ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣ ಸಿಐಡಿ ತನಿಖೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ
ಬೆAಗಳೂರು:ಬೆಳಗಾವಿಯ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹೆಸರಿನಲ್ಲಿ ಅಪೆಕ್ಸ್ ಬ್ಯಾಂಕ್ನಿAದ ಕೋಟ್ಯಾಂತರ ರೂಪಾಯಿ ಸಾಲ ಪಡೆದು ಮರುಪಾವತಿಸದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ. ಇದೀಗ ರಾಜ್ಯ ಸರ್ಕಾರ, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.ಮಾಜಿ ಸಚಿವ, ಗೋಕಾಕ್ ಶಾಸಕ […]







































































































































































































































































































































































































































































































































































































































































































































































































































































































































































































































































































































