July 29, 2026
#Uncategorized #ಬೆಂಗಳೂರು

ಕರವೇ ನಾರಾಯಣಗೌಡಗೆ ತಪ್ಪಿಲ್ಲ ಸಂಕಷ್ಟ

ಬೆಂಗಳೂರು:
ಕರ್ನಾಟಕ ರಕ್ಷಣಾ ವೇದಿಕೆ ಕಳೆದ ವರ್ಷ ಡಿಸೆಂಬರ್ 27 ರಂದು ರಾಜಧಾನಿ ಬೆಂಗಳೂರಿನಲ್ಲಿ ನಾಮಫಲಕ ಮಹಾ ಅಭಿಯಾನ ಕೈಗೊಂಡಿತ್ತು. ಅಂಗಡಿ-ಮುಗ್ಗಟ್ಟು, ಮಾಲ್‌ಗಳು ಸೇರಿದಂತೆ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಇಲ್ಲದಿದ್ದಕ್ಕೆ ಹೋರಾಟ ನಡೆಸಿದ್ದರು. ಅಂದು ಕನ್ನಡ ನಾಮಫಲಕವಿಲ್ಲದ ಕೆಲವು ಮಾಲ್ ಮತ್ತು ಅಂಗಡಿಗಳ ಮೇಲೆ ಕರವೇ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ೨೯ ಜನರನ್ನು ಬಂಧಿಸಲಾಗಿತ್ತು.
ಈ ಪ್ರಕರಣದಲ್ಲಿ ಕರವೇ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದ್ದು, ಬಿಡುಗಡೆಯಾಗಿದ್ದರು. ಆದರೆ 2017ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರವೇ ನಾರಾಯಣಗೌಡ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದರು. ಈ ಪ್ರಕರಣದಲ್ಲೂ ಕರವೇ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದೆ. ಆದರೆ ನಾರಾಯಣಗೌಡ ಅವರ ವಿರುದ್ಧದ ಇನ್ನೂ ಅನೇಕ ಪ್ರಕರಣಗಳು ಬಾಕಿ ಇವೆ. ಇದರಿಂದ ಕರವೇ ನಾರಾಯಣಗೌಡ ಅವರು ಜೈಲಿಂದ ಬಿಡುಗಡೆಯಾದ್ರೂ ಸಂಕಷ್ಟ ತಪ್ಪಿಲ್ಲ.
ಕರವೇ ನಾರಾಯಣಗೌಡ ಅವರು ಬಂಧನವಾಗಿದ್ದು ಒಂದು ಪ್ರಕರಣದಲ್ಲಿ, ಆದರೆ ಇನ್ನೂ ಎಂಟು ಕೇಸ್‌ಗಳು ಬಾಕಿ ಇವೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ 6 ಪ್ರಕರಣ, ಯಲಹಂಕ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಬಾಕಿ ಇವೆ. ಈ ಎಲ್ಲಾ ಪ್ರಕರಣಗಳಲ್ಲೂ ಪೊಲೀಸರು 41(a) ಅಡಿ ನೋಟಿಸ್ ನೀಡಲಿದ್ದಾರೆ. ಕರವೇ ನಾರಾಯಣಗೌಡ ಅವರು ಇಷ್ಟು ದಿನ ಜೈಲಲ್ಲಿದ್ದ ಕಾರಣ ಪೊಲೀಸರು ನೋಟೀಸ್ ನೀಡಿಲ್ಲ. ಇದೀಗ ಬಿಡುಗಡೆಯಾದ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ವಿಚಾರಣೆ ನಡೆಸಲಿದ್ದಾರೆ.

Leave a comment

Your email address will not be published. Required fields are marked *