August 1, 2026

2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ

ನವದೆಹಲಿ: ಲೋಕಸಭಾ ಚುನಾವಣೆ 2024ರಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮುಂದಿನ‌ ಐದು ವರ್ಷ ನಿಖಿಲ್​​ ಕುಮಾರಸ್ವಾಮಿಯನ್ನು ಕರೆತರುವ ಪ್ರಶ್ನೆಯೇ ಇಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ನಿಖಿಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಕುಮಾರಸ್ವಾಮಿ ಜೊತೆ ನಿಖಿಲ್ ಕೂಡ ದೆಹಲಿಗೆ ತೆರಳಿದ್ದಾರೆ. ಅದರಂತೆ ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟನೆ ನೀಡಿದರು. ಮುಂದಿನ‌ ಐದು […]

ಕಾವೇರಿ ವಿಷಯ ಉಲ್ಬಣವಾಗಲು ಡಿಕೆಶಿ ಕಾರಣ

SHARE ಶಿವಮೊಗ್ಗ: ಕಾವೇರಿ ನದಿ ಕಾಂಗ್ರೆಸ್ ಹಾಗೂ ಡಿಕೆಶಿ ಸ್ವತ್ತಲ್ಲ. ಬದಲಿಗೆ ಇದು ರಾಜ್ಯದ ಜನರ ಸ್ವತ್ತು. ಕಾವೇರಿ ವಿಷಯ ಇಷ್ಟೊಂದು ಉಲ್ಬಣವಾಗಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರಣ. ಹೀಗಾಗಿ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಕೆಶಿ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಆಗ್ರಹಿಸಿದರು ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಅವರು INDIA ತೃಪ್ತಿಪಡಿಸಲು, ಸ್ಟಾಲಿನ್ ತೃಪ್ತಿಪಡಿಸಲು, ಸೋನಿಯಾ ಗಾಂಧಿ ಅವರನ್ನು ತೃಪ್ತಿಪಡಿಸುವ ಸಲುವಾಗಿ ಯಾರನ್ನೂ ಕೇಳದೇ ತಮಿಳುನಾಡಿಗೆ ಕದ್ದುಮುಚ್ಚಿ […]

ಕಾವೇರಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಅಧಿವೇಶನ ಕರೆಯಬೇಕು

ಬೆಂಗಳೂರು: ಕಾವೇರಿ ವಿಚಾರ ಚರ್ಚೆ ಮಾಡಲು ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು ಎಂದು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶನಿವಾರ ಮಂಡ್ಯ ಬಂದ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಡ್ಯ ಬಂದ್‌ಗೆ ನಮ್ಮ ಪಕ್ಷದ ಬೆಂಬಲ ಇದೆ. ರಾಜ್ಯದ ಜಲ ಮತ್ತು ನೆಲದ ವಿಷಯದಲ್ಲಿ ರಾಜಕೀಯ ಮಾಡಬಾರದು. ತಪ್ಪು ಯಾರದ್ದೇ ಇರಲಿ ಈಗ ಚರ್ಚೆ ಬೇಡ. ಏನು ಸರಿಪಡಿಸಬೇಕು ಎಂದು ಸರ್ಕಾರ ಯೋಚನೆ ಮಾಡಲಿ. ಕಾವೇರಿ ವಿಷಯಕ್ಕಾಗಿ ವಿಶೇಷ ಅಧಿವೇಶನ ಕರೆದು ಒಂದು ನಿರ್ಣಯ […]

ಡಿಸಿಎಂ ಕೂಗಿಗೆ ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್​ನಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್  ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ. ನನ್ನ ರಾಜಕೀಯ ಟ್ರ್ಯಾಕ್ ರೆಕಾರ್ಡ್ ಇದೆ. 1975 ರಿಂದ ನನ್ನ ಹೋರಾಟ ನೋಡಿದ್ದೀರಿ. ಹೋರಾಟದ ಮೂಲಕ ನಾನು ಈ‌ ಮಟ್ಟಕ್ಕೆ ಬಂದಿದ್ದೇನೆ ಎಂದು ಸ್ವಪಕ್ಷೀಯರಿಗೇ […]

ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ನೋಟಿಸ್

– A ನವದೆಹಲಿ: ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್ , ಸಿಬಿಐ, ಎ ರಾಜಾ ಮತ್ತು ಇತರ ಪಕ್ಷಗಳಿಗೆ ಕೂಡ ನೋಟಿಸ್ ಜಾರಿಗೊಳಿಸಿ ಕೋರ್ಟ್ ಪ್ರತಿಕ್ರಿಯೆ ಕೇಳಿದೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂಬ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ನ್ಯಾಯಾಲಯ ಈ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ […]

