August 1, 2026

ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ

ಬೆಂಗಳೂರು: ಒಂದೂವರೆ ತಿಂಗಳಲ್ಲಿ ಎರಡನೇ ಪಟಾಕಿ ದುರಂತ ನಡೆದಿದೆ. ಹೀಗಾಗಿ ಹಾವೇರಿ ಮತ್ತು ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಅತ್ತಿಬೆಲೆ ಪಟಾಕಿ ದುರಂತ  ಪ್ರಕರಣ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ತಿಬೆಲೆ ಪಟಾಕಿ ದುರಂತ ಬಹಳ ದೊಡ್ಡ ಘೋರ. 14 ಜನ ಮೃತಪಟ್ಟಿದ್ದಾರೆ, ಇದು ಆಘಾತಕಾರಿ ವಿಚಾರವಾಗಿದೆ. ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. ಗಾಯಾಳುಗಳಿಗೆ ಸರ್ಕಾರ […]

ಸ್ಪಿನ್‌ ಪಿಚ್‌ನಲ್ಲಿ ತಿಣುಕಾಡಿದ ಆಸೀಸ್‌ – ಭಾರತಕ್ಕೆ 200 ರನ್‌ಗಳ ಗುರಿ

ಚೆನ್ಹೈ: ಚೆಪಾಕ್‌ನ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ ವಿಶ್ವಕಪ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 49.3 ಓವರ್‌ಗಳಲ್ಲಿ 199 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ 200 ರನ್‌ಗಳ ಗುರಿ ನೀಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಆಸೀಸ್‌ ಸ್ಪಿನ್‌ ಪಿಚ್‌ನಲ್ಲಿ ರನ್‌ ಕದಿಯಲು ತಿಣುಕಾಡಿತು. ಭಾರತದ ಸ್ಪಿನ್‌ ಮಾಂತ್ರಿಕರ ದಾಳಿ ಹೊರತಾಗಿಯೂ 199 ರನ್‌ ಗಳಿಸಿ, ಟೀಂ ಇಂಡಿಯಾಕ್ಕೆ 200 ರನ್‌ಗಳ ಗುರಿ ನೀಡಿತು.  ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್‌ ವಾರ್ನರ್‌ ಹಾಗೂ ಮಚೆಲ್‌ […]

ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಶಿಫಾರಸ್ಸು

ಬೆಂಗಳೂರು,ಅ.05: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಜೊತೆಗೆ ‘ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದು ಸಚಿವ ಹೆಚ್‌.ಕೆ ಪಾಟೀಲ್ ಹೇಳಿದರು. ಮೂರು ಶಿಫಾರಸ್ಸಿಗೆ ಅಸ್ತು ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು […]

ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ

ಚಿತ್ರದುರ್ಗ, ಅ.05: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ 7 ಜನರನ್ನು ಚಿತ್ರದುರ್ಗ ಜೈಲಿಗೆ ಸ್ಥಳಾಂತರಿಸಿದ್ದಾರೆ. ಈ ಹಿನ್ನಲೆ ಇಂದು(ಅ.05)  ಚಿತ್ರದುರ್ಗ ಕಾರಾಗೃಹಕ್ಕೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದರು. ಆದರೆ, ಕಾರಾಗೃಹದಲ್ಲಿ ಆರೋಪಿಗಳ ಭೇಟಿಗೆ ಸಮಯ ಮೀರಿದ ಹಿನ್ನೆಲೆ ಅಧಿಕಾರಿಗಳು ಭೇಟಿಗೆ ಅವಕಾಶ ನೀಡದ ಕಾರಣ ವಾಪಾಸ್ಸಾದರು. ಈ ವೇಳೆ ಮಾತನಾಡಿದ ಅವರು ‘ಬಂಧಿತ ಆರೋಪಿಗಳನ್ನು ಚಿತ್ರದುರ್ಗ ಜೈಲಿಗೆ ಸ್ಥಳಾಂತರಿಸಿದ್ದು ಏಕೆ ಗೊತ್ತಿಲ್ಲ ಎಂದರು. ಹೌದು, ಭೇಟಿಗೆ ಅವಕಾಶ ಸಿಗದ ಹಿನ್ನಲೆ ಮಾಧ್ಯಮಗಳೊಂದಿಗೆ […]

10 ಲಕ್ಷ ವೆಚ್ಚದಲ್ಲಿ ಕಟ್ಟಿದ ಬಸ್ ಸ್ಟ್ಯಾಂಡ್ ನಾಪತ್ತೆ!

ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ 10 ಲಕ್ಷ ರೂ. ವೆಚ್ಚದಲ್ಲಿ ಕಟ್ಟಲಾಗಿದ್ದ ಬಸ್ ಸ್ಟ್ಯಾಂಡ್ ಅನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಧಾನಸೌಧದ ಬಳಿಯಿರುವ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿ ಇದ್ದ ಬಸ್ ಸ್ಟ್ಯಾಂಡ್ ಗಾಯಬ್ ಆಗಿದೆ. ಆಗಸ್ಟ್ ತಿಂಗಳಿನಲ್ಲಿ ಬಿಬಿಎಂಪಿಯಿಂದ ನಿರ್ಮಾಣವಾಗಿದ್ದ ಬಸ್ ಸ್ಟ್ಯಾಂಡ್ ಒಂದೇ ವಾರದಲ್ಲಿ ಕಳುವಾಗಿದೆ. ಈ ಬಗ್ಗೆ 4 ದಿನಗಳ ಹಿಂದೆ ಹೈಗ್ರೌಂಡ್ ಸ್ಟೇಷನ್‌ನಲ್ಲಿ ದೂರು ದಾಖಲಾಗಿದೆ.  ಅತಿ ಹೆಚ್ಚು ಪ್ರಯಾಣಿಕರಿರುವ ಕಾರಣಕ್ಕೆ ಕನ್ನಿಂಗ್ ಹ್ಯಾಂ ರಸ್ತೆಯ ಬಳಿ 2 ಬಸ್ ಸ್ಟ್ಯಾಂಡ್‌ಗಳನ್ನು […]

ಚುನಾವಣೆ ಬಂದರೆ ಬಿಜೆಪಿಯವರಿಗೆ ಮಸೀದಿ, ಪಾಕಿಸ್ತಾನ ನೆನಪಾಗುತ್ತದೆ

ಬೆಂಗಳೂರು: ಬಿಜೆಪಿ ಅವರಿಗೆ ಕೆಲಸ ಇಲ್ಲ. ಹೀಗಾಗಿ ಶಿವಮೊಗ್ಗ ಗಲಭೆಗೆ ಸತ್ಯ ಶೋಧನ ಸಮಿತಿ ಅಂತ ಪ್ರವಾಸಕ್ಕೆ ಹೊರಟಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಶಿವಮೊಗ್ಗ ಗಲಭೆಗೆ ಸತ್ಯ ಶೋಧನ ಸಮಿತಿ ಹೋಗಿರುವ ವಿಚಾರವಾಗಿ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಇಂತಹ ಕೆಲಸಗಳನ್ನೇ ಮಾಡೋದು. ಬಿಜೆಪಿ ಅವರಿಗೆ ಬೇರೆ ಕೆಲಸ ಇಲ್ಲ. ಚುನಾವಣೆಗಳು ಬಂದಾಗ ಬಿಜೆಪಿ ಅವರಿಗೆ ಪಾಕಿಸ್ತಾನ, ಹಿಂದೂ ಧರ್ಮ, ಗಣೇಶ, ಅಂಜನಾದ್ರಿ ಬೆಟ್ಟ, ಮಸೀದಿ ನೆನಪು […]

ಅರಣ್ಯ ಭೂಮಿ ಒತ್ತುವರಿ ತೆರವು ವಿಚಾರ – ಪ್ರಭಾವಿಗಳ ಜಾಗ ತೆರವು ಯಾವಾಗ ಎಂದ ಬಿಜೆಪಿ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ರಾಜಕೀಯ ಫೈಟ್‍ಗೆ ಕಾರಣವಾಗಿದೆ. ಈಗಾಗಲೇ 1050 ಎಕರೆಯಷ್ಟು ಅರಣ್ಯ ಭೂಮಿಯನ್ನು ತೆರವು ಗೊಳಿಸಲಾಗಿದೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸೇರಿದ ಅರಣ್ಯ ಭೂಮಿ ಒತ್ತುವರಿ ತೆರವು ಮಾಡದೆ, ಸಣ್ಣ ರೈತರ ಭೂಮಿ ತೆರವುಗೊಳಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಣ್ಣ ರೈತರ ಜಮೀನನ್ನು ಮಾತ್ರ ತೆರವು ಮಾಡಿರುವ ಅರಣ್ಯ […]

ಮಣಿಪುರದಲ್ಲಿ ಮತ್ತೆ ಸಂಘರ್ಷ – ಮನೆಗಳಿಗೆ ಹೊತ್ತಿದ ಬೆಂಕಿ

ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ […]

ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಸಮಿತಿ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಾಹಿತಿ ಕಲೆಹಾಕಲು ನಗರಕ್ಕೆ ತೆರಳಿದೆ. ತಂಡದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಡಾ.ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ ಇದ್ದಾರೆ. ಪ್ರಕರಣ ಹಿನ್ನೆಲೆ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿ ತಂಡ ಈ ನಿರ್ಧಾರ ಕೈಗೊಂಡಿದೆ.  ಮೊದಲಿಗೆ ಬಿಜೆಪಿ ಮುಖಂಡರ ತಂಡ ಮೆಗ್ಗಾನ್ […]

ಪತ್ನಿ ಕೊಲೆಗೈದು ಸೀರೆಯಿಂದ ಫ್ಯಾನಿಗೆ ನೇತಾಕಿದ ಕಿರಾತಕ!

ಬೆಂಗಳೂರು: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದರೆ ಇಲ್ಲೊಬ್ಬ ಕಿರಾತಕ ಪತಿಯು ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತಾಕಿದ ಪ್ರಸಂಗವೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರೇಖಾ ಕೊಲೆಯಾದ ಮೃತ ದುರ್ದೈವಿ. ಆರೋಪಿ ಪತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಈ ಘಟನೆ ಯಲಹಂಕ ಉಪನಗರ 3 ನೇ ಹಂತದಲ್ಲಿ ನಡೆದಿದೆ.  ವರದಕ್ಷಿಣೆ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಸಂತೋಷ್ ಪತ್ನಿ ರೇಖಾಳನ್ನು ಕೊಲೆ ಮಾಡಿದ ಬಳಿಕ ಸೀರೆಯಿಂದ […]