ಹುಲಿ ಉಗುರು ಕೇಸ್ – ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ: ಆರಗ ಕಿಡಿ
ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ ಮಾಡುವುದು ಸರಿಯಾದ ಕ್ರಮ ಅಲ್ಲ. ನೂರಾರು ವರ್ಷಗಳಿಂದ ಇಂತಹ ವಸ್ತುಗಳ ಸಂಗ್ರಹ ಇದೆ. ಹಾಗೆ ಸಂಗ್ರಹಿಸಿಟ್ಟವರನ್ನೆಲ್ಲ ಬಂಧಿಸಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ವನ್ಯಜೀವಿ ರಕ್ಷಣಾ ಕಾಯ್ದೆ ಬರುವ ಮೊದಲು ಹುಲಿ ಉಗುರು, ವನ್ಯ ಪ್ರಾಣಿಗಳ […]












































































































































































































































































































































































































































































































































































































































































































































































































































































































































































































































































































































