August 1, 2026

ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಮೂರು ವರ್ಷದ ಮಗು ಸಾವು

ಬೆಂಗಳೂರು: ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ. ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು. ಭಾನುವಾರ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ.  ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸ್ ಬಸ್ಸಿನ ಚಕ್ರ […]

ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ – ನ.7 ಕ್ಕೆ ಮೊದಲ, ನ.30 ರಂದು ಕೊನೆ ಚುನಾವಣೆ

ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಕೊನೆಗೂ ಚುನಾವಣಾ ದಿನಾಂಕ ಘೋಷಣೆಯಾಗಿದೆ. ನವೆಂಬರ್‌ 7 ರಿಂದ 30 ರ ವರೆಗೆ ಪಂಚ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್‌ 7 ರಂದು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಛತ್ತೀಸಗಢದಲ್ಲಿ ನ.7 ಮತ್ತು ನ.17 ರಂದು ಎರಡು ಹಂತಗಳಲ್ಲಿ ಮತದಾನ ಇರುತ್ತದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯು ನ.17 ರಂದು ಒಂದೇ ಹಂತದಲ್ಲಿ ನಡೆಯಲಿದೆ. ನಂತರ ನ.23 ರಂದು ರಾಜಸ್ಥಾನದಲ್ಲಿ […]

ಟೊಮೆಟೋ ದರ ಭಾರೀ ಇಳಿಕೆ – ಕೆಜಿಗೆ 4 ರೂ.

ಕೋಲಾರ: ಕಳೆದ ಮೂರು ತಿಂಗಳ ಹಿಂದೆ ಕಿಚನ್ ಕ್ವೀನ್ ಟೊಮೆಟೋಗೆ ಬಂಗಾರದ ಬೆಲೆ ಬಂದಿತ್ತು. ಟೊಮೆಟೋ ಬೆಳೆದ ರೈತರೇ ಕೋಟ್ಯಧಿಪತಿಗಳು ಎಂಬಂತೆ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದರು. ಆದರೆ ಅಂಥಾದೊಂದು ಸಮಯ ಕಳೆದು ಇನ್ನೂ ಮೂರು ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಟೊಮೆಟೋ ಬೆಳೆದ ರೈತನೇ ದುರಾದೃಷ್ಟವಂತ ಎನ್ನುವಂತ ಸ್ಥಿತಿಗೆ ಬಂದು ನಿಂತಿದೆ. ಅದಕ್ಕಾಗಿಯೇ ಟೊಮೆಟೋವನ್ನು ಜೂಜಾಟದ ಬೆಳೆ ಎಂದು ಇಲ್ಲಿನ ರೈತರು ಕರೆಯುತ್ತಾರೆ. ಟೊಮೆಟೋಗೆ ಬೆಲೆ ಬಂದರೆ ಬಂಪರ್, ಇಲ್ಲವಾದರೆ ಬೆಳೆ ಬೆಳೆದ ರೈತರ ಪಾಪರ್ ಎನ್ನುವಂತಾಗಿದೆ. […]

ಬೆಳಗಾವಿ ಹಿಂಡಲಗಾ ಜೈಲಿಗೆ ಬಾಂಬ್ ಬೆದರಿಕೆ ಕರೆ!

ಬೆಳಗಾವಿ: ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿಪಿ ಶೇಷ ಅವರಿಗೆ ಅನಾಮಧೇಯ ಬೆದರಿಕೆ ಕರೆ ಬಂದಿದ್ದು ಜೈಲು ಅಧಿಕಾರಿಗಳಲ್ಲಿ ಆತಂಕ ಶುರುವಾಗಿದೆ. ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ ಸ್ಫೋಟಿಸಲಾಗುವುದು. ಅಲ್ಲದೇ ತಾವು ವಾಸಿಸುವ ವಸತಿ ಗೃಹದ ಮೇಲೆ ಬಾಂಬ್ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಹಿಂಡಲಗಾ ಜೈಲಿನ ಸಿಬ್ಬಂದಿಯ ಪರಿಚಯಸ್ಥನೆಂದು ಹೇಳಿ ಬೆದರಿಕೆ ಕರೆ ಮಾಡಿ, ಜೈಲಿನಲ್ಲಿ ಗಲಭೆ ಸೃಷ್ಟಿಸಿ ಹಲ್ಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಹಿಂಡಲಗಾ ಜೈಲಿನ ಹೆಡ್ ವಾಡರ್‌ಗಳಾದ […]

