July 30, 2026

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆನಿರ್ಬಂಧ ಹೇರಲು ಹೈಕೋರ್ಟ್ ನಕಾರ

ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಕೀಲ ಎನ್‌ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲು ನಿರಾಕರಿಸಿದೆ.ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್‌ಗೆ […]

ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ

ಮಾಸ್ಕೋ:ಪ್ರಧಾನಿ ನರೇಂದ್ರ ಮೋದಿಯವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಹ್ವಾನಿಸಿದ್ದಾರೆ.ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸದ್ಯ ರಷ್ಯಾ ಪ್ರವಾಸದಲ್ಲಿದ್ದಾರೆ. ಪುಟಿನ್ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಜೈಶಂಕರ್ ಅವರ ಜೊತೆ ಮಾತನಾಡುತ್ತಾ, ನಮ್ಮ ಆತ್ಮೀಯ ಮಿತ್ರರಾಗಿರುವ ನರೇಂದ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷ ಪಡುತ್ತೇವೆ ಎಂದು ಹೇಳಿದ್ದಾರೆ.ನಮಗೆ ಪ್ರಧಾನಿ ಮೋದಿಯವರ ನಿಲುವು ತಿಳಿದಿದೆ. ಅಲ್ಲದೆ ಈ ಬಗ್ಗೆ ಹಲವು ಬಾರಿ ಮಾತುಕತೆ ನಡೆಸಿದ್ದೇವೆ. ನಾನು ಅವರಿಗೆ ಉಕ್ರೇನ್‌ನ ಸ್ಥಿತಿಗತಿಯ ಬಗ್ಗೆ ವಿವರಿಸಿದ್ದೇನೆ. ಸಂಘರ್ಷವಿಲ್ಲದೆ ಶಾಂತಿಯ ಮೂಲಕ […]

ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಲೂಟಿಆರೋಪಿ ಅಂದರ್

ಹಾವೇರಿ:ಮೈಕ್ರೋಫೈನಾನ್ಸ್ ಒಂದರ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಸೇರಿ ಗ್ರಾಹಕರ ನಕಲಿ ದಾಖಲೆಗಳನ್ನು ಬಳಸಿ ಕೋಟ್ಯಂತರ ರೂ. ಹಣವನ್ನು ಸಾಲ ಪಡೆದು ವಂಚಿಸಿರುವ ಘಟನೆ ಹಿರೇಕೆರೂರಿನಲ್ಲಿ ನಡೆದಿದೆ.ಇಲ್ಲಿನ ಮೈಕ್ರೋಫೈನಾನ್ಸ್ ಒಂದರ ಕ್ಯಾಶಿಯರ್ ಶಿವಾನಂದಪ್ಪ ಹಾಗೂ ಮ್ಯಾನೇಜರ್ ಬಸವರಾಜಯ್ಯ ಕೋಟಿ ಕೋಟಿ ಹಣ ವಂಚಿಸಿರುವ ಆರೋಪಿಗಳಾಗಿದ್ದಾರೆ. ಆರೋಪಿಗಳು ಗ್ರಾಮೀಣ ಭಾಗದ ಮಹಿಳೆಯರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲ ನೀಡಿದ್ದೇವೆ ಎಂದು ತೋರಿಸಿ, ಸುಮಾರು 4,16,14000 ರೂ. ಹಣವನ್ನು ತಾವೇ ಪಡೆದು ಬಳಸಿಕೊಂಡಿದ್ದಾರೆ.ಮೈಕ್ರೋಫೈನಾನ್ಸ್ ಶಾಖೆಯಲ್ಲಿ ಒಂದು ಲೆಕ್ಕ ಹಾಗೂ ಕೇಂದ್ರ […]

ಎಲ್ಲದಕ್ಕೂ ಇತಿಮಿತಿ ಇದೆ, ಕಾನೂನು ಕೈಗೆತ್ತಿಕೊಳ್ಳೋಕೆ ಬಿಡಲ್ಲ

ಬೆಂಗಳೂರು:ಕಾನೂನನ್ನ ಕೈಗೆತ್ತಿಕೊಳ್ಳುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲದಕ್ಕೂ ಇತಿ ಮಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಕರವೇ ಪ್ರತಿಭಟನೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಪರ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಸಾರ್ವಜನಿಕರ ಆಸ್ತಿ-ಪಾಸ್ತಿಗಳನ್ನ ಹಾಳು ಮಾಡೋದು ತಪ್ಪು. ಯಾರ ಆಸ್ತಿನೂ ನಾಶ ಮಾಡಬಾರದು ಎಂದು ಹೇಳಿದರು.ನಾವು ಕನ್ನಡಿಗರೇ ಪ್ರತಿಭಟನೆ ಮಾಡಿ ಅಂತ ನಾನೇ ಹೇಳ್ತೀನಿ. ಪ್ರಜಾಪ್ರಭುತ್ವದಲ್ಲಿ ಅವರು ಏನು ಬೇಕಾದರೂ ಮಾಡಲಿ. ಬೇರೆ ಕಡೆಯಿಂದ ಬಂದು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ತಿಳಿ ಹೇಳೋಣ, ಆದರೆ ಅವರನ್ನ […]

ಜ.೨೨ರಂದು ಎಲ್ಲಾ ದೇಗುಲಗಳಲ್ಲಿ ಶ್ರೀರಾಮನ ಪಠಣೆ!

