ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದಡಿಕೆಶಿಗೆ ದೋಸ್ತಿಗಳು ತಿರುಗೇಟು
ಬೆಂಗಳೂರು:ರಾಮಮಂದಿರ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ರಾಜಕೀಯ ಮುಂದುವರಿದಿದೆ. ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ದೋಸ್ತಿ ಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು, ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ. ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ. ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು […]







































































































































































































































































































































































































































































































































































































































































































































































































































































































































































































































































































