ದೇವೇಗೌಡರ ಮೈತ್ರಿ ನಿರ್ಧಾರಕ್ಕೆ ನನ್ನ ಒಪ್ಪಿಗೆ ಇದೆ

ಬೆಂಗಳೂರು: ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ಪಕ್ಷದ ಸಿದ್ಧಾಂತ ಬಿಡುವುದಿಲ್ಲ. ದೇವೇಗೌಡರ ನಿರ್ಧಾರ ಜೊತೆ ನಾನು ಇರುತ್ತೇನೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ತಿಳಿಸಿದ್ದಾರೆ. ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಮುಸ್ಲಿಂ ಸಮುದಾಯದ ನಾಯಕರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರ ಮನೆಗೆ ನಾನು ಮೊದಲ ಬಾರಿಗೆ ಹೋದ ಕೂಡಲೇ ನನ್ನನ್ನು ಆಯ್ಕೆ ಮಾಡಿದ್ದರು. ದೇವೇಗೌಡರಿಗೆ ನಿಷ್ಠೆಯಾಗಿ ಇರುತ್ತೇನೆ ಅಂತ ಅವತ್ತೇ ನಾನು ಹೇಳಿದ್ದೆ. ಈಗಲೂ ನಾನು ದೇವೇಗೌಡರ ಜೊತೆ […]

ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ಮುಂದುವರಿದ ನೀರು ಬಿಡುಗಡೆ

ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮುಂದವರಿಕೆಯಾಗಿದ್ದು, ಇಂದು (ಸೋಮವಾರ) 2 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ತಮಿಳುನಾಡಿಗೆ ಹೋಗುತ್ತಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಬೇಕೆಂದು ನಿತರಂತರವಾಗಿ ಹೋರಾಟ ನಡೆಯುತ್ತಿದೆ. ಆದರೆ ಸರ್ಕಾರ ಹೋರಾಟಕ್ಕೆ ಸೊಪ್ಪು ಹಾಕದೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇಂದು ನಾಲೆ ಹಾಗೂ ತಮಿಳುನಾಡಿಗೆ ಸೇರಿ ಡ್ಯಾಂನಿಂದ 5,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂ ಒಳಹರಿವಿನ ಪ್ರಮಾಣ 3503 ಕ್ಯೂಸೆಕ್‌ಗೆ ಕುಸಿತ ಕಂಡಿದ್ದು, 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 100.92 ಅಡಿ […]

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಘರ್ಷವಾಗಲಿದೆ

– ಸ್ವಪಕ್ಷದ ವಿರುದ್ಧವೇ ಮಾಜಿ ಸಚಿವ ಗುಡುಗುPauseUnmute Loaded: 29.16% Remaining Time -8:11Close Player ಚಿತ್ರದುರ್ಗ: ಬಿಜೆಪಿ, ಜೆಡಿಎಸ್ ಮೈತ್ರಿ ಕೇವಲ ರಾಷ್ಟ್ರೀಯ ನಾಯಕರ ಮಧ್ಯೆ ಚರ್ಚೆ ಆಗಿದೆ. ಆದರೆ ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ದರೆ ಎರಡು ಪಕ್ಷಗಳ ಮಧ್ಯೆ ಸಂಘರ್ಷವಾಗಲಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ರೇಣುಕಾಚಾರ್ಯ ಮಾತನಾಡಿದರು. ನಿನ್ನೆಯಷ್ಟೇ ಸ್ವಪಕ್ಷಿಯರ ವಿರುದ್ಧ ಮಾಜಿ ಸಚಿವ ಸೋಮಣ್ಣ ಗುಡುಗಿದ್ದರು. ಇದರ ಬೆನ್ನಲ್ಲೆ ಬಿಜೆಪಿ ನಾಯಕರ […]