ಬೆಂಗಳೂರು:ಇಡೀ ಹಿಂದೂ ಸಮಾಜ ಜನವರಿ 22ರ ದಿನಕ್ಕೆ ಕಾದು ಕುಳಿತಿದೆ. ಶ್ರೀರಾಮನೂರಿನಲ್ಲಿ ಶ್ರೀರಾಮಮಂದಿರದ ಲೋಕಾರ್ಪಣೆಯನ್ನು ಕಣ್ತುಂಬಿಕೊಳ್ಳಲು ಕೋಟಿ ಕೋಟಿ ಕಂಗಳು ಕಾಯ್ತಿವೆ. ಈಗಾಗಲೇ ಈ ಕಾರ್ಯಕ್ರಮಕ್ಕೆ ದೇಶದೆಲ್ಲೆಡೆ ಸಿದ್ಧತೆಗಳು ಆರಂಭವಾಗಿವೆ. ಅದರಂತೆ ಕರ್ನಾಟಕದಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ನಿಂದ ಸಿದ್ಧತೆಗಳು ಆರಂಭವಾಗಿವೆ.ಜನವರಿ ೨೨ ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆ ಜನವರಿ 1 ರಿಂದ 15ರವರೆಗೆ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ 15 ದಿನದಲ್ಲಿ ರಾಜ್ಯದ 29,500 […]

ರಾಜ್ಯದ ರೈತರ ಕೈಗೆ ಇನ್ನೂ ಸೇರದ ಬೆಳೆ ಪರಿಹಾರ

ಬೆಂಗಳೂರು:ಬರಗಾಲದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000ರೂ. ಬರ ಪರಿಹಾರವನ್ನು ನೀಡಲಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಘೋಷಣೆ ಮಾಡಿ ತಿಂಗಳುಗಳೇ ಕಳೆದರೂ ರಾಜ್ಯದ ರೈತರ ಕೈಗೆ ಇನ್ನೂ ಕೂಡ ಬೆಳೆ ಪರಿಹಾರದ ಹಣ ಕೈಗೆ ಸಿಕ್ಕಿಲ್ಲ. ಕೇವಲ ಘೋಷಣೆಗೆ ಮಾತ್ರ ಸೀಮಿತವಾದಂತಿದೆ. ಹೀಗಾಗಿ ರಾಜ್ಯದ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 […]

ಶಿಕ್ಷಣ ಸಚಿವರ ತವರಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್

ಶಿವಮೊಗ್ಗ:ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದ್ದು ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಈ ಪ್ರಕರಣ ರಾಜಕೀಯ ತಿರುವು ಪಡೆದು ಗಂಭೀರವಾಗಿ ಪರಿಗಣಿಸಿದ್ದ ಸಿಎಂ ಸಿದ್ಧರಾಮಯ್ಯ ಕ್ರಮಕ್ಕೆ ಸೂಚಿಸಿದ್ದರು. ಆದರೆ ಇದೀಗ ಇದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ. ಅದರಲ್ಲೂ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೆ ಶಿವಮೊಗ್ಗದಲ್ಲಿ ಶಾಲಾ ಮಕ್ಕಳಿಂದ […]

ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಕೆ:ನಾಲ್ವರು ಪೊಲೀಸ್ ಬಲೆಗೆ

ಬೆಂಗಳೂರು:ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಡಿ.೩೧ರಂದು ವಿವಿಧೆಡೆ ಡ್ರಗ್ಸ್ ಸರಬರಾಜು ಮಾಡಲು ಅಪಾರ ಪ್ರಮಾಣದ ಆರ್ಡರ್ ಪಡೆದಿದ್ದರು.ಬಂಧಿತರನ್ನು ಗಂಗೊAಡನಹಳ್ಳಿ ಅನಿಲ್ (21), ಅಂದ್ರಹಳ್ಳಿ ಕಾರ್ತಿಕ್ (18), ನವೀನ್ (20) ಮತ್ತು ದೊಂಬರಹಳ್ಳಿ ಮಂಜುನಾಥ್ (19) ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 2 ಕೆಜಿ ಗಾಂಜಾ, […]

ಚುನಾವಣೆಯಲ್ಲಿ ಸೋತಿದ್ದಕ್ಕೆ ಕರ್ನಾಟಕ ವಿವಿ ನೌಕರ ಆತ್ಮಹತ್ಯೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮುರುಘಾ ಮಠದ ಬಳಿ ನಡೆದಿದೆ. ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾಂತ್ ಸಾವಳಗಿ (55) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಶನಿವಾರ ಚುನಾವಣೆ ಫಲಿತಾಂಶ ಬಂದ ಮೇಲೆ ಮನೆಗೆ ವಾಪಸ್ ಆಗಿದ್ದ ಅವರು ಅದೇ ದಿನ ರಾತ್ರಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೂರ್ನಾಲ್ಕು ದಿನಗಳಿಂದ ಮನೆಯ ಬಾಗಿಲು ತೆರೆಯದ ಕಾರಣ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ […]

ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ

ಮೈಸೂರು: ಸೋಮಾರಿ ಸಿದ್ದ ಎಂಬ ಪದ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳಕೆ ಮಾಡಿದ್ದು ಎಂದು ಭಾರೀ ಆಕ್ರೋಶ ಹೊರಬಂದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಸಂದದರು, ಸೋಮಾರಿ ಸಿದ್ದ ಅಂತಾ ನಾನು ಬಳಸಿದ್ದು ಸಿದ್ದರಾಮಯ್ಯ ಅವರಿಗೆ ಅಲ್ಲ. ಸೋಮಾರಿ ಸಿದ್ದ ಅನ್ನೋದು ನಾಮ ಪದವಲ್ಲ. ಅದು ಒಂದು ಸಂದರ್ಭ ವಿವರಿಸುವ ನಾಣ್ನುಡಿ ಅಷ್ಟೇ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದರು. ಸಿದ್ದರಾಮಯ್ಯ ಅವರೇ ನೀವು ಮಹಾರಾಜರನ್ನ, […]