September 15, 2026

ಸಂಸದ ಅನಂತಕುಮಾರ್ ಹೆಗಡೆಗೆ ಬಿಜೆಪಿ ಕಾರ್ಯಕರ್ತರ ಕ್ಲಾಸ್

ಬೆಳಗಾವಿ:ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಭೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಾರ್ಯಕರ್ತರ ಕೈಗೆ ನೀವು ಸಿಕ್ಕಿಲ್ಲ. ನಿಮ್ಮ ಪಿಎಗಳು ಕೂಡ ಸರಿಯಾಗಿ ಸ್ಪಂದಿಸಿಲ್ಲ, ಹೇಗೆ ಮಾಡಬೇಕು. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಕುಂಠಿತಗೊAಡಿವೆ. ಖಾನಾಪುರದಲ್ಲಿ ಸಂಸದರ ಕಾರ್ಯಾಲಯ ಓಪನ್ ಮಾಡಿ ಎಂದು ಒತ್ತಾಯಿಸಿದ್ದಾರೆ.ಖಾನಾಪುರ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ […]

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಶಿವಮೊಗ್ಗ:ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ನಲ್ಲಿ […]

ಎಸ್‌ಸಿ ಒಳಮೀಸಲಾತಿ ಪುನರ್ ಪರಿಶೀಲನೆ

ಬೆಂಗಳೂರು:ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ ನೀಡಲಾಗಿದ್ದ ಒಳಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ಮಾಡ್ತೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ ನೀಡಿದ್ದ ಒಳಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ಮಾಡ್ತೇವೆ. ಏಕೆಂದರೆ ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ಒಳಮೀಸಲಾತಿ ಕೊಟ್ಟಿಲ್ಲ ಎಂದು ಟೀಕಿಸಿದ್ದಾರೆ.ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಗ್ಗೆ ಒಂದು ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶದಲ್ಲಿ ಸದಾಶಿವ ಆಯೋಗದ ನಿರ್ಣಯ ಕೈಗೊಳ್ಳಲು ತೀರ್ಮಾನ ಮಾಡಿದ್ದೆವು. […]

ಶೀಘ್ರದಲ್ಲೇ ಸಿಎಂ ಕೈ ಸೇರಲಿದೆ ಪಿಎಸ್‌ಐ ನೇಮಕಾತಿ ಅಕ್ರಮದ ವರದಿ

ಬೆಂಗಳೂರು:ರಾಜ್ಯದಲ್ಲಿ ನಡೆದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬAಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಸಮೀತಿಯು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿ ಸಲ್ಲಿಸಲಿದೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಕರಣದ ಮರು ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ […]

ಸಿದ್ದರಾಮಯ್ಯ ವಿರುದ್ಧ ಅನಂತ್ ಕುಮಾರ್ ಹೆಗಡೆ ಪರೋಕ್ಷ ವಾಗ್ದಾಳಿ

ಬೆಳಗಾವಿ:ನಾವು ಹಿಂದೂಗಳು ಎಂದು ಮರೆತು ಹೋಗಿತ್ತು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದ್ರೇ ಅವರ ಜಾತಿ ಹೆಸರು ಹೇಳ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಇನ್ನು ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ. ಖಾನಾಪುರ ಪಟ್ಟಣದಲ್ಲಿ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.ಈಗಾಗಲೇ ರಾಮ ಮಂದಿರ […]

ಅಮಿತ್ ಶಾ, ಜೆಪಿ ನಡ್ಡಾ ಭೇಟಿಯಾದ ಕುಮಾರಸ್ವಾಮಿ

ಬೆಂಗಳೂರು:ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಬುಧವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬAಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಂತರ ಸೀಟು ಹಂಚಿಕೆ ಚರ್ಚೆ ನಡೆಯಲಿದೆ ಎಂದು ಸಭೆಯ ನಂತರ ಕುಮಾರಸ್ವಾಮಿ ಹೇಳಿದರು.ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಮತ್ತು ರಾಜ್ಯಸಭಾ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೊಂದಿಗೆ ಅಮಿತ್ […]

ಭಾರತ ಚುನಾವಣಾ ಆಯೋಗದಿಂದಕರ್ನಾಟಕಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ

ಬೆಂಗಳೂರು:ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ನಮ್ಮ ರಾಜ್ಯದ (ಕರ್ನಾಟಕ) ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.2023ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾ ಪ್ರಭು ಹಾಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶಿಖಾ.ಸಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.ದಿವ್ಯಾ ಅವರು […]