ಸಿದ್ದರಾಮಯ್ಯ ಸರ್ಕಾರ ಬಂದ್ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ

ಯಾದಗಿರಿ: ಸಿದ್ದರಾಮಯ್ಯನವರ ಸರ್ಕಾರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿರಲ್ಲಿಲ್ಲ. ಸಿದ್ದರಾಮಯ್ಯರ ಸರ್ಕಾರ ಬಂದ್ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಚಿಂತಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ರು. ಬೈಕ್ ರ‍್ಯಾಲಿ ಮೂಲಕ ನಮೋ ಬ್ರಿಗೇಡ್ 2.0 ಯಾದಗಿರಿಗೆ ಆಗಮಿಸಿದ್ದ ವೇಳೆ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಮತ್ತೊಮ್ಮೆ ಈ ದೇಶಕ್ಕೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಂತಾ ಹೇಳಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ರು. ಹಿಂದಿನ ಆಡಳಿತ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆ ನಾವು […]

ಡ್ಯಾನ್ಸ್ ವಿಚಾರಕ್ಕೆ ಗಲಾಟೆ- ಓರ್ವ ಸಾವು

ಬೆಂಗಳೂರು: ಗಣಪತಿ ಬಿಡುವಾಗ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಶ್ರೀನಿವಾಸ್ ಕೊಲೆಯಾದ ಯುವಕ. ಈತನ ಕೊಲೆಯ ಮೂಲಕ ಎರಡು ಗುಂಪುಗಳ ಜಗಳ ಅಂತ್ಯವಾಗಿದೆ. ಗಣಪತಿ ಬಿಡುವಾಗ ಯಾಕ್ರೋ ಇಲ್ಲಿ ಡ್ಯಾನ್ಸ್ ಮಾಡ್ತೀರಾ ಅಂದಿದ್ದಕ್ಕೆ ಗಲಾಟೆ ನಡೆದಿದ್ದು, ಲಾಂಗ್ ಮಚ್ಚುಗಳಿಂದ ಹೊಡೆದಾಟ ಮಾಡಿಕೊಂಡಿವೆ. ಗಲಾಟೆಯಲ್ಲಿ ರಂಜಿತ್ ಎಂಬವನಿಗೂ ಗಂಭೀರ ಗಾಯಗಳಾಗಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಲಾಟೆ ಬಿಡಿಸಲು ಬಂದ ಮೃತ ಶ್ರೀನಿವಾಸ್ ತಾಯಿಗೂ ಗ್ಯಾಂಗ್ […]

ಊಟಿಯಂತಾದ ಬೆಂಗಳೂರು- 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಮಳೆ ಬಂದರೂ ಶೆಕೆ ಫೀಲ್ ಆಗ್ತಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಮಂದಿಗೆ ಇಂದು ಕೊಂಚ ರಿಲೀಫ್ ಸಿಕ್ಕಿದೆ. ಹೌದು. ಸದ್ಯ ಬೆಂಗಳೂರು ವಾತಾವರಣ ಕೂಲ್ ಕೂಲ್ ಆಗಿದ್ದು, ಊಟಿಯಂತಾಗಿದೆ. ಭಾನುವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದೆ. ರಾತ್ರಿ ಶುರುವಾಗಿ ಬಿಡುವು ನೀಡಿದ್ದ ವರುಣ, ಇಂದು ಬೆಳ್ಳಂಬೆಳಗ್ಗೆಯೇ ಎಂಟ್ರಿ ಕೊಟ್ಟಿದ್ದಾನೆ. ಬೆಳಗ್ಗೆ 6:30 ರಿಂದ ತುಂತುರು ಮಳೆ ಆರಂಭವಾಗಿದ್ದು, ಜಿಟಿ, ಜಿಟಿ ಮಳೆಗೆ ಬೆಂಗಳೂರಿನ ವಾತಾವರಣ ಸಂಪೂರ್ಣ ಕೂಲ್ ಕೂಲ್ ಆಗಿದೆ. ನಗರದ ಬಹುತೇಕ ಕಡೆ ತುಂತುರು ಮಳೆಯಾಗುತ್ತಿದೆ. […]