September 15, 2026

ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ

ರಾಯಚೂರು: ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬರ ಪರಿಹಾರ, ಅತೀವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಇಡದಿದ್ದರೂ ಅವರಿಗೂ ಪರಿಹಾರ ಸಿಗುತ್ತಿತ್ತು. ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ ಎಂದರು. ಹಿಂದಿನ ಸರ್ಕಾರ ಇದ್ದಾಗ, ನಾನು ಕೃಷಿ ಸಚಿವನಿದ್ದಾಗಲೂ ನೋಡಿದ್ದೇನೆ. ಯಾರದ್ದೋ ಜಮೀನು ಮತ್ತೊಬ್ಬರಿಗೆ ಹಣ ಪಾವತಿಯಾಗಿತ್ತಿತ್ತು. ರೈತರ ಬೆಳೆಯೇ ಬೇರೆ ಪರಿಹಾರ ಬರುವುದೇ ಬೇರೆ […]

ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇದ್ದು, 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಬೆಂಗಳೂರು ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದರು. ಇದನ್ನು ಗಮನಿಸಿ ಜೋಡಿಯನ್ನು ತಡೆದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಜೋಡಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ […]

ಡಿಕೆ ಶಿವಕುಮಾರ್ ಸಿಎಂ ಆಗಲಿ

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಂದೆ ಸಿಎಂ ಆಗಲಿ ಎಂದು ಮಾಜಿ ಡಿಸಿಎಂ, ಶಾಸಕ ಅಶ್ವಥ್​ ನಾರಾಯಣ್ ಹಾರೈಸಿದ್ದಾರೆ. ಜನರನ್ನ ನೇರವಾಗಿ ತಲುಪುವ ಕೆಲಸ ಮಾಡುತ್ತಿದ್ದಾರೆ. ಈಗ ಡಿಸಿಎಂ ಆಗಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅಂತಾ ಆಶಿಸುತ್ತೇನೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಕೂಡ ಆಗಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದರು. ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ ಐದನೇ ಆವೃತ್ತಿಯ ಮಲ್ಲೇಶ್ವರ, ಗಾಂಧಿನಗರ, ಚಾಮರಾಜಪೇಟೆ ಸೇರಿದಂತೆ  ಮೂರು ವಿಧಾನಸಭೆ ಕ್ಷೇತ್ರದ ಕಾರ್ಯಕ್ರಮಕ್ಕೆ ಚಾಲನೆ […]

ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್​ ಶರ್ಮಿಳಾ ನೇಮಕಗೊಂಡಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ್ದರಿಂದ ಜನವರಿ 4 ರಂದು ಕಾಂಗ್ರೆಸ್‌ಗೆ ಸೇರಿದರು. ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್​ನಲ್ಲಿ ಈ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ […]

ಜನವರಿ 18 ರಿಂದ ಲಾಲ್​ಬಾಗ್​ ಫ್ಲವರ್​ ಶೋ ಆರಂಭ

ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ಲಾಲ್​ಬಾಗ್​ನಲ್ಲಿ 215ನೇ ಫ್ಲವರ್ ಶೋ ಆಯೋಜಿಸಲಾಗಿದೆ. ಜನವರಿ 18 ರಿಂದ 11 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ ಎಂದು ಲಾಲ್​ಬಾಗ್​ನ ನಿರ್ದೇಶಕ ರಮೇಶ್ ಹೇಳಿದರು. ಇಂದು (ಮಂಗಳವಾರ) ಲಾಲ್​ಬಾಗ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಳ್ಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಪ್ರದರ್ಶನ ಇರಲಿದೆ. ಪ್ರತಿವರ್ಷದಂತೆ ಈ ವರ್ಷವು ವಿಶೇಷ ಪ್ಲವರ್ ಶೋ ‌ಆಯೋಜನೆ ಮಾಡಿದ್ದೇವೆ. ಈ ಫ್ಲವರ್ ಶೋ‌ ಮೂಲಕ‌ ಪರಿಸರವನ್ನು ಹೇಗೆ […]

ಪೊಲೀಸರಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು:ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಸಿಎಂ, ಕರ್ತವ್ಯ ಲೋಪಗಳಾದರೆ ಅದಕ್ಕೆ ಡಿಸಿಪಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ಕರ್ತವ್ಯ ಲೋಪವಾದರೆ ಡಿಸಿಪಿಗಳೇ ಹೊಣೆರಾಜ್ಯದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಲಿವೆ ಎಂದರೆ […]

ತೆರಿಗೆ ಪಾವತಿಸಲೇಬೇಕು, ಎಲ್ಲವನ್ನೂ ಪುಕ್ಸಟೆ ಕೊಡಲಾಗದು

ಬೆಂಗಳೂರು:ಬಿಬಿಎಂಪಿ ತೆರಿಗೆ ವಿಚಾರದಲ್ಲಿ ಕೆಲವು ಸಮಸ್ಯೆಗಳಿರುವ ಬಗ್ಗೆ ಗಮನಕ್ಕೆ ಬಂದಿದೆ. ಕಾನೂನು ಪರಿಮಿತಿಯೊಳಗೆ ಸಾಧ್ಯವಾದಷ್ಟು ತೆರಿಗೆ ಕಡಿಮೆ ಮಾಡುತ್ತೇವೆ. ಹಾಗೆಂದು ಎಲ್ಲವನ್ನೂ ಪುಕ್ಸಟೆ ಕೊಡಲಾಗದು, ಅದಕ್ಕೆ ಅರ್ಥವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದರು. ನಗರ ವ್ಯಾಪ್ತಿಯ ಮಲ್ಲೇಶ್ವರ, ಚಾಮರಾಜಪೇಟೆ, ಗಾಂಧಿನಗರ ಜನರ ಸಮಸ್ಯೆ ಆಲಿಸಲು ಆಯೋಜಿಸಿರುವ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾತ್ರಿ 10 ಗಂಟೆಯಾಗಲಿ, ನಿಮ್ಮ ಸಮಸ್ಯೆಗಳನ್ನು ಆಲಿಸಿಯೇ ನಿರ್ಗಮಿಸುತ್ತೇನೆ. ನಿಮ್ಮ ಸಮಸ್ಯೆಗಳನ್ನು ದಯವಿಟ್ಟು ನೋಂದಾಯಿಸಿಕೊಳ್ಳಿ. ನನಗೆ ನಿಮ್ಮ ಸಮಸ್ಯೆಗಳ ಬಗ್ಗೆ […]

