July 30, 2026

ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಕೊಲೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ (ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. Advertisement: 1:13Close Player ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಸ್ಕಾರ್ಪಿಯೋ ಕಾರಿನಿಂದ ಕೊಲೆ ಮಾಡುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊಲೆಗೆ ಕಾರಣವೇನು..?: ಅಸ್ಗರ್ ಹಾಗೂ ಅಮ್ರಿನ್ […]

ರಾಜ್ಯದಲ್ಲಿರುವುದು ಏಕಪಕ್ಷ ಸಮ್ಮಿಶ್ರ ಸರ್ಕಾರ- ಬಿಜೆಪಿ ವ್ಯಂಗ್ಯ

ಬೆಂಗಳೂರು: ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರವರನ್ನು ಇಳಿಸಿ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವನ್ನು ಕಾಂಗ್ರೆಸ್ ಶಾಸಕರೆ ಹೇಳಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.  ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆಯವರ ಪ್ರಭಾವ ಬಳಸಿ ಎಲ್ಲೆಲ್ಲೂ ತಮ್ಮ ನಿರ್ಧಾರಗಳೇ ನಡೆಯಲಿ […]

ಯಾರು ಸಿಎಂ ಆದ್ರೂ ತಪ್ಪಿಲ್ಲ: ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಕಾಂಗ್ರೆಸ್‌ನಲ್ಲಿ 50 ಮಂದಿ ಸಿಎಂ ಅಭ್ಯರ್ಥಿಗಳಿದ್ದಾರೆ. ಯಾರೂ ಸಿಎಂ ಆದರೂ ತಪ್ಪಿಲ್ಲ ಎಂದು ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್‌ ತಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ತಪ್ಪಿಲ್ಲ ಎನ್ನುವ ಹೇಳಿಕೆ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಶಾಸಕರು, 50 ಜನ ಸಿಎಂ ಆಗುವಂತ ಅಭ್ಯರ್ಥಿಗಳಿದ್ದಾರೆ, ಯಾರೂ ಸಿಎಂ ಆದ್ರೂ ತಪ್ಪಿಲ್ಲ. ಎಲ್ಲರಿಗೂ ಸಿಎಂ ಆಗುವ ಆಸೆ ಆಕಾಂಕ್ಷೆ ಇದ್ದೆ ಇರುತ್ತೆ. ಯಾರ್ಯಾರು ಪ್ರಯತ್ನ ಮಾಡ್ತಿದ್ದಾರೆ ಒಳಗೊಳಗೆ ಮಾಡ್ತಿರಬೇಕು. ಆದ್ರೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರ ಬದಲಾವಣೆ […]

ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿಗಳು ಶಾಕ್

ಬೆಂಗಳೂರು: ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ರಾಜ್ಯದ 17 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ದಾಳಿ ಚಿತ್ರದುರ್ಗದಲ್ಲಿಇಂದು(ಅ.30) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. […]

ಇಂದು ವರ್ಷದ ಕೊನೆಯ ಚಂದ್ರಗ್ರಹಣ

ಬೆಂಗಳೂರು: ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ ಸಂಭವಿಸಲಿದೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ ಕಾಣುತ್ತ ಬಳಿಕ ಕ್ರಮೇಣ ಕೆಂಪಾಗುವುದು ಚಂದ್ರಗ್ರಹಣದ ಸಂದರ್ಭದಲ್ಲಿ ನಡೆಯುತ್ತದೆ. ಇಂದು ರಾತ್ರಿ 11.31ಕ್ಕೆ ಆರಂಭವಾಗಲಿರುವ ಈ ಭಾಗಶಃ ಚಂದ್ರಗ್ರಹಣ , ಬೆಳಗ್ಗಿನ ಜಾವ 3.36 ಹಾಗೆ ಕೊನೆಯಾಗಲಿದೆ. ರಾತ್ರಿ 11.31ರ ಹಾಗೆ ಗ್ರಹಣ ಆರಂಭವಾದರೂ ಅದರ ಸಂಪೂರ್ಣ ಛಾಯೆ ಮಧ್ಯರಾತ್ರಿ ಬಳಿಕವೇ ಅಂದರೆ ರಾತ್ರಿ 1.05ರ ಹಾಗೆ ಸಂಪೂರ್ಣವಾಗಿ ಆವರಿಸಿಕೊಳ್ಳಲಿದೆ. ಭಾನುವಾರ […]

23 ವರ್ಷಗಳ ಬಳಿಕ ಗೆದ್ದು ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡ ಆಫ್ರಿಕಾ 

ಚೆನ್ನೈ: ಜಿದ್ದಾಜಿದ್ದಿನಿಂದ ಕಣದಲ್ಲಿ ವಿಶ್ವ ಕಪ್​ನ 26ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಪಾಕಿಸ್ತಾನದ ವಿರುದ್ಧ 1 ವಿಕೆಟ್​ ರೋಚಕ ಜಯ ಸಾಧಿಸಿದೆ. ಈ ಮೂಲಕ ಬರೋಬ್ಬರಿ 23 ವರ್ಷಗಳ ಬಳಿಕ ICC ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡಿದೆ. ಅಲ್ಲದೇ ಅಂಕಪಟ್ಟಿಯಲ್ಲಿ ಭಾರತವನ್ನೂ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ. ಇಲ್ಲಿನ ಚೇಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ 46.4 ಓವರ್‌ಗಳಲ್ಲಿ 270 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನತ್ತಿದ್ದ ದಕ್ಷಿಣ […]

