September 13, 2026
#ಬೆಂಗಳೂರು

ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ

ಬೆಂಗಳೂರು:
ಇಂದಿನಿAದ ರಾಜಧಾನಿಯ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿAದ ಅಭಿಯಾನ ನಡೆಸಲಿದೆ. ಇಂದು ಮಧ್ಯಾಹ್ನ ೧೨ ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ.
ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಿದೆ.
ದೇವಾಲಯದ ಒಳಗೆ ವಸ್ತ್ರಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಈ ಹಿಂದೆ ಒತ್ತಾಯಿಸಿತ್ತು. ಇದಕ್ಕೆ ಹಿಂದೂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು.
ಈ ಸಂಬAಧ ಕಳೆದ ತಿಂಗಳು ರಾಜ್ಯದ ಎಲ್ಲ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ಸಭೆ ನಡೆಸಿದ್ದರು. ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು. ಹೀಗಾಗಿ ಇಂದಿನಿAದ ಬೆಂಗಳೂರಿನ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.
ಈ ವಸ್ತ್ರಸಂಹಿತೆ ಪ್ರಕಾರ ಪುರುಷರು ದೇವಲಾಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್, ಎದೆ ಕಾಣುವ ಟಿಶರ್ಟ್ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ. ಒಂದು ವೇಳೆ ಬಂದರೇ ದೇವಸ್ಥಾನದ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.
ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗ ಹೋಗುವಂತಿಲ್ಲ. ಈ ಬಗ್ಗೆ ಬಿಗಿಯಾದ ವಸ್ತ್ರ ಸಂಹಿತೆ ಜಾರಿಯಲ್ಲಿದೆ.

Leave a comment

Your email address will not be published. Required fields are marked *