ವಿದ್ಯುತ್ ಶಾಕ್‌ಗೆ ೮ರ ಬಾಲಕ ಬಲಿ

ಚಿಕ್ಕಬಳ್ಳಾಪುರ:ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ.ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ರಸ್ತೆ ದಾಟಲು ಹೋದ ಸಂದರ್ಭ ಟ್ರಾನ್ಸ್ಫಾರ್ಮರ್ ಗ್ರೌಂಡಿAಗ್ ವೈರ್‌ನಿಂದ ವಿದ್ಯುತ್ ಶಾಕ್ ತಗುಲಿ ಬಾಲಕ ಕೊನೆಯುಸಿರೆಳೆದಿದ್ದಾನೆ.ರಸ್ತೆ ಅಗಲೀಕರಣಕ್ಕಾಗಿ ಟ್ರಾನ್ಸ್ಫಾರ್ಮರ್ ಬಳಿ ಮಣ್ಣು ತೆಗೆಯಲಾಗಿತ್ತು. ಮಣ್ಣು ತೆಗೆದ ಪರಿಣಾಮ ಹೊಂಡದಲ್ಲಿ ನೀರು ಶೇಖರಣೆಯಾಗಿದೆ. ರಸ್ತೆ ದಾಟಲು ಟ್ರಾನ್ಸ್ಫಾರ್ಮರ್ ಬದಿಯಲ್ಲಿ ಹೋಗುವಾಗ ಅವಘಡ ಸಂಭವಿಸಿದೆ. […]

ಉತ್ತರ ಕನ್ನಡ ಜಿಲ್ಲೆಯಲ್ಲಿ ಮರುಕಳಿಸಿದ ಮಂಗನಕಾಯಿಲೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಜಿಲ್ಲೆಯ ಸಿದ್ದಾಪುರದ ಇಬ್ಬರಲ್ಲಿ ಕಾಣಿಸಿಕೊಂಡಿದೆ.ಸಿದ್ದಾಪುರದ ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವರಲ್ಲಿ ಹಾಗೂ ಕೊರ್ಲಕೈ ಗ್ರಾಮದ 10 ವರ್ಷದ ಬಾಲಕನಲ್ಲಿ ಕೆ.ಎಫ್.ಡಿ ಪತ್ತೆಯಾಗಿದೆ. ತೀವ್ರ ಅನಾರೋಗ್ಯಕ್ಕೊಳಗಾದ 40 ವರ್ಷದ ವ್ಯಕ್ತಿಯನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಹಾಗೂ ಬಾಲಕನನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಹಿಂದೆ ಸಿದ್ದಾಪುರ ಭಾಗದಲ್ಲಿ ಮಂಗನಕಾಯಿಲೆ ಉಲ್ಭಣಗೊಂಡು ಸಾವು ಸಹ ಸಂಭವಿಸಿತ್ತು. ಇದೀಗ ಸಿದ್ದಾಪುರದಲ್ಲಿ ಮಂಗನ ಕಾಯಿಲೆ ಮತ್ತೆ ಕಾಣಿಸಿಕೊಂಡಿದ್ದು, ಹೊನ್ನಾವರ ಗಟ್ಟ […]

ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್

ಬೆಂಗಳೂರು: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್  ಹೆಚ್​.ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ನಗರದ ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ಘಟನೆ ನಡೆದಿದೆ. ಇಂದು ಬೆಳಗ್ಗೆ ಬಸ್​ನಲ್ಲಿ ಬೆಂಗಳೂರಿಗೆ ಪ್ರವೀಣ್ ಹಾಗೂ ಭಾವನಿ ದಂಪತಿ ಬಂದಿದ್ದಾರೆ. ಕೋರಮಂಗಲ ವಾಟರ್ ಟ್ಯಾಂಕ್ ಸಿಗ್ನಲ್​ನಲ್ಲಿ ಬಸ್ ಇಳಿದಿದ್ದಾರೆ. ಈ ವೇಳೆ ಮನೆ ಹೋಗುವ ಆತುರದಲ್ಲಿ ಬ್ಯಾಗ್ ಬಿಟ್ಟಿದ್ದಾರೆ. ಬಳಿಕ ಅಲ್ಲೇ ಡ್ಯೂಟಿಯಲ್ಲಿ ಇದ್ದ ಆಡುಗೋಡಿ ಸಂಚಾರಿ ಠಾಣೆಯ […]