ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ
ಬೆಂಗಳೂರು: ಸುಪ್ರೀಂಕೋರ್ಟ್ ಆದೇಶ ದುರದೃಷ್ಟಕರ. ಮತ್ತೊಮ್ಮೆ ನಮ್ಮ ರಾಜ್ಯದ ಕಾನೂನು ತಂಡ ಸುಪ್ರೀಂಕೋರ್ಟ್ ಮುಂದೆ ವಸ್ತುಸ್ಥಿತಿ ತಿಳಿಸಲು ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಸಿಡಬ್ಲ್ಯೂಸಿ ಆದೇಶ ಬಂದಾಗ ಕರ್ನಾಟಕ ಸುಪ್ರೀಂಕೋರ್ಟ್ಗೆ ಹೋಗಬೇಕಿತ್ತು. ನೀರು ಬಿಡಲು ಆಗಲ್ಲ ಎಂದು ಅಫಿಡವಿಟ್ ಹಾಕಬೇಕಿತ್ತು. ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ (CWRC), ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ […]












































































































































































































































































































































































































































































































































































































































































































































































































































































































































































































































































































































