August 1, 2026

ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದೆ. ಜಮೀನಿನಲ್ಲೇ ಒಣಗಿ ಹೋದ ಬೆಳೆ ಜಾನುವಾರುಗಳ ಪಾಲಾಗಿವೆ. ಸಾಲಸೋಲ ಮಾಡಿ ಬಿತ್ತಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಹೂವು, ಶೇಂಗಾ, ರಾಗಿ, ಮೆಕ್ಕೆಜೋಳ ಬೆಳೆಗಳು ಹಾಳಾಗಿವೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ, ನಲವತ್ತು ಸಾವಿರ […]

ದೇವೇಗೌಡರ ಎಚ್ಚರಿಕೆಗೆ ಡಿಕೆಶಿ ತಿರುಗೇಟು

ಬೆಂಗಳೂರು: ಮಿಸ್ಟರ್ ಡಿ.ಕೆ.ಶಿವಕುಮಾರ್  ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ JDS​​ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, JDS ವರಿಷ್ಠ ಹೆಚ್​.ಡಿ.ದೇವೇಗೌಡ ಮಾತು ನನಗೆ ಆಶೀರ್ವಾದ ಇದ್ದಂತೆ. ವಿಸರ್ಜನೆ ಮಾಡುತ್ತೇವೆ ಎಂದಾಗ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ರಾಜಕಾರಣ ಹಾವು ಏಣಿ ಆಟ, ಚೆಸ್​ ಗೇಮ್. ಹಿಂದೆ ನೀವೇನು ಮಾಡಿದಿರಿ, […]

ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ

ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕರ್ನಾಟಕ ಮತ್ತೊಂದು ಬಿಹಾರ ಆಗುತ್ತಿದೆ ಎಂದು ಅನಿಸುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಸರ್ಕಾರ ಬಂದ ಮೇಲೆ ಗೂಂಡಾಗಿರಿ ಶುರುವಾಗಿದೆ. ಹಿಂದೂಗಳು ಯಾವುದೇ ಗಲಾಟೆಗೆ ಹೋಗದಿದ್ದರೂ ಮನೆಗೆ ನುಗ್ಗಿ ಹೊಡೆದಿದ್ದಾರೆ. ಹಿಂದೆಯೂ ಸಿದ್ದರಾಮಯ್ಯ ಸರ್ಕಾರದಲ್ಲಿ ಟಿಪ್ಪು ಜಯಂತಿ ಮಾಡಿ ಗಲಾಟೆ ಆಗಿತ್ತು. ನಿರಪರಾಧಿಗಳ ಮೇಲೆ ಹಲ್ಲೆಯಾಗಿದೆ. ಸರ್ಕಾರದ ಕುಮ್ಮಕ್ಕೇ […]

ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು

ನವದೆಹಲಿ: ಇತ್ತೀಚೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹಿಂದೂ ಮಹಾಸಭಾ ಗಣಪತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆದಿದೆ. ಆದರೆ ಭಾನುವಾರ ನಡೆದ ಈದ್ ಮಿಲಾದ್ ರ‍್ಯಾಲಿಯಲ್ಲಿ ಶಾಂತಿಕದಡಲು ಪ್ರಯತ್ನಿಸಲಾಗಿದೆ. ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು. ಇಲ್ಲದಿದ್ದರೆ ಶಿವಮೊಗ್ಗದಲ್ಲಿ ಹತ್ತಿರುವ ಕಿಡಿ ರಾಜ್ಯಕ್ಕೆ ಹಬ್ಬಿದರೂ ಆಶ್ಚರ್ಯವಿಲ್ಲ ಎಂದು ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನವದೆಹಲಿಯಲ್ಲಿ (New Delhi) ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗ ಪೋಲಿಸರು ರ‍್ಯಾಲಿಗೆ ಒಳ್ಳೆಯ ಭದ್ರತೆ ನೀಡಿದ್ದರು. ಇದರ ನಡುವೆಯೂ ಶಾಂತಿ ಕದಡುವ ಕೆಲಸ ನಡೆದಿದೆ. ತಪ್ಪಿತಸ್ಥರ […]

ಹಿಂದೂಗಳನ್ನು ಹೆದರಿಸಲು ಸಂಚು

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆಯುತ್ತೆ ಎಂದು ಪೊಲೀಸರು, ಸರ್ಕಾರಕ್ಕೆ ಗೊತ್ತಿರಲಿಲ್ಲವಾ? ಇದು ಮುಸ್ಲಿಮರ ಹಬ್ಬವಲ್ಲ, ಹಿಂದೂಗಳನ್ನು ಹೆದರಿಸಲು ಮಾಡಿದ ಸಂಚು ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ಮಾಡಿದ್ದಾರೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ ಮುಖಕ್ಕೆ ಕಪ್ಪು ಬಟ್ಟೆ ಧರಿಸಿಕೊಂಡು ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಲ್ಲೆಯಿಂದ ಪಾರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಬದುಕಿದೆಯಾ ಎಂದು ಪ್ರಶ್ನಿಸಿದ್ದಾರೆ. ರಾಜ್ಯ […]

