ಕಲ್ಲಿದ್ದಲು ಅನೀಲಿಕರಣ ಯೋಜನೆಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ
ಬೆಂಗಳೂರು:ಕಲ್ಲಿದ್ದಲು ಅನಿಲೀಕರಣ ಯೋಜನೆಯನ್ನು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮುಂದಿಡಲಾಗುವುದು. ನಂತರ ಔಪಚಾರಿಕವಾಗಿ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭೂಗತ ಕಲ್ಲಿದ್ದಲು ಅನೀಲಿಕರಣ ಯೋಜನೆಗೆ ಶೇ.೫೦ ರಷ್ಟು ರಿಯಾಯಿತಿ ನೀಡಲಾಗುವುದು. ವಾಣಿಜ್ಯ ಗಣಿಗಳಲ್ಲಿ ಭೂಗತ ಗಣಿಗಾರಿಕೆ ಮಾಡುವವರಿಗೆ ಕೇಂದ್ರ ಸರ್ಕಾರ ಆಯಾ ರಾಜ್ಯಗಳೊಂದಿಗೆ ಆದಾಯ ಹಂಚಿಕೆಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡುತ್ತದೆ ಎಂದಿದ್ದಾರೆ.ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆ ಮೂಲಕ ಭೂಗತ ಗಣಿಗಾರಿಕೆಗೆ ಪ್ರವೇಶಿಸುವವರಿಗೆ ಈ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. […]







































































































































































































































































































































































































































































































































































































































































































































































































































































































































































































































































































































