August 1, 2026

ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ

ಬೆಂಗಳೂರು: ಶಾಸಕ ಮುನಿರತ್ನ ಅವರು ಅರಮನೆ ಮೈದಾನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಕಾಲಿಗೆ ಬಿದ್ದು ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ಕಂಬಳ ಭೂಮಿ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭ ಶಾಸಕ ಮುನಿರತ್ನ ಅವರು ವೇದಿಕೆ ಮುಂಭಾಗದಲ್ಲಿ ಡಿಕೆಶಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ಕಾಯುತ್ತಿದ್ದರು. ಕಾರ್ಯಕ್ರಮದ ಬಳಿಕ ಡಿಕೆ ಶಿವಕುಮಾರ್ ಅವರು ವೇದಿಕೆಯಿಂದ ಕೆಳಗೆ ಬಂದ ವೇಳೆ ಮುನಿರತ್ನ ಅವರು ಡಿಕೆಶಿ ಅವರ ಕಾಲಿಗೆ […]

ಬಾಲಕೃಷ್ಣ ಮೊದಲು ತಮ್ಮ ಅನುದಾನ ಪಡೆಯಲಿ: ಬೊಮ್ಮಾಯಿ

ಚಿಕ್ಕಬಳ್ಳಾಪುರ: ಇದು ಝೀರೊ ಅನುದಾನ ಸರ್ಕಾರವಾಗಿದ್ದು, ಯಾರಿಗೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ನಾವು ಅನುದಾನ ಹಂಚಿಕೆಯಲ್ಲಿ ಯಾರಿಗೂ ತಾರತಮ್ಯ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ವಿರೋಧ ಪಕ್ಷದ ಶಾಸಕರಿಗೆ ಅನುದಾನ ನೀಡಿದ್ದೇವೆ. ಎಲ್ಲರಿಗೂ ಸಮಾನವಾಗಿ ನೀಡಿದ್ದೆವು ಎಂದರು. ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಅವರು ಆಡಳಿತ ಪಕ್ಷದ ಶಾಸಕರಿಗೆ ಮಾತ್ರ ಅನುದಾನ ನೀಡುವುದಾಗಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಾಲಕೃಷ್ಣ ಅವರು ಸರ್ಕಾರ ಅಲ್ಲ. […]

ಅಖಂಡ ಭಾರತ ಕೇಸರಿಮಯ ಆಗಲಿದೆ

ಉಡುಪಿ: ಇಲ್ಲಿನ ಹಿಂದೂ ಸಮಾಜೋತ್ಸವಕ್ಕೆ ನಗರದಲ್ಲಿ ಕೇಸರಿ ಪತಾಕೆ ಮತ್ತು ಭಗವಾಧ್ವಜ ಅಳವಡಿಸಲು ಪೊಲೀಸ್ ಇಲಾಖೆ 10 ಮತ್ತು 20 ಲಕ್ಷದ ಬಾಂಡ್ ಬರೆಸಿಕೊಂಡಿದ್ದಾರೆ ವಿಶ್ವ ಹಿಂದೂ ಪರಿಷತ್‌ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್ ಅಸಮಾಧಾನ ಹೊರಹಾಕಿದ್ದಾರೆ. ಉಡುಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಭಗವಾಧ್ವಜ ಹಾಕುತ್ತೇವೆ. ಆಗ ಎಷ್ಟು ಲಕ್ಷ ಬಾಂಡ್‌ ಬರೆಸಿಕೊಳ್ಳುತ್ತೀರಿ..? ಎಂದು ಪ್ರಶ್ನಿಸಿದರಲ್ಲದೇ, ನಾಉ ಒಂದು ಕೋಟಿ ರೂಪಾಯಿ ಬಾಂಡ್‌ ಕೊಡಲು ಸಿದ್ಧರಿದ್ದೇವೆ ಎಂದು ಗುಡುಗಿದ್ದಾರೆ.  2024ಕ್ಕೆ ಶ್ರೀರಾಮಂದಿರ ಉದ್ಘಾಟನೆಗೊಳ್ಳಲಿದೆ. ಆಗ […]