ಶಿವಮೊಗ್ಗದಲ್ಲಿ ಇದೇನು ಹೊಸದಾಗಿ ನಡೆಯುತ್ತಿದ್ಯಾ? ಗೃಹ ಸಚಿವ ಉಡಾಫೆ ಮಾತು

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಭಾನುವಾರ ಸಂಜೆ ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಅವರು ಲಘುವಾಗಿ ಮಾತನಾಡುವ ಮೂಲಕ ಮತ್ತೊಮ್ಮೆ  ವಿರೋಧ ಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.  ಹೌದು.. ಶಿವಮೊಗ್ಗದಲ್ಲಿ ಇದೇನು ಹೊಸದಾಗಿ ನಡೆಯುತ್ತಿದ್ಯಾ? ಎಂದು ಹೇಳುವ ಮೂಲಕ ಶಿವಮೊಗ್ಗದ ಗಲಭೆ ವಿಚಾರವನ್ನು ಗೃಹ ಸಚಿವ ಪರಮೇಶ್ವರ್​ ಉಡಾಫೆ ಮಾತುಗಳನ್ನಾಡಿದ್ದಾರೆ. ಅಲ್ಲದೇ ಗೃಹ ಸಚಿವರ ಈ ಹೇಳಿಕೆ ಗಮನಿಸಿದರೆ ಈ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಂತೆ ಕಾಣಿಸಿದೆ. ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ […]

ಚುನಾವಣಾ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ ಮಾಜಿ ಸಚಿವ

ವಿಜಯನಗರ: ಮಾಜಿ ಸಚಿವ ಆನಂದ್ ಸಿಂಗ್ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆನಂದ್ ಸಿಂಗ್, ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಆದ್ರೆ ನಾನು ಬಿಜೆಪಿ ಕಾರ್ಯಕರ್ತನಾಗಿಯೇ ಮುಂದುವರಿಯುತ್ತೇನೆ. ಪಕ್ಷದ ಹೇಳಿದವರ ಪರವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡುವೆ. ಬಿಜೆಪಿ ಹೇಳದೇ ಇದ್ರೂ ನಾನು ಪಕ್ಷದ ವ್ಯಕ್ತಿಯೇ ಎಂದರು. ಬಿಜೆಪಿಯವರು ಹೇಳಲಿ, ಬಿಡಲಿ, ನಾನು ಪಕ್ಷದಲ್ಲಿಯೇ ಮುಂದುವರಿಯುತ್ತೇನೆ.  ಪಕ್ಷ ಇಂಥವರ ಪರ ಕೆಲಸ ಮಾಡು ಅಂದ್ರೆ ನಾನು ಮಾಡುತ್ತೇನೆಯೇ ಹೊರತು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು […]

ಸಂಕ್ರಾಂತಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ

ರಾಮನಗರ: ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುವ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್​ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ‌. ಅವರಿಗೆ ಶಾಸಕರ ಕಾರ್ಯ […]

ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಶಂಕಿತ ಐಸಿಸ್ ಉಗ್ರನ ಬಂಧನ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಶಂಕಿತ ಐಸಿಸ್ ಉಗ್ರನನ್ನು ಭಯೋತ್ಪಾದನಾ ನಿಗ್ರಹ ದಳ ಕಾರ್ಯಾಚರಣೆ ನಡೆಸಿ ದೆಹಲಿಯಲ್ಲಿ ಬಂಧಿಸಿದೆ ಎಂದು ವರದಿಗಳು ತಿಳಿಸಿವೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ಸೇರಿ ಮತ್ತಿಬ್ಬರು ಶಂಕಿತ ಭಯೋತ್ಪಾದಕರನ್ನು ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ಬಂಧಿಸಿದೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಶಹನವಾಜ್ ಪುಣೆ ಮಾಡ್ಯೂಲ್ ಪ್ರಕರಣದ ಆರೋಪಿಯಾಗಿದ್ದ. ಈತ ಮೂಲತಃ ದೆಹಲಿಯವನು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಈತನನ್ನು ಪುಣೆಯಲ್ಲಿ ಬಂದಿಸಲಾಗಿತ್ತು. ಆದರೆ ಈತ […]

ನಾಗಭೂಷಣ್ ಕಾರು ಅಪಘಾತ: ಮದ್ಯಪಾನದ ರಿಪೋರ್ಟ್ ನೆಗೆಟಿವ್

ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು. ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ (Report) ಕೂಡ ಬಂದಿದ್ದು, ನಾಗಭೂಷಣ್ ಮದ್ಯಪಾನ […]