July 30, 2026

ಕಾಂಗ್ರೆಸ್‌ ಬೆಂಬಲಿತ ಗ್ರಾಪಂ ಸದಸ್ಯನ ಕೊಲೆ

ಕೋಲಾರ: ಹಾಡಹಗಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಬರ್ಬರವಾಗಿ ರಸ್ತೆ ಮಧ್ಯೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದ್ದು, 40 ವರ್ಷದ ಅನಿಲ್ ಕೊಲೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯ.  ಮಿಣಸಂದ್ರ ಗ್ರಾಮದವರಾದ ಹಾಲಿ ಜಯಮಂಗಲ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಮೃತ ಅನಿಲ್ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರಾಗಿದ್ದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಸಾಧ್ಯತೆ ಇದ್ದು, […]

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ 

ನೆಲಮಂಗಲ: ದಿನೇ ದಿನೆ ಬಿಎಂಟಿಸಿ ಬಸ್‌ಗೆ ಬಲಿಯಾಗುತ್ತಿರುವವರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂತಹದೇ ಒಂದು ಪ್ರಕರಣ ಶನಿವಾರವೂ ನಡೆದಿದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಸಮೀಪದ ಬಿನ್ನಮಂಗಲ ಬಳಿ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಗುದ್ದಿದ್ದು, ಗುದ್ದಿದ ರಭಸಕ್ಕೆ ಬೈಕ್ ಸವಾರ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ […]

ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

ಕಾರವಾರ: ಇಸ್ರೇಲ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಇತ್ತೀಚೆಗೆ ನಡೆಸಿದ ‘ಆಪರೇಷನ್ ಅಜಯ್’ ತಂಡದಲ್ಲಿ ಕಾರವಾರ ತಾಲೂಕಿನ ಬಿಣಗಾದ ಮಹಿಮಾ ಶೆಟ್ಟಿಯವರು ಭಾಗವಹಿಸಿ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಶ್ರಮವಹಿಸುವ ಮೂಲಕ ಜಿಲ್ಲೆಯ ಹಿರಿಮೆ ಹೆಚ್ಚಿಸಿದ್ದಾರೆ. ಸದ್ಯ ಗೋವಾದ ಪರ್ವೊರಿಮ್‌ನಲ್ಲಿ ನೆಲೆಸಿರುವ ದುರ್ಗಪ್ಪ ಶೆಟ್ಟಿ ಮತ್ತು ನಯನಾ ದಂಪತಿಯ ಪುತ್ರಿ ಮಹಿಮಾ ಶೆಟ್ಟಿ ಆಪರೇಷನ್ ಅಜಯ್ ತಂಡದಲ್ಲಿ ಭಾಗಿಯಾಗಿದ್ದರು. ಏರ್ ಇಂಡಿಯಾದಲ್ಲಿ ಗಗನಸಖಿ ಆಗಿರುವ ಅವರು ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವ ಆರು ಮಂದಿಯ ತಂಡದಲ್ಲಿ ಇವರು […]

ಬಿಜೆಪಿಯಿಂದ ಕಾಂಗ್ರೆಸ್ ಕಲೆಕ್ಷನ್ ವಂಶಾವಳಿ, ನಿಗಮ ಮಂಡಳಿಗಳ ರೇಟ್ ಕಾರ್ಡ್ ರಿಲೀಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಲೆಕ್ಷನ್ ಮಾಸ್ಟರ್ ಆರೋಪ ಹೊರಿಸಿದೆ. ವಲಯವಾರು ಹಣ ಕಲೆಕ್ಷನ್ ಮಾಡಿ ಕಾಂಗ್ರೆಸ್ ಹೈಕಮಾಂಡ್‍ಗೆ ಕೊಡುತ್ತಿದೆ ಬಿಜೆಪಿ ಆರೋಪಿಸಿದೆ. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಸುದ್ದಿಗೋಷ್ಠಿ ನಡೆಸಿ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ರಿಲೀಸ್ ಮಾಡಿದ್ದಾರೆ. ಸುರ್ಜೇವಾಲಾಗೆ ಸಿಎಂ ಮತ್ತು ಪುತ್ರ ಯತೀಂದ್ರ ಕಲೆಕ್ಷನ್ ಕಲೆಕ್ಟ್ ಮಾಡಿ ಕೊಡುತ್ತಾರೆ. ವೇಣುಗೋಪಾಲ ಅವರಿಗೆ ಡಿಕೆಶಿ ಕಲೆಕ್ಷನ್ ಸಂಗ್ರಹಿಸಿ ಕೊಡುತ್ತಿದ್ದಾರೆ. ಸಿಎಂ, ಡಿಸಿಎಂ ಗುಂಪುಗಳಿಗೆ ಅವರರವರ ಬಣದ ಗುತ್ತಿಗೆದಾರರು ಕಮೀಷನ್ ಸಂಗ್ರಹಿಸಿ ಕೊಡ್ತಿದ್ದಾರೆ. ಸಂಗ್ರಹ ಮಾಡಿದ […]

2.5 ವರ್ಷವಾದ ಮೇಲೆ ಸಚಿವ ಸಂಪುಟ ಬದಲಾವಣೆ

ಬೆಂಗಳೂರು: ಎರಡೂವರೆ ವರ್ಷದ ಮೇಲೆ ಸಚಿವ ಸಂಪುಟ ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುವ ಮೂಲಕ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗ ಎಲ್ಲರಿಗೂ ಮಂತ್ರಿಸ್ಥಾನ ನೀಡಲು ಸಾಧ್ಯವಿಲ್ಲ. ಹೀಗಾಗಿ ಎರಡೂವರೆ ವರ್ಷದ ಬಳಿಕ ನೀಡುವುದಾಗಿ ಸುರ್ಜೇವಾಲ ಸೇರಿದಂತೆ ಎಲ್ಲಾ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಸಚಿವ ಸಂಪುಟ ಬದಲಾವಣೆ ಮಾಡುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ ಎನ್ನುವ ಮೂಲಕ ಸಂಚಲನ ಮೂಡಿಸಿದ್ದಾರೆ. ನಾನು ಸೀನಿಯರ್‌ ಆಗಿದ್ದರಿಂದ ಮಂತ್ರಿ ಸ್ಥಾನ ಸಿಗಬೇಕಿತ್ತು. […]

ಪರಶುರಾಮ ಮೂರ್ತಿ ಫೈಬರ್ ಅಲ್ಲ ಕಂಚು

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಂ ಪಾರ್ಕ್ ಪ್ರತಿದಿನ ಸುದ್ದಿಯಲ್ಲಿದೆ. 33 ಅಡಿ ಎತ್ತರದ ಪ್ರತಿಮೆ ಕಂಚಿನದ್ದಲ್ಲ ಫೈಬರ್ ಎಂಬುದು ಕಾಂಗ್ರೆಸ್ ಆರೋಪ ಮಾಡಿದೆ. ರಟ್ಟು ಫೈಬರ್ ನಿಂದ ಮೂರ್ತಿ ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಿರಂತರವಾಗಿ ಆರೋಪ ಪ್ರತಿಭಟನೆ ಮಾಡುತ್ತಿದೆ. ಈ ಬಗ್ಗೆ ಒಂದು ವೀಡಿಯೋ ಕೂಡ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ಆರೋಪದ ಬೆನ್ನಲ್ಲೇ ಇದೀಗ ಬಿಜೆಪಿ ಕಾರ್ಯಕರ್ತರು, ಕ್ಷೇತ್ರ ಅಧ್ಯಕ್ಷರು ವೀಡಿಯೋ ಬಿಟ್ಟಿದ್ದಾರೆ. ಇದು ಕಂಚಿನ ಪ್ರತಿಮೆ ಎಂದು ಸಾಬೀತು ಮಾಡಿದ್ದಾರೆ. 15 […]

ಮದ್ಯ ಮಾರಾಟದಲ್ಲಿ ಭಾರೀ ಇಳಿಕೆ – ಖಜಾನೆಗೆ ಕೋಟಿ ಕೋಟಿ ನಷ್ಟ

ಬೆಂಗಳೂರು: ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ ಮದ್ಯ  ಮಾರಾಟ ಇಳಿಮುಖವಾಗಿದೆ. ರಾಜ್ಯದ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಡುತ್ತಿದ್ದ ಇಲಾಖೆ ಭಾರೀ ನಷ್ಟದಲ್ಲಿದೆ. ಈ ಬೆಳವಣಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಆತಂಕಕ್ಕೂ ಕಾರಣವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಬರೊಬ್ಬರಿ 5% ರಷ್ಟು ಮದ್ಯ ಮಾರಟ ಇಳಿಕೆ ಕಂಡಿದೆ. ಕಳೆದ ಜುಲೈ ತಿಂಗಳ ಬಳಿಕ ರಾಜ್ಯದಲ್ಲಿ ಮದ್ಯ ಖರೀದಿ ಇಳಿಕೆಯಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ ನಷ್ಟವಾಗಿದೆ.  ಬೆಂಗಳೂರು ಬಾರ್ ಮಾಲೀಕರ ಸಂಘವೇ ಈ […]

ಲೋಕ ಸಮರಕ್ಕೆ ತಿಹಾರ್ ಜೈಲ್ ವಾರ್- ಡಿಕೆ ಬ್ರದರ್ಸ್‍ನಿಂದ ತಿರುಗುಬಾಣ ಅಸ್ತ್ರ ಪ್ರಯೋಗ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನವೇ ಡಿಕೆ ಶಿವಕುಮಾರ್ ಅವರನ್ನ ವಿಪಕ್ಷಗಳು ಟಾರ್ಗೆಟ್ ಮಾಡಿದಂತೆ ಕಾಣುತ್ತಿದೆ. ಲೋಕ ಸಮರಕ್ಕೆ ತಿಹಾರ್ ವಾರ್ ಶುರುವಾಗಿದ್ದು, ಡಿಕೆಶಿಯನ್ನ ಜೈಲಿಗೆ ಹಾಕುವ ಬಗ್ಗೆ ಪ್ರೀಪ್ಲ್ಯಾನ್ ಆಗಿದೆ ಎನ್ನಲಾಗುತ್ತಿದೆ. ಇದಕ್ಕೆ ಡಿಕೆ ಬ್ರದರ್ಸ್ ತಿರುಗುಬಾಣ ಅಸ್ತ್ರ ಪ್ರಯೋಗಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಎಲೆಕ್ಷನ್‍ಗೆ ಹಳೇ ಮೈಸೂರು ಭಾಗದಲ್ಲಿ ಇನ್ನೊಂದು ಅಸಲಿ ವಾರ್ ಬಾಕಿಯಿದೆ. 10-12 ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್‍ಡಿಕೆ ತಿಹಾರ್ ಜೈಲು ಬಗ್ಗೆ ನೆನಪಿಸಿ, ಮತ್ತೆ ತಿಹಾರ್ ಜೈಲಿಗೆ ಹೋಗೋ ಕಾಲ ಬರುತ್ತೆ ಎಂದು […]

ಡಿ. 4ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ

ಬೆಂಗಳೂರು: ಡಿಸೆಂಬರ್ 4ರಿಂದ ಡಿಸೆಂಬರ್ 15 ರವರೆಗೆ ಚಳಿಗಾಲ ಅಧಿವೇಶನ ನಡೆಸುವುದಾಗಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭಿಸಿ, ಬೆಂಗಳೂರಿನಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ನಡೆದಿತ್ತು ಎನ್ನಲಾಗಿತ್ತು. ಆದರೆ ಇಂದು ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸುವುದಾಗಿ ನಿರ್ಧಾರ ಕೈಗೊಳ್ಳಲಾಯಿತು.  ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬೀಳಲಿದೆ. […]

ನನ್ನನ್ನ ಕೆಣಕಿದ್ದೀರಿ ಪರಿಣಾಮ ಕಾದು ನೋಡಿ: ಇಬ್ರಾಹಿಂ ಎಚ್ಚರಿಕೆ

ಬೆಂಗಳೂರು: ದೇವೇಗೌಡರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಮೊದಲು ನನಗೆ ನೊಟೀಸ್ ಕೊಡಬೇಕು. ಕಾರ್ಯಕಾರಿ ಸಮಿತಿಯ 2/3 ಸದಸ್ಯರ ಅನುಮತಿ ಪಡೆದು ನೊಟೀಸ್‌ ಕೊಡಬೇಕು. ಆದ್ರೆ ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿ ಎಂದು ಸಿ.ಎಂ ಇಬ್ರಾಹಿಂ ಎಚ್ಚರಿಕೆ ಕೊಟ್ಟಿದ್ದಾರೆ. ಪಕ್ಷದ ಮೈತ್ರಿ ನಿರ್ಧಾರ, ಪಕ್ಷದ ನಾಯಕರ ವಿರುದ್ದ ಬಂಡೆದಿದ್ದ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಲಾಗಿದೆ. ಈ ಕುರಿತು ಮಾತನಾಡಿದ ಅವರು, […]