು – ರಾಜ್ಯೋತ್ಸವಕ್ಕೆ ಶುಭಕೋರಿದ ಮೋದಿ, ಸಿಎಂ

ಬೆಂಗಳೂರು: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕನ್ನಡ ಸಾಧಕರ ಭಾವಚಿತ್ರಗಳನ್ನಿಟ್ಟು ಹಲವು ಕನ್ನಡ ಗೀತೆಗಳನ್ನು ಮೇಳೈಸುವ ಮೂಲಕ ಜನ ಸಂಭ್ರಮಿಸುತ್ತಿದ್ದಾರೆ. ಸಂಭ್ರಮವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರೂ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ. ಟ್ವಿಟ್ಟರ್‌ ಎಕ್ಸ್‌ ಖಾತೆಯಲ್ಲಿ ಶುಭ ಹಾರೈಸಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ […]

ಬಹಿರಂಗ ಹೇಳಿಕೆ ನೀಡದಂತೆ ವಾರ್ನಿಂಗ್- ಕಾಂಗ್ರೆಸ್‍ನಲ್ಲಿ ಪಟ್ಟದ ಫೈಟ್‍ಗೆ ಬಿತ್ತಾ ಬ್ರೇಕ್?

ಬೆಂಗಳೂರು: ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಸಿಂಹಾಸನ ಸಮರಕ್ಕೆ ಕದನ ವಿರಾಮ ಘೋಷಣೆ ಆಯ್ತಾ..?, ಡೆಲ್ಲಿಯ ಆ ಸಂದೇಶಕ್ಕೆ ಕಾಂಗ್ರೆಸ್‍ನ ಇಬ್ಬರು ನಾಯಕರು ಒಪ್ಪಿದ್ರಾ ಅನ್ನೋ ಕುತೂಹಲ ಮೂಡಿದೆ. ಅಧಿಕಾರ ಹಂಚಿಕೆ ಬಗ್ಗೆ ಮಾತನಾಡುವರ ಬಾಯಿ ಮುಚ್ಚಿಸಿ ಅಂತ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆಯಲ್ಲೂ ಕುರ್ಚಿ ಕದನ ಜೋರಾಗಿಯೇ ಇತ್ತು. ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಕಾದಾಟ ಬೂದಿ ಮುಚ್ಚಿದ ಕೆಂಡದಂತಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗ್ತಿದೆ ಅಂದಾಗ ಡೆಲ್ಲಿಗೆ ಕರೆಸಿ ರಾಹುಲ್ […]

ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ MESನಿಂದ ಕರಾಳ ದಿನ ಆಚರಣೆ

ಚಿಕ್ಕೋಡಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ) ಕರಾಳ ದಿನ ಆಚರಿಸಲಾಗುತ್ತಿದೆ. ಬೆಳಗಾವಿ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಕರಾಳ ದಿನಾಚರಣೆಗೆ ಎಂಇಎಸ್ ತಯಾರಿ ನಡೆಸಿದ್ದು, ಶಿವಸೇನೆ ಉದ್ಧವ್ ಠಾಕ್ರೆ ಬಣದಿಂದ ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ.  ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ, ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಳಗಾವಿ ಚಲೋಗೆ ಕರೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಕೊಲ್ಹಾಪುರ ಜಿಲ್ಲೆ ಕಾಗಲ್ ಬಳಿ ಜಮಾವಣೆಯಾಗಲು ಕರೆ ನೀಡಿದ್ದು, ಈಗಾಗಲೇ ಚಲೋ ಯಾತ್ರೆ ಆರಂಭಿಸಿದ್ದಾರೆ.  ಭಗವಾ […]

ಕೇಂದ್ರ ನೀರಾವರಿ ಸಚಿವರ ಉತ್ತರಕ್ಕೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ ಕೇಂದ್ರ ಸರ್ಕಾರ ಬದಲಿಗೆ ತನ್ನ ಸುಳ್ಳುಗಳ ದಾಹ ತಣಿಸಿಕೊಳ್ಳಲು ಮುಂದಾಗಿ ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಕೇಂದ್ರ ಜಲಸಂನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸೋಮವಾರ ಗಜೇಂದ್ರ […]

