May 30, 2026
#ಬೆಂಗಳೂರು

ಅಕ್ರಮ ಆಸ್ತಿಗಳಿಕೆ ಕೇಸ್ಡಿಕೆಶಿ ವಿರುದ್ಧ ಲೋಕಾಯುಕ್ತದಿಂದಲೂ ತನಿಖೆ

ಬೆಂಗಳೂರು:
ಡಿಸಿಎಂ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಈಗ ಎರಡು ಸಂಸ್ಥೆಗಳು ತನಿಖೆ ನಡೆಸಲಿದೆ.
ಹೌದು. ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ ನಡೆಸಲು ಸರ್ಕಾರ ಮುಂದಾಗಿದೆ. ಡಿಕೆ ಶಿವಕುಮಾರ್ ಅವರೇ ಈ ವಿಚಾರವನ್ನು ತಿಳಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಆಗಿದೆ ಎಂದು ಹೇಳಿದ್ದಾರೆ.
2013ರಿಂದ 2018ರವರೆಗೆ 74ಕೋಟಿ ರೂ. ಅಕ್ರಮ ಆಸ್ತಿಯನ್ನು ಡಿಕೆಶಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈಗ ಸಿಬಿಐ ತನಿಖೆ ನಡೆಸಿದ್ದು ಚಾರ್ಜ್‌ಶೀಟ್ ಸಲ್ಲಿಕೆ ಮಾಡಲು ಮಾತ್ರ ಬಾಕಿಯಿದೆ.
ಏನಿದು ಪ್ರಕರಣ?
೨೦೧೭ ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು.
**

Leave a comment

Your email address will not be published. Required fields are marked *