July 29, 2026
#ಜಿಲ್ಲೆ

ಲೋಕಸಭಾ ಚುನಾವಣೆ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂಯತೀಂದ್ರ ಹೊಸ ಬಾಂಬ್!

ಹಾಸನ:
2024ರ ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ, ೫ ವರ್ಷ ಸಿಎಂ ಆಗಿರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಚುನಾವಣೆಗೂ ಮೊದಲು 5 ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು ೫ ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆ ಎಂದು ತಂದೆಯನ್ನು ಕೊಂಡಾಡಿದ್ದಾರೆ.
ಹೆಚ್ಚು ಸ್ಥಾನ ಗೆದ್ದರೆ ಮತ್ತಷ್ಟು ಬಲ:
ಬಡವರಿಗಾಗಿ, ಶೋಷತರಿಗೆ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 36 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು ಎಂದು ಮನವಿ ಮಾಡಿದ್ದಾರೆ.
ಹೆಚ್ಚು ಸ್ಥಾನ ಗೆದ್ದರೆ ಗ್ಯಾರಂಟಿ ಮುಂದುವರಿಸುತ್ತಾರೆ:
2024ರ ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಆಗ ಸಿದ್ದರಾಮಯ್ಯನವರ ಬಲ ಹೆಚ್ಚಿಲಿದ್ದು, ಮುಂದಿನ ೫ ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗುತ್ತೆ. ಹಾಗಾಗಿ ನಿಮ್ಮ ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಮನವಿ ಮಾಡಿದ್ದಾರೆ.

Leave a comment

Your email address will not be published. Required fields are marked *