September 14, 2026
#ಬೆಂಗಳೂರು

ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ ನಿತ್ಯ ಪ್ರತಿಭಟನೆ ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್‌ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.

1992ರ ಡಿಸೆಂಬರ್ 6ರ ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್‌ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು.  

Leave a comment

Your email address will not be published. Required fields are marked *