ರಾಜ್ಯ ಸರ್ಕಾರದ್ದು ಹುಲಿ ಉಗುರು ಎಂಬ ಸದಾರಮೆ ನಾಟಕ: ಸಿ.ಟಿ. ರವಿ ವಾಗ್ದಾಳಿ

ಚಿಕ್ಕಮಗಳೂರು: ರಾಜ್ಯ ಸರ್ಕಾರದ್ದು ಹುಲಿ ಉಗುರು ಎಂಬ ಸದಾರಮೆ ನಾಟಕ. ರಾಜ್ಯದ ಜನರ ದಾರಿ ತಪ್ಪಿಸಲು ಕಾಂಗ್ರೆಸ್‌ ಹುಲಿ ಉಗುರಿನ ನಾಟಕವಾಡುತ್ತಿದೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಸಿ.ಟಿ.ರವಿ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ಪತ್ತೆಯಾದ ಕೋಟ್ಯಂತರ ಹಣದ ಚರ್ಚೆಯ ದಾರಿ ತಪ್ಪಿಸುವ ನಾಟಕವನ್ನು ಕಾಂಗ್ರೆಸ್‌ ಆಡಿದೆ. ಜನರ ಆಕ್ರೋಶಕ್ಕೆ ವಿರಾಮ ಹಾಕಲು, ಕಮಿಷನ್ ಕಲೆಕ್ಟರ್, ಡೆಪ್ಯೂಟಿ ಕಮಿಷನ್ ಕಲೆಕ್ಟರ್ ಅವರ […]

ಹೆಚ್‍ಡಿಕೆ ಮಾಜಿ ಸಿಎಂ ಆಗಿ ಚಿಲ್ಲರೆ ರೀತಿ ಮಾತಾಡ್ತಾರೆ

ರಾಮನಗರ: ಕುಮಾರಸ್ವಾಮಿಯವರು ಮಾಜಿ ಸಿಎಂ ಆಗಿ ಚಿಲ್ಲರೆ ತರ ಮಾತನಾಡ್ತಾರೆ. ಸಿಎಂ, ಡಿಸಿಎಂ ಹಾಗೂ ಸಚಿವರು ಕಳೆದ ಐದು ತಿಂಗಳಿಂದ ಯಾವುದೇ ಹಣ ತಿಂದಿಲ್ಲ ಎಂದು ಆಣೆ ಮಾಡಲಿ ಎಂಬ ಬಾಲಿಶ ಹೇಳಿಕೆ ಕೊಡುತ್ತಾರೆ ಎಂದು ಶಾಸಕ ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್‍ಡಿಕೆ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಅವರಿಗೆ ಸರಿಯಾಗಿ ತೂಕವಾಗಿ ಮಾತನಾಡಲು ಹೇಳಿ. ಅವರು ದೇವೇಗೌಡರನ್ನ ಕರೆಸಿ ಆಣೆ ಮಾಡಿಸ್ತಾರಾ ಕೇಳಿ. ದೇವೇಗೌಡರು ದುಡ್ಡು ತಿಂದಿಲ್ಲ ಎಂದು ಬಂದು ಪ್ರಮಾಣ […]

ಆಪರೇಷನ್‌ ಮಾಡಿದ್ರೆ ಕತ್ತರಿ ಅವ್ರ ಹೊಟ್ಟೆಯಲ್ಲೇ ಸಿಕ್ಕಿಕೊಳ್ಳುತ್ತೆ

ಬೆಂಗಳೂರು: ಈ ಬಾರಿ ಆಪರೇಷನ್ ಮಾಡಲು ಬಿಜೆಪಿಯವರು ಹೋದ್ರೆ ಅವರ ಹೊಟ್ಟೆಯಲ್ಲೇ ಕತ್ತರಿ ಸಿಕ್ಕಿಕೊಳ್ಳುತ್ತೆ ಎಂದು ಸಚಿವ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಶಾಸಕರ ಆಪರೇಷನ್ ನಡೆಯುತ್ತಿದೆ ಎಂಬ ಶಾಸಕ ಗಾಣಿಗ ರವಿ ಆರೋಪ ವಿಚಾರಕ್ಕೆ ವಿಕಾಸ ಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆಪರೇಷನ್ ಎಲ್ಲವೂ ಈ ಬಾರಿ ಆಗೋದಿಲ್ಲ. ಈ ಬಾರಿ ಆಪರೇಷನ್ ಮಾಡೋಕೆ ಹೋದ್ರೆ ಬಿಜೆಪಿ ಅವರ ಹೊಟ್ಟೆಯಲ್ಲೇ ಕತ್ತರಿ ಸಿಕ್ಕಿಕೊಳ್ಳುತ್ತೆ ಅಂತ ತಿರುಗೇಟು ನೀಡಿದ್ದಾರೆ.  ಬಿಜೆಪಿಯವರಿಗೆ ಆಪರೇಷನ್ ಮಾಡೋ ಹ್ಯಾಬಿಟ್ […]

ಕಾವೇರಿಗಾಗಿ ಮಂಡ್ಯದಲ್ಲಿ ಬಿಜೆಪಿಯಿಂದ ಪಲ್ಟಿ ಚಳವಳಿ

ಮಂಡ್ಯ: ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು 53ನೇ ದಿನದ ಕಾವೇರಿ ಹೋರಾಟದ ಪ್ರಯುಕ್ತ ಪಲ್ಟಿ ಚಳವಳಿ ಮಾಡುವ ಮೂಲಕ ಸರ್ಕಾರವನ್ನು ಗಮನ ಸೆಳೆಯಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಸದ್ಯ ಕೆಆರ್‌ಎಸ್ ಅಣೆಕಟ್ಟಿನಲ್ಲಿ 100 ಅಡಿಗಿಂತ ಕಡಿಮೆ ನೀರು ಇದೆ. ಹೀಗಿದ್ದರೂ ಸಹ […]