ಯಡಿಯೂರಪ್ಪ ಮನವೊಲಿಕೆ – ಉಪವಾಸ ಸತ್ಯಾಗ್ರಹ ವಾಪಸ್‌ ಪಡೆದ ಶಾಸಕ ಮುನಿರತ್ನ

ಬೆಂಗಳೂರು: ಶಾಸಕ ಮುನಿರತ್ನ ಅವರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಮುನಿರತ್ನ ಅವರ ಮನವೊಲಿಸಿ ಉಪವಾಸ ಸತ್ಯಾಗ್ರಹ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಸದ್ಯ ಶಾಸಕರು ತಮ್ಮ ಉಪವಾಸ ಧರಣಿಯನ್ನು ಹಿಂಪಡೆದಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟ ಅನುದಾನ ರದ್ದುಪಡಿಸಿ ಸೇಡಿನ ರಾಜಕೀಯ ಮಾಡಿದ್ದಾರೆ. ನಾನು ಸಿಎಂ ಜೊತೆ ಮಾತನಾಡುತ್ತೇನೆ. ಸಿಎಂ ಜೊತೆ ಮಾತನಾಡಿ ಇದನ್ನು ಸರಿ ಮಾಡುತ್ತೇನೆ. ಇದು ಮೇಲ್ನೋಟಕ್ಕೆ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಎಲ್ಲರಿಗೂ ಕೊಟ್ಟಂತೆ ಅನುದಾನ […]

ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ

ರಾಮನಗರ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ಇದೀಗ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಕಾಂಗ್ರೆಸ್‍ಗೆ ವೋಟು ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ. ವೋಟ್ ಹಾಕದೇ ಇರೋರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಶಾಸಕರ ಈ ಬೇಜಾವಾಬ್ದಾರಿ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ದ್ವೇಷದ ರಾಜಕಾರಣಕ್ಕೆ ಶಾಸಕರು ಮುಂದಾದ್ರಾ ಎಂಬ ಪ್ರಶ್ನೆಯೂ ಎದ್ದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‍ಗೆ ಅನುಕೂಲವಾಗಲಿದೆ. ಕಾಂಗ್ರೆಸ್ ಮತಗಳು ವಿಭಜನೆ ಆಗಲ್ಲ. ರಾಜ್ಯದಲ್ಲಿ ಮುಂದಿನ ಐದು ವರ್ಷ […]

ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

ದೊಡ್ಡಬಳ್ಳಾಪುರ: ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ. ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಮಪುರ ಗ್ರಾಮದ ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ವೇಳೆ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ. ಮಂಗಳವಾರ ಮಧ್ಯಾಹ್ನ 06 ದನಗಳ ಮೈತೊಳೆಯಲು ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ದನಗಳು ಮನೆಗೆ ಹಿಂದಿರುಗಿ ಬಂದರೂ ಕುಮಾರ್ […]

ಯಾದವ ಸಮಾಜವನ್ನ ಕಡೆಗಣಿಸಿತು; ಬಿಜೆಪಿ ತೊರೆಯಲು ಕಾರಣ ತಿಳಿಸಿದ ಪೂರ್ಣಿಮಾ ಶ್ರೀನಿವಾಸ್‌

ಚಿತ್ರದುರ್ಗ: ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. ಇದೇ ತಿಂಗಳ ಅ.20 ರಂದು ಸೇರ್ಪಡೆಯಾಗುವ ಸಾಧ್ಯತೆಗಳಿದ್ದು, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದ ಕೃಷ್ಣ ಯಾದವಾನಂದ ಮಠಕ್ಕೆ ಭೇಟಿ ನೀಡಿದ್ದ ಮಾಜಿ ಶಾಸಕಿ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಕೃಷ್ಣ ಯಾದವಾನಂದ ಶ್ರೀ ಸಮ್ಮುಖದಲ್ಲಿ ಸಮಾಜದ ಮುಖಂಡರೊಂದಿಗೆ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ಪಕ್ಷ ತೊರೆಯಲು ಕಾರಣ ತಿಳಿಸಿದ್ದಾರೆ.  ಅಕ್ಟೋಬರ್‌ 20ಕ್ಕೆ ಕಾಂಗ್ರೆಸ್‌ […]

