ಒಬ್ಬ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು
ಬೆಂಗಳೂರು:ಕರಸೇವಕನ ಬಂಧನ ಖಂಡಿಸಿ ಬಿಜೆಪಿ ನಡೆಸಿರುವ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮAಡಲರಾಗಿದ್ದಾರೆ. ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧ ಬೇಕಾದ್ರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ಜೈಲಲ್ಲಿ ಹಿಂದೂಗಳೇ ಹೆಚ್ಚಿದ್ದಾರೆ. […]







































































































































































































































































































































































































































































































































































































































































































































































































































































































































































































































































































