ಮಹಾರಾಷ್ಟ್ರಕ್ಕೆ ಕೆಕೆಆರ್‌ಟಿಸಿ ಬಸ್ ಸಂಚಾರ ಸ್ಥಗಿತ – ಕನ್ನಡಿಗರ ಪರದಾಟ

ಕಲಬುರಗಿ: ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಕೆಕೆಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆ, ತುಳಜಾಪುರದ ಅಂಬಾಭವಾನಿ ದೇವಿ ದರ್ಶನಕ್ಕೆ ತೆರಳಿದ ನೂರಾರು ಕನ್ನಡಿಗರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದಿಂದ ಮಹಾರಾಷ್ಟ್ರದ ತುಳಜಾಪುರಕ್ಕೆ ಬಸ್ (Bus) ಸೇವೆ ಸ್ಥಗಿತವಾಗಿರುವುದರಿಂದ ನೂರಾರು ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ತುಳಜಾಪುರದ ಬಸ್ ನಿಲ್ದಾಣದಲ್ಲಿಯೇ ಕುಳಿತಿದ್ದಾರೆ. ನಮ್ಮ ಊರಿಗೆ ಹೋಗಲು ಬಸ್ ಬಿಡಿ ಎಂದು ಮಹಿಳೆಯರು ಆಗ್ರಹಿಸುತ್ತಿದ್ದಾರೆ. ನಾವು ಫ್ರೀ ಬಸ್ ಎಂಬ ಕಾರಣಕ್ಕೆ ಹೆಚ್ಚಿನ ದುಡ್ಡು ಕೂಡ ತಂದಿಲ್ಲ. ಈಗ ಖಾಸಗಿ ವಾಹನದವರು 500 – […]

ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ

ನವದೆಹಲಿ: ವಿಶ್ವಕಪ್‍ನಲ್ಲಿ ಪಾಕ್ ತಂಡ ವಿಫಲವಾಗಬೇಕೆಂಬುದು ಪಿಸಿಬಿ ಉದ್ದೇಶವಾಗಿದೆ ಎಂದು ಪಾಕಿಸ್ತಾನ ತಂಡದ ಹಿರಿಯ ಆಟಗಾರರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ. ತಂಡವು ವಿಫಲವಾಗಬೇಕೆಂದು ಪಿಸಿಬಿ ಬಯಸುತ್ತಿದೆ. ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಲ್ಲಿ ಪಿಸಿಬಿ ಇದೆ. ಹೀಗಾಗಿಯೇ ನಾವು ವಿಶ್ವಕಪ್ ಕಪ್ ಗೆಲ್ಲುವುದನ್ನು ಪಿಸಿಬಿ ಬಯಸುವುದಿಲ್ಲ ಎಂದು ಹೆಸರನ್ನು ಬಹಿರಂಗ ಪಡಿಸದಂತೆ ಸೂಚಿಸಿ ಪಾಕ್ ಆಟಗಾರರೊಬ್ಬರು ಈ ಆರೋಪ ಮಾಡಿದ್ದಾರೆ.  ಕ್ರೀಡಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪಿಸಿಬಿ ಎಲ್ಲಾ ಆಟಗಾರರನ್ನೂ ದೂಷಿಸುತ್ತಿದೆ. ನಮ್ಮ ಆಟಗಾರರು ನಿಜವಾಗಿಯೂ ತಮ್ಮ ಪ್ರಯತ್ನವನ್ನು […]

ಇಸ್ರೋ ಮುಖ್ಯಸ್ಥ ಸೋಮನಾಥ್‌, ಗಾಲ್ಫರ್‌ ಅದಿತಿ ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಗಣ್ಯ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಅನುಸರಿಸಿಕೊಂಡು ಬಂದಿರುವ ಸರ್ಕಾರ ಇದೀಗ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟ ಮಾಡಿದೆ. ಈ ಬಾರಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. 50ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ‘ಕರ್ನಾಟಕ ಸಂಭ್ರಮ 50 ವರ್ಷ’ ಎಂಬ ಹೆಸರಿನಲ್ಲಿ 10 ಪ್ರಶಸ್ತಿಯನ್ನೂ ನೀಡಲಿದೆ. […]

ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

ನವದೆಹಲಿ : ವಿರೋಧ ಪಕ್ಷಗಳ ನಾಯಕರ ಐಫೋನ್‌ಗೆ ಹ್ಯಾಕಿಂಗ್ ಸಂದೇಶ ಬಂದಿರುವ ತಾಂತ್ರಿಕ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಕೆಲವು ಏಜೆನ್ಸಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ವಿಪಕ್ಷಗಳ ಆರೋಪದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂಸದರು ಆಪಲ್‌ನಿಂದ ಎಚ್ಚರಿಕೆ ಸಂದೇಶ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆ್ಯಪಲ್‌ (Apple) ಭಾರತದಲ್ಲಿ […]