ಶಾಂತಲಾ ಸಿಗ್ನಲ್ನಲ್ಲಿ 2 ಕೆಎಸ್ಆರ್ಟಿಸಿ ಬಸ್ಗಳ ಮೇಲೆ ದೊಣ್ಣೆಯಿಂದ ದಾಳಿ; ಇಬ್ಬರು ವಶ
ಬೆಂಗಳೂರು: ನಗರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟವಾಗಿದೆ. ಬೆಂಗಳೂರಿನ ಶಾಂತಲಾ ಸಿಗ್ನಲ್ನಲ್ಲಿ ನಿನ್ನೆ ಮಧ್ಯ ರಾತ್ರಿ 2 ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. KSRTC ಬಸ್ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್ಗಳ ಗ್ಲಾಸ್ಗಳು ಪುಡಿ ಪುಡಿಯಾಗಿವೆ. ಇಮ್ರಾನ್ ಮತ್ತು ಆರೀಫ್ ಎಂಬ ಇಬ್ಬರು ಕಿಡಿಗೇಡಿಗಳು ದೊಣ್ಣೆಯಿಂದ ಗ್ಲಾಸ್ ಹೊಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 2 KSRTC ಬಸ್ಗಳು ಶಾಂತಲಾ ಸಿಗ್ನಲ್ ಬಳಿ ನಿಂತಿವೆ. ಹಿಂದೆಯೇ 1 ಆಟೋ, ಎರಡು ಬೈಕ್ಗಳಲ್ಲಿ ಬಂದಿದ್ದ ಐವರು ಪುಂಡರು ಏಕಾಏಕಿ ರಾಡ್, ದೊಣ್ಣೆ, ಕಲ್ಲುಗಳಿಂದ ಕೆಎಸ್ಆರ್ಟಿಸಿ ಬಸ್ನ ಗಾಜು ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಧ್ಯರಾತ್ರಿ 1.45ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ನಡೆಯಲು ಕಾರಣ ಏನು ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಸದ್ಯ ಕಾಟನ್ ಪೇಟೆ ಪೊಲೀಸರು ಇಮ್ರಾನ್ ಮತ್ತು ಆರೀಫ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.














































































































































































































































































































































































































































































































































































































































































































































































































































































































































































































































































































