ಬಂಗಾರಪ್ಪ ಚಿಟಿಕೆ ಹೊಡೆಯುವುದರಲ್ಲಿ ಕಾವೇರಿ ಸಮಸ್ಯೆಗೆ ಉತ್ತರ ಕೊಟ್ಟಿದ್ದರು

ರಾಯಚೂರು: ಕಾವೇರಿ ನೀರಿನ ವಿಚಾರದಲ್ಲಿ ಬಂಗಾರಪ್ಪನವರು ( ಮುಖ್ಯಮಂತ್ರಿ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಉತ್ತರ ಕೊಟ್ಟಿದ್ದರು. ಬಂಗಾರಪ್ಪನವರ ಕಾಲದ ಕಾನೂನು ಬೇರೆ, ಈಗ ಬೇರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. Advertisement: 0:55Close Player ರಾಯಚೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಬಂಗಾರಪ್ಪ ತೆಗೆದುಕೊಂಡ ತೀರ್ಮಾನ ತೆಗೆದುಕೊಂಡರೆ ಅವರ ಜೊತೆ ಇರುತ್ತೇವೆ. ಪ್ರಾಧಿಕಾರ ವಿರುದ್ಧ ಹೋಗಿದ್ದಕ್ಕೆ ಹೈಕೋರ್ಟ್‌ನಲ್ಲಿ ಆಗ ನಮಗೆ ಛೀಮಾರಿ ಹಾಕಿದ್ದರು. ಅಷ್ಟರೊಳಗೆ ನಮ್ಮ ತಂದೆಯವರು ಏನೇನು ಮಾಡಬೇಕೋ ಮಾಡಿ ಮುಗಿಸಿದ್ದರು ಎಂದರು.  ಶಿಕ್ಷಕರ […]

ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ

ಹುಬ್ಬಳ್ಳಿ: ಮೋದಿ ಅವರ ಉದಾತ್ತ ಚಿಂತನೆಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ ಇವತ್ತು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ನಾರಿ ಶಕ್ತಿ ವಂದನ್ ಅಧಿನಿಯಮ ಅಂಗೀಕಾರದ ಬಳಿಕ ತಮ್ಮ ದೆಹಲಿ ಕಚೇರಿಯಿಂದ ಹೇಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿರುವ ಅವರು, ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮಹಿಳಾ ಮೀಸಲಾತಿ ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. 1980-90ರ ದಶಕದಿಂದ ಮಹಿಳಾ ಮೀಸಲಾತಿ […]

ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್

ಬೆಂಗಳೂರು/ಮಂಡ್ಯ: ಕಾವೇರಿಗಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಮಂಡ್ಯ ಬಂದ್ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೆಆರ್‌ಎಸ್ , ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ಮಾಡೂರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ […]

ಬಿಜೆಪಿ, ಕಾಂಗ್ರೆಸ್ ಒಂದೊಂದು ದಿಕ್ಕಿನಲ್ಲಿದೆ

ನವದೆಹಲಿ: ಕಾವೇರಿ ರಕ್ಷಣೆಗಾಗಿ ರೈತರ ಹೋರಾಟ ಭುಗಿಲೇಳುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಹ ದನಿ ಎತ್ತಿದ್ದಾರೆ. ದೆಹಲಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಒಗ್ಗಟ್ಟು ಎಲ್ಲಿದೆ? ಕಾಂಗ್ರೆಸ್, ಬಿಜೆಪಿ ಒಂದೊಂದು ದಿಕ್ಕಿನಲ್ಲಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾವೇರಿ ವಿಚಾರದಲ್ಲಿ ನಾನು ಏನೂ ಮಾತನಾಡಿಲ್ಲ. ಆದ್ರೆ ಕುಮಾರಸ್ವಾಮಿ ದೊಡ್ಡ ಅನಾಹುತ ಆಗುವ ಮುನ್ನವೇ ಎಚ್ಚರಿಕೆ ನೀಡಿದ್ದರು. ಅಧಿಕಾರಿಗಳು ಎಲ್ಲಾ ಸರಿಯಾಗುತ್ತೆ ಅಂತಾರೆ. ಈಗಾಗಲೇ ಎಲ್ಲಾ ಮುಗಿದುಹೋಗಿದೆ, ಸುಪ್ರೀಂ ಕೋರ್ಟ್ ಆದೇಶ ನೀಡಿ ಆಗಿದೆ. ಈಗ ನಾನೇನು […]

ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಬೆಂಗಳೂರು: ಇಲ್ಲಿನ ಯಶವಂತಪುರ ಯಾರ್ಡ್ ಬಳಿ ನಡೆದ ಬಿಎಂಡಬ್ಲ್ಯೂ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.PauseUnmute ಮನಮೋಹನ್ (31) ನಿಖಿಲ್ (25) ಮೃತ ದುರ್ದೈವಿಗಳು. ಮುಂಜಾನೆ 3:30ರ ಸಮಯದಲ್ಲಿ ಘಟನೆ ನಡೆದಿದೆ.  ಅತಿವೇಗವಾಗಿ ಬಿಎಂಡಬ್ಲೂ ಬೈಕ್ ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್‌ಎಂಸಿ ಯಾರ್ಡ್ ರೋಡ್ ಕಡೆಗೆ ಡ್ರೈವ್‌ ಮಾಡಿಕೊಂಡು ಬರುತ್ತಿದ್ದರು. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದದ್ದು ಮಾತ್ರವಲ್ಲದೇ ಹೆಲ್ಮೆಟ್ ಸಹ ಧರಿಸಿರಲಿಲ್ಲ. ಕೊನೆಗೆ ಬೈಕ್ ನಿಯಂತ್ರಣಕ್ಕೆ ಸಿಗದೇ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್‌ನಿಂದ ಕೆಳಗೆ ಬಿದ್ದು […]