ಪ್ರಿಯತಮೆಯ ಬೆತ್ತಲೆ ಫೋಟೋ ಸ್ನೇಹಿತರೊಂದಿಗೆ ಹಂಚಿಕೊಳ್ತಿದ್ದ ವಿಕೃತ ಕಾಮಿ ಅಂದರ್

ಬೆಂಗಳೂರು: ಅವರಿಬ್ಬರದ್ದು ಸರಿಸುಮಾರು 10 ವರ್ಷದ ಪ್ರೀತಿ. ಇನ್ನೇನು ಮದುವೆಯ ಖುಷಿಯಲ್ಲಿದ್ದ ಆ ಯುವತಿಗೆ ಶಾಕ್ ನೀಡಿತ್ತು ಅದೊಂದು ಫೋಟೋ. ಫೋಟೋ ಬೆನ್ನತ್ತಿದ್ದ ಪೊಲೀಸರು ಆ ಕೇಸ್‌ಗೆ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಪ್ರಿಯತಮೆಯ ಬೆತ್ತಲೆ ಫೋಟೋಗಳನ್ನು ಸ್ನೇಹಿತರೊಂದಿಗೆ ಹಂಚಿಕೊಂಡು ವಿಕೃತ ಆನಂದ ಪಡ್ತಿದ್ದ ಯುವಕ ಪೊಲೀಸರ ಅತಿಥಿಯಾಗಿದ್ದಾನೆ. ತಮಿಳುನಾಡು ಮೂಲದ ಆ ಯುವಕ-ಯುವತಿ ಸುಮಾರು 10 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಶಿಕ್ಷಣ ಮುಗಿದ ತಕ್ಷಣ ಮದುವೆ ಆಗೋ ಪ್ಲಾನ್ ಕೂಡ ಮಾಡಿದ್ದರು. ಅಷ್ಟರಲ್ಲಿ ಯುವತಿಯ ಬೆತ್ತಲೆ ಫೋಟೋವೊಂದು […]

ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿದ್ದಾರೆ. ಈ ಬದ್ಧತೆಯನ್ನು ಪೂರೈಸಲು ಪ್ರತಿಯೊಬ್ಬರ ಕೊಡುಗೆಯನ್ನು ನಿರೀಕ್ಷಿಸಲಾಗಿದೆ. ಪ್ರಧಾನಿಗಳ ಈ ಆಶಯವನ್ನು ಈಡೇರಿಸಲು ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆಕೊಟ್ಟಿದ್ದಾರೆ. ನಗರದ ರೇವಾ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ದೇಶದ ಆರ್ಥಿಕತೆಯನ್ನು ಬಲಪಡಿಸಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ […]

ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ:

ಮೈಸೂರು: ಮಹಿಷಾ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ಇಲ್ಲದಿದ್ದರೆ ವೀರಪ್ಪನ್ ನಮ್ಮ ದೇವರು. ಮಲೆ ಮಹದೇಶ್ವರ ದೆವ್ವ ಎನ್ನುತ್ತಾರೆ ಎಂದು ಮಹಿಷ ದಸರಾ ಆಚರಿಸುವವರ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು. ನಗರದಲ್ಲಿ ಚಾಮುಂಡಿ ಬೆಟ್ಟ ಚಲೋ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಹಿಷ ದಸರಾದಂಥ ವಿಕೃತಿಗಳನ್ನು ಈಗಲೇ ಸದೆಬಡಿಯಬೇಕು. ಇಲ್ಲದೆ ಇದ್ದರೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ನಮ್ಮ ದೇವರು. ನಮ್ಮ ಮೂಲ ಪುರುಷ ಅಂತ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ. […]