ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಅಗ್ಗುಂದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ಸಿಗದೆ ಮನೆಯೊಂದಕ್ಕೆ ನುಗ್ಗಿದೆ. ಅಪಘಾತದಿಂದಾಗಿ ಮನೆ ಜಖಂ ಆಗಿದೆ. 4-5 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ದೊಡ್ಡ ಅನಾಹುತ ತಪ್ಪಿದೆ. ಬಸ್ ಗುದ್ದಿದ ರಭಸಕ್ಕೆ ಮನೆಯ ಗೋಡೆ ಹಾಗೂ ಕಾಂಪೌಂಡ್ ನೆಲಕ್ಕುರುಳಿವೆ. ಬಸ್ ಹಾಗೂ ವಾಸದ ನಿವಾಸಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]












































































































































































































































































































































































































































































































































































































































































































































































































































































































































































































































































































