ಬಿಜೆಪಿ ಹೇಳಿದ ಹಾಗೆ ಕೇಳಿದ್ರೆ ನಾವು ಆಡಳಿತ ಮಾಡೋಕಾಗಲ್ಲ

ಬೆಂಗಳೂರು:ಬಿಜೆಪಿ ಅವರು ಹೇಳಿದಂತೆ ನಾವು ಕೇಳೋಕೆ ಶುರು ಮಾಡಿದ್ರೆ, ನಾವು ಆಡಳಿತ ಮಾಡೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.ಹಾವೇರಿ ರೇಪ್ ಕೇಸ್ ಪ್ರಕರಣದಲ್ಲಿ ಎಸ್‌ಐಟಿ ರಚನೆಗೆ ಆಗ್ರಹಿಸಿದ ವಿಚಾರ ಹಾಗೂ ಕೇಸ್‌ಗೆ ಸಂಬAಧಿಸಿದವರ ಬಂಧನ ಆಗಿದೆ ಎಂಬ ಸಂತ್ರಸ್ತೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗ ತನಿಖೆ ಆಗುತ್ತಿದೆ. ಸಂಪೂರ್ಣ ತನಿಖೆ ಆಗಲಿ. ಅಲ್ಲಿಯವರೆಗೂ ನಾನೇನು ಹೇಳಲ್ಲ. ಈಗಾಗಲೇ 7-8 ಜನ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಸಂತ್ರಸ್ತೆ […]

ಯೂಟ್ಯೂಬ್ ನೋಡಿ ಮೆಡಿಕಲ್ ಶಾಪ್‌ನಲ್ಲಿ ಚಿಕಿತ್ಸೆ

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಎಂಬಿಬಿಎಸ್ ಮಾಡಿಲ್ಲ ಅಂದ್ರೂ ವೈದ್ಯರೆಂದು ಹೇಳಿಕೊಂಡು ಜನರ ಜೀವನದ ಜೊತೆ ಆಟ ಆಡುತ್ತಿದ್ದಾರೆ. ಈ ಹಿಂದೆ ಸರ್ಕಾರ ನಕಲಿ ವೈದ್ಯರಿಗೆ ಕಡಿವಾಣ ಹಾಕಲು ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಆದರೂ ಕೂಡ ನಗರದಲ್ಲಿ ನಕಲಿ ವೈದ್ಯರು ಅಮಾಯಕರಿಗೆ ಚಿಕಿತ್ಸೆ ನೀಡಿ ಹಣ ಸಂಪಾದಿಸುತ್ತಿದ್ದಾರೆ. ಸದ್ಯ ಈಗ ಬೆಂಗಳೂರಿನಲ್ಲಿ ನಕಲಿ ವೈದ್ಯನೊಬ್ಬ ಸಿಕ್ಕಿಬಿದ್ದಿದ್ದಾನೆ. ಮೆಡಿಕಲ್ ಶಾಪ್ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ತಾನೊಬ್ಬ ವೈದ್ಯ ಎಂದು ಹೇಳಿಕೊಂಡು ಯೂಟ್ಯೂಬ್ ನೋಡಿ ಚಿಕಿತ್ಸೆ ನೀಡಿರುವ […]

‘ಪೂಜಿಸಲೆಂದೇ ಹೂಗಳ ತಂದೆ’; ರಾಮನ ಸ್ಮರಿಸುವ ಕನ್ನಡ ಹಾಡಿಗೆ ಮೋದಿ ಫಿದಾ

ನವದೆಹಲಿ: ಕನ್ನಡದ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾದ ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿಗೆ ಪ್ರಧಾನಿ ಮೋದಿಫಿದಾ ಆಗಿದ್ದಾರೆ. ಖ್ಯಾತ ಗಾಯಕಿಯೊಬ್ಬರು ಹಾಡಿದ ಈ ಹಾಡಿನ ತುಣುಕನ್ನು ಮೋದಿ ಎಕ್ಸ್‌ನಲ್ಲಿ (X) ಹಂಚಿಕೊಂಡಿದ್ದಾರೆ. ಶಿವಶ್ರೀ ಸ್ಕಂದ ಪ್ರಸಾದ್ ಹಾಡಿರುವ ವಿಡಿಯೋವನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಶೇರ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಶ್ರೀರಾಮನ ಶಕ್ತಿಯನ್ನು ಬಿಂಬಿಸುವ, ಎತ್ತಿಹಿಡಿಯುವ ಅದ್ಭುತ ಹಾಡಿದು. ಇಂತಹ ಪ್ರಯತ್ನಗಳು ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸುತ್ತದೆ ಎಂದು ಗುಣಗಾನ ಮಾಡಿದ್ದಾರೆ.  ಟ್ವೀಟ್‌ನಲ್ಲಿ ಏನಿದೆ?ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ […]